ರೈತರ ಸಹಕಾರಿ ಸಂಸ್ಥೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ: ಕೊತ್ತೂರು ಮಂಜುನಾಥ್

Date:

ಕೋಲಾರ: ಜಿಲ್ಲೆಯಲ್ಲಿರುವ ಕೃಷಿ ಪತ್ತಿನ ಸಹಕಾರಿ ಸಂಘಗಳು, ತಾಲೂಕು ಸೊಸೈಟಿಗಳು, ಹಾಲಿನ ಡೇರಿಗಳು, ಪಿಎಲ್ಡಿ ಮತ್ತು ಡಿಸಿಸಿ ಬ್ಯಾಂಕುಗಳು ರೈತರ ಜೀವನಾಡಿಯ ಸಂಸ್ಥೆಗಳಾಗಿದ್ದು ಅವುಗಳನ್ನು ಕಾಪಾಡಿಕೊಂಡು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ತಾಲೂಕಿನ ವೇಮಗಲ್ ಹೋಬಳಿಯ ವೀರೇನಹಳ್ಳಿ ಗ್ರಾಮದಲ್ಲಿ ಗುರುವಾರ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು ರೈತರು ಇದ್ದರೆ ಅಷ್ಟೇ ಜೀವನ ಅವರು ಏನಾದರೂ ಆಹಾರ ಬೆಳೆಯದೆ ಹೋದರೆ ಊಟಕ್ಕೂ ತೊಂದರೆಯಾಗುವ ಸಂದರ್ಭ ಬರುತ್ತದೆ ರೈತರು ಯಾವುದೇ ಕಾರಣಕ್ಕೂ ಜಮೀನು ಮಾರಾಟ ಮಾಡಲಿಕ್ಕೆ ಹೋಗಬೇಡಿ ಮುಂದೆ ಜಮೀನುಗಳಿಗೂ ಬಂಗಾರ ಅಂತಹ ಬಲೆ ಬರುತ್ತದೆ ಎಂದರು

ಹಾಲು ಉತ್ಪಾದಕರು ಕಡ್ಡಾಯವಾಗಿ ಯಶಸ್ವಿನಿ ಯೋಜನೆಯ ಕಾರ್ಡ್ ಮಾಡಿಸಬೇಕು ಡೇರಿಯಲ್ಲಿ ಯಾವುದೇ ಕಾರಣಕ್ಕೂ ರಾಜಕಾರಣ ಮಾಡಬಾರದು ಪಕ್ಷಾತೀತವಾಗಿ ಡೇರಿಯನ್ನು ಮುನ್ನಡೆಸಿಕೊಂಡು ಹೋಗಬೇಕು ಡೇರಿ ವಿಚಾರದಲ್ಲಿ ಸರ್ಕಾರದಿಂದ ಮತ್ತು ಒಕ್ಕೂಟದಿಂದ ಸಂಪೂರ್ಣ ಸಹಕಾರ ನೀಡಲಾಗುತ್ತದೆ ಹಾಲು ಉತ್ಪಾದಕರು ಗುಣಮಟ್ಟದ ಹಾಲು ಪೊರೈಸಿ ಸಂಘಕ್ಕೆ ಲಾಭಾಂಶ ಪಡೆಯುವಂತೆ ಮಾಡಿಕೊಳ್ಳಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಧರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ರೈತರು ಬೆಳೆದ ಯಾವುದೇ ಬೆಳೆಗಳಿಗೂ ನಿಗದಿತ ಬೆಲೆ ಇಲ್ಲ ಆದರೆ ಹಾಲು ಉತ್ಪಾದಕರಿಗೆ ಮಾತ್ರ ನಿಗದಿತ ಬೆಲೆ ಇದೆ 15 ದಿನಗಳಿಗೆ ಒಮ್ಮೆ ಉತ್ಪಾದಕರಿಗೆ ಹಣ ಕೈಸೇರುತ್ತೆ ಜಿಲ್ಲೆಯಲ್ಲಿ ಸಹಕಾರಿ ಸಂಘಗಳು ರೈತರ ಆದಾಯದ ಮೂಲವಾಗಿದೆ ಮುಂದೆ ಒಕ್ಕೂಟದಿಂದ ಸೋಲಾರ್ ಘಟಕ, ಎಂವಿಕೆ ಡೇರಿ ಪ್ರಾರಂಭವಾಗಿ ಹಾಲು ಉತ್ಪಾದಕರಿಗೆ ಹೆಚ್ಚಿನ ಪೋತ್ಸಾಹ ಸಿಗುವಂತಾಗುತ್ತದೆ ಹೈನುಗಾರಿಕೆಗೆ ಸರ್ಕಾರದಿಂದ ಸಹ ಹೆಚ್ಚಿನ ನೆರವು ಸಿಗುತ್ತದೆ ಎಂದರು.

ಈ ಸಂಧರ್ಭದಲ್ಲಿ ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್ ಮಾತನಾಡಿ ಹಾಲು ಉತ್ಪಾದಕರ ಸಂಘಗಳು ರೈತರ ಸಂಸ್ಥೆಗಳಾಗಿವೆ ಕೊರೊನಾ ಅಂತಹ ಸಂಧರ್ಭದಲ್ಲಿ ಸಹ ರೈತರನ್ನು ಕೈಹಿಡಿದಿದ್ದು ಹಾಲು ಉತ್ಪಾದನೆ ಮಾತ್ರ ಹಾಲಿಗೆ ಯಾರು ಕೂಡ ನೀರು ಹಾಕಬೇಡಿ ಕಲಬೆರಕೆ ಹಾಲಿಗೆ ಬೆಲೆ ಇಲ್ಲ ಹಾಲು ಉತ್ಪಾದಕರಿಗೆ ಒಕ್ಕೂಟದಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.

ಇದನ್ನು ಓದಿದ್ದೀರಾ..?ಸಮಾಜದ ಸ್ಥಾನ ಮಾನ ಗೌರವಿಸುವುದು ಭಾರತದ ಪ್ರಜೆಯ ಕರ್ತವ್ಯ

ಈ ಸಂಧರ್ಭದಲ್ಲಿ ವೀರೇನಹಳ್ಳಿ ಡೇರಿ ಅಧ್ಯಕ್ಷ ಎ.ಕೃಷ್ಣಪ್ಪ, ವೇಮಗಲ್ ನರಸಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಉರಟ ಅಗ್ರಹಾರ ಚೌಡರೆಡ್ಡಿ, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಕೋಮುಲ್ ಉಪ ವ್ಯವಸ್ಥಾಪಕ ಡಾ ಮಹೇಶ್, ಅಹಮದ್ ಅಸ್ವಕ್, ವಿಸ್ತರಣಾಧಿಕಾರಿ ಶಿವಕುಮಾರ್, ನಾಗೇಂದ್ರ, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಮೇಡಹಾಳ ಮುನಿಅಂಜಿ, ರಾಮುಶಿವಣ್ಣ, ಕುಮಾರ್, ಚೌಡಪ್ಪ, ವೀರೇಂದ್ರ ಪಾಟೀಲ್, ಸೇರಿದಂತೆ ಡೇರಿ ನಿರ್ದೇಶಕರು ಹಾಲು ಉತ್ಪಾದಕರು ಗ್ರಾಮಸ್ಥರು ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...