ಮೈಸೂರು | ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ; ಮೀಲಾದ್ ಘೋಷಣಾ ಜಾಥಾ

Date:

ಮೈಸೂರು ನಗರದ ಅಶೋಕ ರಸ್ತೆಯಲ್ಲಿರುವ ಮೀಲಾದ್ ಪಾರ್ಕ್ ವೃತ್ತದಲ್ಲಿ ‘ಸುನ್ನಿ ಯುವಜನ ಸಂಘ‘ದ ವತಿಯಿಂದ ಸೋಮವಾರ ಅಯೋಜಿಸಿದ್ದ ‘ಪ್ರವಾದಿ ಮುಹಮ್ಮದ್ ಪೈಗಂಬರ್‌‘ ಅವರ ಜನ್ಮ ದಿನಾಚರಣೆಯ ಅಂಗವಾಗಿ ಹಜರತ್ ಮೌಲಾನಾ ಮೊಹಮ್ಮದ್ ಉಸ್ಮಾನ್ ಷರೀಫ್ ಸಾಹೇಬ್, ಸರ್ ಖಾಜಿ ನೇತೃತ್ವದಲ್ಲಿ ಜಮಾಅತರ ಸಹಯೋಗದೊಂದಿಗೆ ಮೀಲಾದ ಘೋಷಣಾ ಜಾಥಾ ನಡೆಯಿತು.

ಮಸ್ಜಿದ್ ಅಜಮ್ ಮರ್ಕಾಜ್ ಅಹಲೆ, ಸುನ್ನತ್-ವಲ್ ಜಮಾತ್ ಮಸೀದಿಯಿಂದ ಹೊರಟ ಮೀಲಾದ್ ಮೆರವಣಿಗೆ ಅಶೋಕ ರಸ್ತೆ, ಫೌಂಟೇನ್ ಸರ್ಕಲ್, ಹಜರತ್ ಟಿಪ್ಪು ಸುಲ್ತಾನ್ ಸರ್ಕಲ್ ಮೂಲಕ ಹಾದು ಹೋಗಿ ಮೈಸೂರು ಬೆಂಗಳೂರು ಹೆದ್ದಾರಿಯ ಮಿಲೇನಿಯಂ ಸರ್ಕಲ್ ನಲ್ಲಿ ಸಮಾಪ್ತಿಗೊಂಡಿತು.

ಮಸೀದಿಗಳಲ್ಲಿ‌ ನಡೆದ ಸಭಾ ಕಾರ್ಯಕ್ರಮಗಳಿಗೆ ಪ್ರವಾದಿ ಜೀವನದ ಸಂದೇಶ ನೀಡಲಾಯಿತು. ನಗರದ ಬಂದರ್‌ನಲ್ಲಿ ಹಲವು ಮಕ್ಕಳಿಂದ ಬೃಹತ್ ಮೀಲಾದ್ ರ‍್ಯಾಲಿಯು ಸಾರ್ವಜನಿಕರ ಗಮನ ಸೆಳೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾಥಾದಲ್ಲಿ ದಪ್ಫು ಪ್ರದರ್ಶನ ಸಹಿತ ಇಸ್ಲಾಮಿಕ ಸಾಂಸ್ಕೃತಿಕ ಕಾರ್ಯಕ್ರಮದ ಜೊತೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ಪಾನೀಯ ನೀಡಲಾಯಿತು. ಮೀಲಾದ್ ರ‍್ಯಾಲಿಯಲ್ಲಿ ಮಕ್ಕಳಲ್ಲದೆ, ಹಿರಿಯರೂ ಪಾಲ್ಗೊಂಡು ಮಿಲಾದುನ್ನಬಿಯ ಸಡಗರ, ಸಂಭ್ರಮಕ್ಕೆ ಸಾಕ್ಷಿಯಾದರು.

ಬೆಂಗಳೂರಿನ ಎಸ್.ವೈ.ಎಸ್. ರಾಜ್ಯ ಸಮಿತಿ ಅಧ್ಯಕ್ಷ ಬಷೀರ್ ಸಾದಿ ಸಾಹೇಬ್ ಮಾತನಾಡಿ “ಮುಹಮ್ಮದ್ ಪೈಗಂಬರ್ ಅವರ ಸಿದ್ಧಾಂತ ಕೇವಲ ಆಧ್ಯಾತ್ಮ ಸಿದ್ಧಾಂತವಾಗಿರಲಿಲ್ಲ. ಮಸೀದಿ, ಮದ್ರಸ, ಧಾರ್ಮಿಕ ಆಚಾರ ವಿಚಾರಗಳನ್ನು ಪಸರಿಸುವ ಸಿದ್ಧಾಂತವಾಗಿದ್ದು, ಮಾನವರು ಎದುರಿಸುವ ಎಲ್ಲ ಸಮಸ್ಯೆಗಳಿಗೆ ಸಮರ್ಪಕವಾಗಿ ನೆರವು ನೀಡುವುದು ಅವರ ಸಿದ್ದಾಂತವಾಗಿತ್ತು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮನುವಾದಿಗಳ ವಿಷ ತಲೆಗೇರಿಸಿಕೊಂಡ ಬಿಜೆಪಿಗರು; ಮುಸ್ಲಿಮರ ಕಂಡರೆ ದ್ವೇಷಕಾರುವುದನ್ನು ಬಿಡಿ : ಸಚಿವ ಮಹದೇವಪ್ಪ

ಕಾರ್ಯಕ್ರಮದಲ್ಲಿ ಸುನ್ನಿ ಯುವಜನ ಸಂಘದ ರಾಜ್ಯಾಧ್ಯಕ್ಷ ಬಷೀರ್ ಶಾದಿ, ಮೌಲಾನ ಅಬುಸಲಾಂ ರಜ್ವಿ, ರಾಜ್ಯ ಕಾರ್ಯದರ್ಶಿ ಸಯ್ಯದ್ ಇಲಿಯಾಸ್ ತಂಗಳ್ ಎಮ್ಮೆಮಾಡು, ಕ್ಯಾಬಿನೆಟ್ ಕಾರ್ಯದರ್ಶಿ ಸಯ್ಯದ್ ಹಮೀಮ್ ಶಿಹಾಬ್ ಬಾಳೆಹೊನ್ನೂರು, ರಾಜ್ಯ ಸಮಿತಿ ಸದಸ್ಯ ಸಯ್ಯದ್ ಶಾಫಿ ನಯೀಮಿ ಮಾರನಳ್ಳಿ, ಮೈಸೂರು ವಖ್ಫ್ ಅಧ್ಯಕ್ಷ ಆಜೀಜುಲ್ಲಾ ಅಜ್ಜು, ಮೌಲಾನ
ಉಸ್ಮಾನ್ ಖಾಜಿ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...