ಮೈಸೂರು | ದಸರಾ ನಿಮಿತ್ತ 395 ಹೆಚ್ಚುವರಿ ಪೌರಕಾರ್ಮಿಕರ ನೇಮಕ: ಎಂಸಿಸಿ

Date:

ದಸರಾ ನಿಮಿತ್ತ ನಗರದಲ್ಲಿ ಪ್ರವಾಸಿಗರು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದ್ದು, ನಗರದ ನೈರ್ಮಲ್ಯ ಕಾಪಾಡಲು 395 ಹೆಚ್ಚುವರಿ ಪೌರಕಾರ್ಮಿಕರನ್ನು ನೇಮಿಸಿಕೊಳ್ಳಲು ಮೈಸೂರು ಮಹಾನಗರ ಪಾಲಿಕೆ (ಎಂಸಿಸಿ) ಮುಂದಾಗಿದೆ.

ದಸರಾ ಕಾರ್ಯಕ್ರಮ ನಡೆಯುವ ರಸ್ತೆಗಳು, ಪ್ರವಾಸಿ ತಾಣಗಳು ಹಾಗೂ ಇತರ ಸ್ಥಳಗಳನ್ನು ಸ್ವಚ್ಚವಾಗಿಡಲು ಮತ್ತು ಅಚ್ಚುಕಟ್ಟಾಗಿಡಲು ಯಂತ್ರೋಪಕರಣ ಮತ್ತು ಹೆಚ್ಚುವರಿ ಪೌರಕಾರ್ಮಿಕರನ್ನು ನಿಯೋಜಿಸಲಾಗುತ್ತಿದೆ.

ಮೈಸೂರು ನಗರದಲ್ಲಿ ದಿನವೊಂದಕ್ಕೆ ಸರಾಸರಿ 150 ಟನ್‌ ಪ್ಲಾಸ್ಟಿಕ್‌ ತ್ಯಾಜ್ಯ ಮತ್ತು 10 ಟನ್‌ ತ್ಯಾಜ್ಯ ಸೇರಿ 500 ಟನ್ ಘನತ್ಯಾಜ್ಯ ಸಂಗ್ರಹವಾಗುತ್ತದೆ. ಪ್ರವಾಸಿತಾಣಗಳು, ದಸರಾ ನಡೆಯುವ ಸ್ಥಳ, ಮುಖ್ಯವಾಗಿ ಆಹಾರ ಮೇಳದ ಸ್ಥಳ ಮತ್ತು ಅರಮನೆ ಸುತ್ತಮುತ್ತಲಿನ ಪ್ರದೇಶದ ಸ್ವಚ್ಚತೆ ಒಂದು ಸವಾಲಿನ ಕೆಲಸವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೆ, ದಸರಾ ನಡೆಯುವ ಅಕ್ಟೋಬರ್‌ 15ರಿಂದ ಅಕ್ಟೋಬರ್‌ 24ರವರೆಗೆ ಲಕ್ಷಾಂತರ ಜನ ಪ್ರವಾಸಿಗರು ನಗರಕ್ಕೆ ಭೇಟಿ ನೀಡುವುವುದರಿಂದ ಇನ್ನೂ ಹೆಚ್ಚಿನ ಕಸ ಸಂಗ್ರಹವಾಗುತ್ತದೆ. ಹೀಗಾಗಿ, ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಮೂಲಕ ನಗರವನ್ನು ಸ್ವಚ್ಚವಾಗಿಡಲು ಎಂಸಿಸಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸದ್ಯ 2,100 ಪೌರಕಾರ್ಮಿಕರು ಎಂಸಿಸಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಎಂಸಿಸಿ ಇನ್ನೂ 395 ಪೌರಕಾರ್ಮಿಕರನ್ನು ನೇಮಿಸಿಕೊಂಡು, ಜನ ಸಂದಣಿ ಇರುವ ಸ್ಥಳಗಳಲ್ಲಿ ನಿಯೋಜಿಸಲಾಗುತ್ತದೆ. ಯುವದಸರಾ, ವಸ್ತುಪ್ರದರ್ಶನ ಮೈದಾನ, ಚಾಮುಂಡಿ ಬೆಟ್ಟ ಹಾಗೂ ಮೃಗಾಲಯದ ಸ್ಥಳಗಳಲ್ಲಿ ಈ ಪೌರಕಾರ್ಮಿಕರನ್ನು ಸೇವೆಗೆ ನೇಮಿಸಲಿದೆ. ಈ ಪೌರ ಕಾರ್ಮಿಕರು ಶಿಫ್ಟ್‌ ಆಧಾರದ ಮೇಲೆ ಕೆಲಸ ಮಾಡಲಿದ್ದಾರೆ. ಅಲ್ಲದೆ, ಈ ವರ್ಷದ ಹತ್ತು ದಿನಗಳಿಗೆ ನಾಲ್ಕು ವಿಭಿನ್ನ ಪ್ಯಾಕೇಜ್‌ಗಳಲ್ಲಿ ಈ ಪೌರಕಾರ್ಮಿಕರನ್ನು ನಿಯೋಜಿಸಲು ಯೋಜನೆ ರೂಪಿಸಲಾಗಿದೆ. ನಿಯಮಿತ ಪೌರಕಾರ್ಮಿಕರು ತಮ್ಮ ವ್ಯಾಪ್ತಿಯ ಎಲ್ಲ 65 ವಾರ್ಡ್‌ಗಳನ್ನು ಸ್ವಚ್ಛವಾಗಿಡಲು ಶ್ರಮಿಸಲಿದ್ದಾರೆ ಎಂದು ಪಾಲಿಕೆ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...