ಶಾಲಾ ಆವರಣದ ಗೋಡೆಯ ಮೇಲೆ ಹೆಣ್ಣು ಮಕ್ಕಳ ಸುರಕ್ಷತೆ ಹಾಗು ಅಸುರಕ್ಷತೆಯ ಸ್ವರ್ಶಗಳ ಬಗ್ಗೆ ಅರಿವು

Date:

ಬಾಗೇಪಲ್ಲಿ: ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ಇತ್ತೀಚೆಗೆ ನಡೆಯುತ್ತಿರುವ ಕೆಲ ಕಹಿ ಘಟನೆಗಳ ಹಿನ್ನೆಲೆಯಲ್ಲಿ ಕಲಿಯುವ ಹಂತದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಶಾಲೆಗಳಲ್ಲಿ ಹೆಣ್ಣು ಮಕ್ಕಳ ರಕ್ಷಣಾ ಸಮಿತಿ ವೈದ್ಯಕೀಯ ಮತ್ತು ಸಮಾಲೋಚನಾ ಸೌಲಭ್ಯ ದೂರು ಪೆಟ್ಟಿಗೆ ಪೊಲೀಸ್ ಠಾಣೆಗಳಲ್ಲಿ ಶಾಲೆಯ ಶಿಕ್ಷಕರ ಮಕ್ಕಳ ಹೆಸರುಗಳನ್ನು ನೋಂದಾಯಿಸುವುದು ಸಿಸಿ ಕ್ಯಾಮರಾ ಅಳವಡಿಸುವುದು ಮುಂತಾದ ಕ್ರಮಗಳನ್ನು ಕೈಗೊಂಡಿದೆ ಅದರೆ ಈಗ ಶಾಲಾ ಶಿಕ್ಷಣ ಇಲಾಖೆ ಒಂದು ಹೆಜ್ಜೆ ಮುಂದೆ ಹೋಗಿ ಶಾಲೆಗಳಲ್ಲಿ ಗೋಡೆಗಳ ಮೇಲೆ ಶಾಲಾ ಹೆಣ್ಣು ಮಕ್ಕಳ ಸುರಕ್ಷತೆ ಹಾಗೂ ಅಸುರಕ್ಷತೆ ಒಳ್ಳೆಯ ಮತ್ತು ಕೆಟ್ಟ ಸ್ಪರ್ಶಗಳು ಚಿತ್ರಗಳು ಶಾಲಾ ಗೋಡೆಗಳ ಮೇಲೆ ಬರಿಸುವ ಮೂಲಕ
ಜಾಗೃತಿ ಮೂಡಿಸುತ್ತದೆ. ಭಿತ್ತಿಚಿತ್ರಗಳು ಮಕ್ಕಳ ಸುರಕ್ಷತೆಗೆ ಅತ್ಯಗತ್ಯ ಮ್ಮ ದೇಹ ನಿಮ್ಮದು ಖಾಸಗಿ ಭಾಗಗಳನ್ನು ಯಾರೂ ಮುಟ್ಟಬಾರದು ಇಲ್ಲ ಎಂದು ಹೇಳಲು ಕಲಿಯಿರಿ ಮತ್ತು ನಂಬಿಕಸ್ಥರಿಗೆ ತಿಳಿಸಿ ಎಂಬ ಸರಳ ಸಂದೇಶಗಳು ಮಕ್ಕಳಲ್ಲಿ ಆತ್ಮರಕ್ಷಣೆ ಮತ್ತು ನಿರ್ಭಯತೆಯನ್ನು ಮೂಡಿಸುತ್ತವೆ.

ಬಾಗೇಪಲ್ಲಿ ತಾಲ್ಲೂಕು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಂ.ನಲ್ಲಗುಟ್ಲಪಲ್ಲಿ ಶಾಲಾ ಆವರಣದ ಗೋಡೆಯ ಮೇಲೆ ಹೆಣ್ಣು ಮಕ್ಕಳ ಸುರಕ್ಷತೆ ಹಾಗು ಅಸುರಕ್ಷತೆಯ ಸ್ವರ್ಶಗಳ ಅರಿವು ಮೂಡಿಸುವ ಚಿತ್ರಗಳನ್ನು ಬರಿಸುವ ಮೂಲಕ ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಬಿಇಓ ಎನ್. ವೆಂಕಟೇಶಪ್ಪ ಮಾತನಾಡಿ ಶಾಲೆಯಲ್ಲಿ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯದ ಪ್ರಕರಣಗಳನ್ನು ಪರಿಗಣಿಸಿ ಮಕ್ಕಳಿಗೆ ಒಳ್ಳೆಯ–ಸ್ಪರ್ಶ ಹಾಗೂ ಕೆಟ್ಟ–ಸ್ಪರ್ಶ ಯಾವುದು ಎಂಬುದನ್ನು ಗುರುತಿಸುವ ಕುರಿತು ತಿಳಿವಳಿಕೆ ನೀಡಬೇಕು ಎನ್ನುವ ಅಂಶವನ್ನು ಗಮನದಲ್ಲಿಟ್ಟುಕೊಂಡು ಈ ಚಿತ್ರಗಳನ್ನು ಶಾಲಾ ಶಿಕ್ಷಣ ಇಲಾಖೆ ಚಿತ್ರಗಳನ್ನು ಬರಿಸಲು ಮುಂದಾಗಿದೆ.

ಪ್ರತಿ ಗಂಟೆಗೆ ಮಕ್ಕಳ ಮೇಲೆ ದೌರ್ಜನ್ಯಕ್ಕೊಳಗಾಗುತ್ತಿರುವ ಈ ಸನ್ನಿವೇಶದಲ್ಲಿ, ಇಂತಹ ದೃಶ್ಯಾವಳಿಯ ಚಿತ್ರಗಳು ಶೋಷಣೆಯನ್ನು ತಡೆಯಲು ಸಹಾಯ ಮಾಡುತ್ತವೆ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ, ತಮ್ಮ ರಕ್ಷಣೆ ಮಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಣ್ಣು ಮಕ್ಕಳ ಒಳ್ಳೆಯ ಸ್ಪರ್ಶ ಕೆಟ್ಟ ಸ್ಪರ್ಶ ಶಾಲಾ ಗೋಡೆಗಳ ಮೇಲೆ ಅರಿವು ಒಳ್ಳೆಯ ಸ್ಪರ್ಶ – ಕೆಟ್ಟ ಸ್ಪರ್ಶವು ಮಕ್ಕಳಿಗೆ ಕಲಿಸಬೇಕಾದ ಪ್ರಮುಖ ವಿಷಯಗಳಲ್ಲಿ ಒಂದಾಗಿದೆ. ಸ್ಪರ್ಶವು ಯಾವ ಪರಿಣಾಮವನ್ನ ಬೀರುತ್ತದೆ.? ಮಕ್ಕಳು ಯಾರೊಂದಿಗೆ ಹೇಗೆ ವರ್ತಿಸಬೇಕು.? ಯಾರಾದರೂ ಅವರೊಂದಿಗೆ ಕೆಟ್ಟದಾಗಿ ವರ್ತಿಸಿದರೆ ಏನು ಮಾಡಬೇಕೆಂದು ಅವರಿಗೆ ತಿಳಿಸುವುದು ಮುಖ್ಯ.

ಪ್ರತಿ ಶಾಲೆಯಲ್ಲಿ ಈ ಬಗ್ಗೆ ಮಕ್ಕಳಿಗೆ ತಿಳಿಸುವುದು ಮುಖ್ಯ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ ಅವರು ಯಾವುದು ಒಳ್ಳೆಯದು ಮತ್ತು ಯಾವುದು ಕೆಟ್ಟದು ಎಂದು ತಿಳಿಯದ ವಯಸ್ಸಿನವರು
ಬೆನ್ನು ಕೈಗಳನ್ನು ಮಟ್ಟಿದರೆ ಅದು ಒಳ್ಳೆಯ ಸ್ಪರ್ಶ ಆದರೆ ಎದೆ ಹೊಟ್ಟೆ ತೊಡೆ ಸಂದಿಗಳನ್ನು ಮುಟ್ಟುವುದು ಕೆಟ್ಟ ಸ್ಪರ್ಶ ಇದನ್ನು ಮಕ್ಕಳಿಗೆ ಸೂಕ್ಷ್ಮವಾಗಿ ತಿಳಿಸಿ ಹೇಳಬೇಕು ಒಟ್ಟಿನಲ್ಲಿ ಗೋಡೆ ಬರಹ ಚಿತ್ರಗಳು ಶಾಲಾ ಶಿಕ್ಷಣ ಇಲಾಖೆ ಹೆಣ್ಣು ಮಕ್ಕಳ ಪೋಷಕರಿಗೆ ಅರಿವು ಅನ್ನು ಉಂಟುಮಾಡುತ್ತದೆ ಎಂದು ಹೇಳಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...