ವಿಶೇಷ ಚೇತನ ಮಕ್ಕಳನ್ನು ಗುರುತಿಸಿ ಅವರಿಗೆ ಅವಕಾಶ ಕೊಡಿ

Date:

ಬಾಗೇಪಲ್ಲಿ : ವಿಶೇಷ ಚೇತನ ಮಕ್ಕಳನ್ನು ಗುರುತಿಸಿ ಅವರಿಗೆ ಅವಕಾಶ ಕೊಡಿ ಅನುಕಂಪ ಬೇಡ ಎಲ್ಲ ರಂಗಗಳಲ್ಲಿ ವಿಶೇಷ ಚೇತನರು ಉತ್ತಮ ಸಾಧನೆ ಮಾಡುತ್ತಿದ್ದಾರೆ ಅವರಿಗೆ ಅವಕಾಶ ನೀಡಿ ಎಂದು ಬಿಇಓ ವೆಂಕಟೇಶಪ್ಪ ಸಲಹೆ ನೀಡಿದರು.

ಜಿಲ್ಲಾ ಪಂಚಾಯತ್, ಚಿಕ್ಕಬಳ್ಳಾಪುರ ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಮಗ್ರ ಶಿಕ್ಷಣ – ಕರ್ನಾಟಕ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇವರ ಸಹಯೋಗದಲ್ಲಿ ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರ ಆವರಣದಲ್ಲಿ ವಿಶೇಷ ಚೇತನರಿಗೆ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರವು ಸಹ ವಿವಿಧ ರೀತಿಯಲ್ಲಿ ವಿಶೇಷ ಚೇತನರ ಮಕ್ಕಳಿಗೆ ಅನೇಕ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಹಾಗೂ ಪೋಷಕರಲ್ಲಿ ಕೀಲಿರುಮೆ ಮನೋಭಾವ ಬರಬಾರದು ವಿಶೇಷ ಚೇತನ ಮಗು ನಮಗೆ ಶಾಪವಾಗಿ ಹುಟ್ಟಿದೆ ಎಂಬ ಭಾವನೆ ನಮ್ಮಲ್ಲಿರಬಾರದು ಎಲ್ಲರ ಮಕ್ಕಳಂತೆ ಈ ವಿಶೇಷ ಮಕ್ಕಳಅನ್ನು ಸಹ ನೋಡಿಕೊಳ್ಳಬೇಕು ಎಲ್ಲಾ ಮಕ್ಕಳಿಗೆ ಕೊಡುವಂತಹ ಅವಕಾಶಗಳನ್ನು ಸಹ ಈ ಮಕ್ಕಳಿಗೆ ಕೊಡಬೇಕು ಪ್ರತಿ ವರ್ಷವೂ ಸಹ ಆರೋಗ್ಯ ತಪಾಸಣಾ ಶಿಬಿರಗಳನ್ನು ವಿಶೇಷವಾಗಿ ಮಾಡಲಾಗುತ್ತಿದೆ ನಮ್ಮಲ್ಲಿ 98 ರಿಂದ 100 ಜನರವರೆಗೂ ಮಕ್ಕಳನ್ನು ಗುರುತಿಸಿ ಆರು ರೀತಿಯ ನ್ಯೂನ್ಯತೆ ಇರುವಂತಹ ಮಕ್ಕಳಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಇವತ್ತು ಹಮ್ಮಿಕೊಂಡಿದ್ದೇವೆ ಎಂದರು.

ಇನ್ನು ಈ ಸಂದರ್ಭದಲ್ಲಿ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಆರ್. ಹನುಮಂತರೆಡ್ಡಿ ಮಾತನಾಡಿ ಎಲ್ಲರ ಮಕ್ಕಳ ಜೊತೆ ನಮ್ಮ ವಿಶೇಷ ಚೇತನ ಮಕ್ಕಳು ಬೆರೆತಾಗ ಅವರು ಅವರಿಗೆ ಉತ್ಸಾಹದಿಂದ ಅವರು ಕಲಿಯಲು ಪ್ರಯತ್ನ ಪಡುತ್ತಾರೆ. ವಿಶೇಷ ಚೇತನ ಮಕ್ಕಳು ಕ್ರೀಡೆ ಸಾಂಸ್ಕೃತಿಕ ಎಲ್ಲಾ ರಂಗಗಳಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ ಪೋಷಕರು ಹಾಗೂ ಎಲ್ಲ ಸಾರ್ವಜನಿಕರು ವಿಶೇಷ ಚೇತನ ಮಕ್ಕಳನ್ನು ಪ್ರೋತ್ಸಾಹಿಸಬೇಕು ಹಿತ ಶಿಬಿರಗಳಲ್ಲಿ ಎಲ್ಲರೂ ಭಾಗವಹಿಸಿ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು.

ಇದನ್ನು ಓದಿದ್ದೀರಾ..? ಕನ್ನಡ ನೆಲ, ಜಲ, ಸಂಸ್ಕೃತಿ ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ: ಎಂಎಲ್ಸಿ ಅನಿಲ್ ಕುಮಾರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ. ಸತ್ಯನಾರಾಯಣ ರೆಡ್ಡಿ, ಸಮನ್ವಯ ಶಿಕ್ಷಣಾಧಿಕಾರಿ ವೆಂಕಟರಾಯಪ್ಪ, ನಾರಾಯಣಸ್ವಾಮಿ, ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಗಣೇಶ್, ತಾಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ರಾಮಪ್ಪ, ಬಿ ಐ ಇ ಆರ್ ಟಿ ಗಂಗಾಧರ, ಮುನಿರಾಜು, ಯು ಆರ್ ಡಬ್ಲ್ಯೂ ಗೌತಮಿ ಹಾಗೂ ತಾಲೂಕಿನ ಎಲ್ಲಾ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...