ರಾಜ್ಯ ಸರಕಾರದ ಕೈಗಾರಿಕೆಗಾಗಿ ಬಲವಂತದ ಭೂ ಸ್ವಾಧೀನದ ಸಿಪಿಐಎಂ ಪಕ್ಷ ಖಂಡನೆ

Date:

ಬಾಗೇಪಲ್ಲಿ:- ಬೆಂಗಳೂರು ಆನೇಕಲ್ ಹತ್ತಿಬೆಲೆ ಪ್ರದೇಶದಲ್ಲಿ ಪ್ರತಿಷ್ಠಿತ ಇನ್ಫೋಸಿಸ್ ಕಂಪನಿಯು, ಕೈಗಾರಿಕಾಭಿವೃದ್ಧಿ ಹೆಸರಿನಲ್ಲಿ ಕೆಐಏಡಿಬಿಯ ಮೂಲಕ ಈ ಹಿಂದೆ ಪಡೆದ ಸುಮಾರು 1,000 ಕೋಟಿ ರೂಗೂ ಅಧಿಕ ಮೌಲ್ಯದ
55.5 ಎಕರೆ ಜಮೀನನ್ನು ಇದೀಗ 250 ಕೋಟಿ ರೂಗಳಿಗೆ ಮಾರಾಟ ಮಾಡಿದೆ.

ಕೈಗಾರಿಭಿವೃದ್ಧಿ ಹೆಸರಿನಲ್ಲಿ ಸರಕಾರದಿಂದ ಅತ್ಯಂತ ಕಡಿಮೆ ಬೆಲೆಗೆ ಅಥವಾ ದಾನವಾಗಿ ಪಡೆದ ಜಮೀನನ್ನು ರಿಯಲ್ ಎಸ್ಸೇಟ್ ಮಾಡಿ ಲಾಭ ಮಾಡಿಕೊಂಡ ಇನ್ಫೋಸಿಸ್ ಸಂಸ್ಥೆಯ ಅಕ್ರಮವನ್ನು ಸಿಪಿಐಎಂ ಬಲವಾಗಿ ಖಂಡಿಸುತ್ತದೆ
ಎಂದು ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರು ಮುನಿವೆಂಕಟಪ್ಪ ಎಂಪಿ ತಿಳಿಸಿದರು.

ಅವರು ಪಟ್ಟಣದ ಸಿಪಿಐಎಂ ಪಕ್ಷದ ಕಛೇರಿ ಸುಂದರಯ್ಯ ಭವನದಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದರು.
ಈ ಕೂಡಲೆ ಸದರಿ ಭೂಮಿಯ ಮಾರಾಟದ ಪ್ರಕ್ರಿಯೆಯನ್ನು ತಡೆದು ರಾಜ್ಯ ಸರಕಾರ ವಾಪಾಸು ಪಡೆಯಬೇಕೆಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸುತ್ತದೆ ಎಂದು ಹೇಳಿದರು.

ರಾಜ್ಯ ಸರಕಾರ ಕೆಐಏಡಿಬಿ ಮೂಲಕ ರೈತರಿಂದ ಅತ್ಯಂತ ಕಡಿಮೆ ಬೆಲೆಗೆ ಮತ್ತು ಬಲವಂತವಾಗಿ ಸ್ವಾಧೀನ ಮಾಡಿ, ನಂತರ ಕೇವಲ ತಲಾ ಎಕರೆಗೆ 100 ರೂಗಳಂತೆ ಕೈಗಾರಿಕಾಭಿವೃದ್ಧಿ ಹೆಸರಿನಲ್ಲಿ ಸದರಿ ಕಂಪನಿಗೆ ಗುತ್ತಿಗೆಗೆ ನೀಡಿದೆ. ನಂತರ ಅತ್ಯಂತ ಕಡಿಮೆ ಬೆಲೆಗೆ ( ಹಳೆಯ) ಅವರಿಗೆ ಮಾರಾಟ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ಪೋಸಿಸ್ ಸಂಸ್ಥೆಯು ಅದನ್ನು ಸಂಸ್ಥೆ ಹಾಗು ಕೈಗಾರಿಕಾಭಿವೃದ್ಧಿಗೆ ಬಳಸದೆ ರಿಯಲ್ ಎಸ್ಟೇಟ್ ಮಾಡಿ ಲಾಭ ಮಾಡಿಕೊಂಡು ವಂಚಿಸಿದೆ. ಇದು, ರಾಜ್ಯ ಸರಕಾರ ಕೈಗಾರಿಕಾಭಿವೃದ್ದಿ ಹೆಸರಲ್ಲಿ ರೈತರಿಂದ ಬಲವಂತವಾಗಿ ಸ್ವಾಧೀನ ಮಾಡಿದ ಜಮೀನುಗಳು ಹೇಗೆ ಕಾರ್ಪೋರೇಟ್ ಸಂಸ್ಥೆಗಳ ರಿಯಲ್ ಎಸ್ಟೇಟ್ ದಂಧೆಗೆ ಮತ್ತು ಅವರ ಲೂಟಿಗೆ ಒಳಗಾಗುತ್ತಿವೆ ಎಂಬುದನ್ನು ಎತ್ತಿ ತೋರಿಸುತ್ತಿದೆ. ಮಾತ್ರವಲ್ಲಾ, ರೈತರಿಂದ ಬಲವಂತವಾಗಿ ಸ್ವಾಧೀನ ಮಾಡಿಕೊಂಡು ಕಾರ್ಪೋರೇಟ್ ಸಂಸ್ಥೆಗಳ ಲೂಟಿಕೋರತನಕ್ಕೆ ವರ್ಗಾಯಿಸುತ್ತಿದೆ ಎಂಬುದನ್ನು ಬಯಲುಗೊಳಿಸುತ್ತದೆ ಎಂದು ಸಿಪಿಐಎಂ ವಿವರಿಸಿದೆ.

ಇದನ್ನು ಓದಿದ್ದೀರಾ..? ಅಪಘಾತದಲ್ಲಿ ಅಜ್ಜವಾರದ 4 ಮಂದಿ ಯುವಕರು ಸಾವು: ಮೃತರ ಸ್ವ-ಗ್ರಾಮಕ್ಕೆ ಶಾಸಕ ಪ್ರದೀಪ್ ಈಶ್ವರ್ ಭೇಟಿ

ಈ ಭೂಮಿಯನ್ನು ಸರ್ಕಾರ ನಿರ್ದಿಷ್ಟ ಉದ್ದೇಶಕ್ಕಾಗಿ ರಿಯಾಯಿತಿ ದರದಲ್ಲಿ ಹಂಚಿಕೆ ಮಾಡಿದೆ. ಆ ಉದ್ದೇಶಕ್ಕಾಗಿ ಭೂಮಿಯನ್ನು ಬಳಸಲಾಗಿಲ್ಲ ಎಂದ ಮೇಲೆ, ಇನ್ಫೋಸಿಸ್ ಅದನ್ನು ವಾಣಿಜ್ಯ ದರಕ್ಕೆ ಮಾರಾಟ ಮಾಡುವ ಹಕ್ಕನ್ನು ಹೊಂದಿಲ್ಲ. ಹೀಗಾಗಿ ಈ ಭೂಮಿ ಮತ್ತು ಅದರ ಆದಾಯವನ್ನು ಕರ್ನಾಟಕ ಸರ್ಕಾರಕ್ಕೆ ಹಿಂತಿರುಗಿಸಬೇಕೆಂದು
ಸಿಪಿಐಎಂ ರಾಜ್ಯ ಸಮಿತಿ ಕಾರ್ಯದರ್ಶಿ ಮಂಡಳಿ ಸದಸ್ಯರು ಮುನಿವೆಂಕಟಪ್ಪ ಎಂಪಿ ತಿಳಿಸಿದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...