ಬೇತಮಂಗಲ: ಸ್ಪಾರ್ಕ್ ಅಕಾಡೆಮಿ ಹಾಗೂ ಸೂರ್ಯ ಫೌಂಡೇಶನ್ ವತಿಯಿಂದ ಚೊಕ್ಕರ ಬಂಡೆ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಗೀತಾ ಅಂತೋಣಿ ಅವರಿಗೆ “ಅಪರ್ಣ ನಿರೂಪಣ ರತ್ನ” ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದ್ದು ಕೆಜಿಎಫ್ ತಾಲೂಕು ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಅಧ್ಯಕ್ಷ ದೇವೇರಹಳ್ಳಿ ಎಂ. ನಾರಾಯಣಸ್ವಾಮಿ ಹಾಗೂ ಪದಾಧಿಕಾರಿಗಳು ಸಾಧಕಿ ಮುಖ್ಯ ಶಿಕ್ಷಕಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಈ ವೇಳೆ ದೇವೇರಹಳ್ಳಿ ನಾರಾಯಣಸ್ವಾಮಿ ಮಾತನಾಡಿ, ಮುಖ್ಯ ಶಿಕ್ಷಕಿ ಗೀತಾ ಅವರು ಆಂಧ್ರ ಗಡಿಯ ಚೊಕ್ಕರ ಬಂಡೆ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ಅವರ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಸ್ಪಾರ್ಕ್ ಅಕಾಡೆಮಿ ಹಾಗೂ ಸೂರ್ಯ ಫೌಂಡೇಶನ್ ಸಂಸ್ಥೆಯವರು ಬೆಂಗಳೂರಿನಲ್ಲಿ ಅಭಿನಂದನಾ ಸಮಾರಂಭದಲ್ಲಿ ಪ್ರಶಸ್ತಿ ಹಾಗೂ ಸನ್ಮಾನವನ್ನು ಮಾಡಿ ಗೌರವಿಸಿದೆ.
ಇದನ್ನು ಓದಿದ್ದೀರಾ..? ಗಡಿಯಲ್ಲಿ ಸೈನಿಕರು, ನಾಡಲ್ಲಿ ಪೊಲೀಸರು ದೇಶವನ್ನು ಕಾಯುತ್ತಿದ್ದಾರೆ: ಪ್ರಧಾನ ಜಿಲ್ಲಾ ನ್ಯಾಯಾಧೀಶ ಟಿ.ಎಸ್.ರಾಮಲಿಂಗೇಗೌಡ
ಆದ್ದರಿಂದ ನಮ್ಮ ಕೆಜಿಎಫ್ ತಾಲೂಕು ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಅಧ್ಯಕ್ಷ ದೇವೇರಹಳ್ಳಿ ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ತ್ಯಾಗರಾಜ್, ಜಿಲ್ಲಾ ಪರಿಷತ್ ಸದಸ್ಯ ಶಂಕರ್ ,ಹಿರಿಯ ಉಪಾಧ್ಯಕ್ಷೆ ಸರಸ್ವತಿ ,ಮುರುಗೇಶ್, ಆಂಜನೇಯ ರೆಡ್ಡಿ ಹಾಗೂ ಎಲ್ಲಾ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.





