ರೈತರು ಸಹಕಾರ ಸಂಘಗಳಲ್ಲಿ ವ್ಯವಹರಿಸಿ ಸಂಘದ ಉನ್ನತಿಗೆ ಸಹಕರಿಸಿ

Date:

ದೇವನಹಳ್ಳಿ:ರೈತರು ಸಹಕಾರ ಸಂಘಗಳಲ್ಲಿ ವ್ಯವಹರಿಸಿ ಸಂಘದ ಉನ್ನತಿಗೆ ಸಹಕರಿಸಿ ಖಾಸಗಿ ಬ್ಯಾಂಕ್‌ಗಳಲ್ಲಿ ಠೇವಣೆ ಇಡುವ ಬದಲು ಸಹಕಾರಿ ಸಂಘದಲ್ಲೇ ಇಟ್ಟು ಹೆಚ್ಚು ಬಡ್ಡಿ ಗಳಿಸುವುದರೊಂದಿಗೆ ಸಂಘವನ್ನು ಮತ್ತಷ್ಟು ಬಲಿಷ್ಠಗೊಳಿಸಿ ಎಂದು ಜಿಲ್ಲಾ ಬ್ಯಾಂಕ್ ನಿರ್ದೇಶಕ ಎಂ.ರಮೇಶ್ ತಿಳಿಸಿದರು

ದೇವನಹಳ್ಳಿ ಪಟ್ಟಣದ ಕೋಟೆ ಬೀದಿಯಲ್ಲಿರುವ ಕಸಬಾ ವಿವಿದೊದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಕಛೇರಿಯಲ್ಲಿ ನಡೆದ 2024-25ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು ಸಹಕಾರಿ ಬ್ಯಾಂಕ್‌ನಿಂದ ರೈತರಿಗೆ ಕುರಿ, ಹಸು ಕೋಳಿ ಸಕಾಣೆಗೆ ಸಾಲ ಸೌಲಭ್ಯ ದೊರೆಯುತ್ತಿದ್ದು ರೈತರು ಅದರ ಸದುಪಯೋಗಪಡೆದುಕೊಳ್ಳಬೇಕು ಎಂದರು.

ದೇವನಹಳ್ಳಿ ಟೌನ್ ಕಸಬಾ ವಿವಿದೊದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಎನ್.ರಘು ಮಾತನಾಡಿ ಸಂಘದಲ್ಲಿ ಪ್ರಸಕ್ತ ಸಾಲಿನಲ್ಲಿ 21 ಕೋಟಿ ವ್ಯವಹಾರ ಮಾಡಲಾಗಿದ್ದು 4 ಕೋಟಿ ಕೆಸಿಸಿ ಸಾಲ ನೀಡಲಾಗಿದೆ. 3 ಕೋಟಿ ಎಂ.ಟಿ.ಆರ್ ಸಾಲ ನೀಡಲಾಗಿದ್ದು ರೈತರು ಇದರ ಸದುಪಯೋಗಪಡೆದುಕೊಂಡಿದ್ದಾರೆ ಸಂಘಕ್ಕೆ 5 ಲಕ್ಷ ನಿವ್ವಳ ಲಾಭ ಬಂದಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇವನಹಳ್ಳಿ ಟೌನ್ ಕಸಬಾ ವಿವಿದೊದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಉಪಾಧ್ಯಕ್ಷ ಸುನಿಲ್‌ಕುಮಾರ್ ಮಾತನಾಡಿ ಸಂಘದ ಎಲ್ಲಾ ಸದಸ್ಯರ ಶ್ರಮದಿಂದ ಸಂಘ ಲಾಭದಾಯಕವಾಗಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ 8 ರಿಂದ 10 ಕೋಟಿವರೆಗೆ ರೈತರಿಗೆ ಸಾಲ ನೀಡುವ ಗುರಿ ಹೊಂದಿದ್ದೇವೆ. ಸಹಕಾರ ಸಂಘದಲ್ಲಿ ಯಾವುದೇ ಪಕ್ಷಭೇದವಿಲ್ಲದೆ ಎಲ್ಲರಿಗೂ ಸಾಲ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ದೇವನಹಳ್ಳಿ ಟೌನ್ ಕಸಬಾ ವಿವಿದೊದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸಿ.ಇ.ಓ ಎನ್.ವೆಂಕಟೇಶ್ ಮಾತನಾಡಿ ಸಂಘದಲ್ಲಿ ರಸಗೊಬ್ಬರ ಮಳಿಗೆ ಪ್ರಾರಂಭಿಸಲು ಅನುಮತಿ ದೊರೆತಿದ್ದು ಅತಿ ಶೀಘ್ರದಲೇ ರಸಗೊಬ್ಬರ ಮಳೆಗೆ ಪ್ರಾರಂಬಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಸದಸ್ಯರು ಹೆಚ್ಚು ಠೇವಣೆಯನ್ನು ಸಂಘದಲ್ಲಿಟ್ಟು ಆ ಹಣವನ್ನು ಅವಶ್ಯಕತೆ ಇರುವ ಸದಸ್ಯರಿಗೆ ಚಿನ್ನಾಬರಣ ಸಾಲ, ಮನೆ ಸಾಲ ನೀಡಿ ಸಂಘಕ್ಕೆ ಆದಾಯ ಬರುವಂತೆ ಮಾಡಲಾಗುವುದು ಎಂದರು.

ಇದನ್ನು ಓದಿದ್ದೀರಾ..?ಶ್ರೀನಿವಾಸಸಾಗರದಲ್ಲಿ ದೋಣಿ ವಿಹಾರಕ್ಕೆ ಚಾಲನೆ ನೀಡಿ ಶುಭ ಕೋರಿದ ಶ್ರೀಮಂಗಳನಾಥಸ್ವಾಮೀಜಿ

ಇದೆ ವೇಳೆ ಕಸಬಾ ವಿವಿದೊದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ನಿರ್ದೇಶಕರಾದ ಜಿ.ಸಿ.ಮಂಜುನಾಥ್, ಎನ್.ರಾಜು, ಎಸ್.ಗೋಪಾಲ್, ನರಸಿಂಹಮೂರ್ತಿ, ಸೊಸೈಟಿ ರಾಜಣ್ಣ, ಕೆ.ಅನಿಲ್‌ಕುಮಾರ್, ಪಿ.ಎ.ಗಾಯಿತ್ರಿದೇವಿ, ಮಂಜುಳಾ, ಸಿ.ಮಂಜುನಾಥ್, ಬಿಡಿಸಿಸಿಸಿ ಬ್ಯಾಂಕ್‌ನ ಮೇಲ್ವಿಚಾರಕ ಸಿ.ಎಂ.ಮಂಜುನಾಥ್, ಲೆಕ್ಕಿಗ ವಿ.ರಾಜೇಶ್, ಸಹಾಯಕ ಸತೀಶ್ ಸದಸ್ಯರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...