ಬಾಗೇಪಲ್ಲಿ:ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮಾರ್ಗದರ್ಶನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಕೈಗೊಂಡಿರುವ ವಿವಿಧ ಉಪಕ್ರಮಗಳಿಗೆ ಪೋಷಕರು, ಶಿಕ್ಷಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ,ಎಸ್.ಡಿ.ಎಂ.ಸಿ,ಅದ್ಯಕ್ಷರು ಸದಸ್ಯರು ಹಾಗೂ ಸಮುದಾಯ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಿಸುವ ಉದ್ದೇಶದಿಂದ, ನವೆಂಬರ್ 14ರಂದು ಮಕ್ಕಳ ದಿನಾಚರಣೆಯ ಪ್ರಯುಕ್ತ ತಾಲ್ಲೂಕಿನ ಕಸಭಾ ಹೋಬಳಿ ಘಂಟಂವಾರಿಪಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ “ಪೋಷಕರ-ಶಿಕ್ಷಕರ ಮಹಾಸಭೆ” ಹಮ್ಮಿಕೊಳ್ಳಾಗಿದೆ ಎಂದು ಮುಖ್ಯ ಶಿಕ್ಷಕಿ ರಾಮಸುಬ್ಬಮ್ಮಜಿ ಹೇಳಿದರು.
ಈ ಸಂದರ್ಭದಲ್ಲಿ ಪೋಷಕರು, ಶಿಕ್ಷಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ,ಎಸ್.ಡಿ.ಎಂ.ಸಿ,ಅದ್ಯಕ್ಷರು ಸದಸ್ಯರು ದೀಪಾ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.
ತದನಂತರ ಮಾತನಾಡಿ 2024-25 ಸಾಲಿನಲ್ಲಿ ಎಸ್ಎಸ್ಎಲ್ಸಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಅಭಿನಂದನೆಗೊಳಿಸುವ ಕಾರ್ಯಕ್ರಮ, ಬಾಲ್ಯ ವಿವಾಹ ನಿಷೇಧ ಮತ್ತು ಬಾಲ ಕಾರ್ಮಿಕ ನಿಷೇಧ ನೀತಿಗಳ ಬಗ್ಗೆ ಜಾಗೃತಿ ಮೂಡಿಸುವಿಕೆ, ಹಾಗೂ ವಿಶೇಷ ಚೇತನ ಮಕ್ಕಳಿಗೆ ನೀಡಲಾಗುವ ಸೌಲಭ್ಯಗಳ ಕುರಿತು ಪೋಷಕರಿಗೆ ಅರಿವು ನೀಡುವುದು ಸೇರಿದಂತೆ ಹಲವಾರು ಚಟುವಟಿಕೆಗಳು ನಡೆಯಿತು, ಸಭೆಯಲ್ಲಿ ಶಾಲೆಯ ಅಭಿವೃದ್ಧಿಯಲ್ಲಿ ಭಾಗೀದಾರರ ಪಾತ್ರ, ಪೋಷಕರ ಸಹಕಾರದ ಅಗತ್ಯತೆ ಇದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೆ.ಬಿ.ಆಂಜನೇಯ ರೆಡ್ಡಿ ಮಾತನಾಡಿ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಪೋಷಕರು ಮತ್ತು ಮಕ್ಕಳೊಂದಿಗೆ ಆರೋಗ್ಯಪೂರ್ಣ ಚರ್ಚೆ ನಡೆಸಿ, ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು.
‘ಸರ್ಕಾರದ ಸೂಚನೆಯಂತೆ ಶಾಲೆಯಲ್ಲಿ ತಳಿರು–ತೋರಣಗಳಿಂದ ಬಲೂನ್ ನಿಂದ ಅಲಂಕರಿಸಿ, ಹಬ್ಬದ ವಾತಾವರಣ ಸೃಷ್ಟಿಸಲಾಗಿದೆ. ವಿದ್ಯಾರ್ಥಿಗಳಿಗೆ ನೀಡುತ್ತಿರುವ ವಿವಿಧ ಸವಲತ್ತುಗಳ ಅನುಷ್ಠಾನ ಕುರಿತು ಪೋಷಕರಿಗೆ ಮಾಹಿತಿ ಒದಗಿಸಲಾಗುತ್ತದೆ. ಜತೆಗೆ ಮಕ್ಕಳ ಹಕ್ಕುಗಳು, ಮಕ್ಕಳ ರಕ್ಷಣಾ ನೀತಿ, ಪೋಕ್ಸೊ ಕಾಯ್ದೆ ಕುರಿತಂತೆ ಅರಿವು ಮೂಡಿಸುವ ಕಾರ್ಯ ಮಾಡಲಾಗುತ್ತಿದೆ’ ಎಂದು ಹೇಳಿದರು.
ಇದನ್ನು ಓದಿದ್ದೀರಾ..? ಏ ಆರ್ ಟಿ ಓ ಕಚೇರಿಯಲ್ಲಿ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಕಾರ್ಯಕ್ರಮ
ಈ ಸಂದರ್ಭದಲ್ಲಿ ಶಿಕ್ಷಕರಾದ ಎನ್.ಎನ್.ಸಂಧ್ಯಾ,ಜಿ.ವಿ.ಚಂದ್ರಶೇಖರ, ಜಿ.ಲಕ್ಷ್ಮೀದೇವಮ್ಮ,ನಾರಾಯಣ ಸ್ವಾಮಿ.ಸಿ.,ಎಸ್.ವರಲಕ್ಷ್ಮಿ,ಶರ್ಮಿಲಾ,ರಘುನಾಥ್ ಹೆಚ್.ಆರ್,ಎಸ್. ಡಿ.ಎಂ.ಅದ್ಯಕ್ಷ ಸಿದ್ದಯ್ಯ,ಸದಸ್ಯರಾದ ಬಾಬು,ನಾರಾಯಣ ಸ್ವಾಮಿ, ಬಾಬಾಜಾನ್ ಹಾಗೂ ಶಾಲಾ ಮಕ್ಕಳ ಪೋಷಕರು ಹಾಜರಿದ್ದರು.





