ಶುದ್ದ ಕುಡಿಯುವ ನೀರಿನ ಘಟಕ ಮತ್ತು ಹೈಮಾಸ್ಟ್ ದೀಪ ಉದ್ಘಾಟಿಸಿದ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್

Date:

ಚಿಂತಾಮಣಿ:ನಗರದ ಹೊರಭಾಗದಲ್ಲಿ ಸುಮಾರು 500-600 ಎಕರೆ ಪ್ರದೇಶದಲ್ಲಿ ಚಿಂತಾಮಣಿಯ ಉಪನಗರವನ್ನು ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

ನಗರದ ನೆಕ್ಕುಂದಿ ಪೇಟೆ ಅಗ್ರಹಾರದ ಬಳಿಯ ಪಟಾಲಮ್ಮ ದೇವಾಲಯದ ಬಳಿಯ ವೃತ್ತದಲ್ಲಿ ನಗರಸಭೆ ನಿಧಿಯಿಂದ ಸ್ಥಾಪಿಸಿರುವ ಶುದ್ದ ಕುಡಿಯುವ ನೀರಿನ ಘಟಕ ಮತ್ತು ಹೈ ಮಾಸ್ಟ್ ದೀಪವನ್ನು ಉದ್ಘಾಟಿಸಿ ಮಾತನಾಡಿದರು.

ನಗರದ ನೆಕ್ಕುಂದಿ ಕೆರೆಯ ಅಭಿವೃದ್ಧಿಗೆ 74 ಕೋಟಿ ರೂ ಮಂಜೂರಾಗಿದ್ದು ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ. ಆದಷ್ಟು ಬೇಗ ಕಾಮಗಾರಿಗೆ ಚಾಲನೆ ನೀಡಲಾಗುವುದು. ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಚಿಂತಾಮಣಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಜನರ ಬೇಡಿಕೆ ಮತ್ತು ನಿರೀಕ್ಷೆಗಳು ಹೆಚ್ಚಾಗಿವೆ. ಹೀಗಾಗಿ ಎಲ್ಲರಿಗೂ ವಸತಿ ಮತ್ತಿತರ ಸೌಲಭ್ಯಗಳನ್ನು ಒದಗಿಸುವುದು ಕಷ್ಟವಾಗಿದೆ. ಹಾಗಾಗಿ ಉಪನಗರ ನಿರ್ಮಾಣದ ಯೋಜನೆ ರೂಪಿಸಲಾಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೆಕ್ಕುಂದಿ ಕೆರೆಯ ಸುತ್ತಮುತ್ತಲಿನ ಪ್ರದೇಶ, ಮುಂತಕದಿರೇನಹಳ್ಳಿ, ನಾಯನಹಳ್ಳಿ, ಧನಮಿಟ್ಟೇನಹಳ್ಳಿ ಪ್ರದೇಶಗಳಲ್ಲಿ ಈಗಾಗಲೇ ಅಧಿಕಾರಿಗಳು ಸರ್ವೆ ನಡೆಸುತ್ತಿದ್ದಾರೆ. ಸುಮಾರು 400-500 ಎಕರೆ ಪ್ರದೇಶ ಲಭ್ಯವಾಗುತ್ತದೆ. ಮದ್ಯದಲ್ಲಿ ಬರುವ ರೈತರ ಜಮೀನುಗಳಿಗೆ ಹೆಚ್ಚಿನ ಪರಿಹಾರವನ್ನು ಕೊಡಿಸಲಾಗುವುದು, ಸುಮಾರು 10 ಸಾವಿರ ನಿವೇಶನಗಳು ದೊರೆಯುವ ಅಂದಾಜಿದೆ. ಆಧುನಿಕ ಕಾಲಕ್ಕೆ ತಕ್ಕಂತೆ ಎಲ್ಲ ಸೌಲಭ್ಯಗಳುಳ್ಳ ಉಪನಗರವನ್ನು ನಿರ್ಮಾಣ ಮಾಡುವುದಾಗಿ ಹೇಳಿದರು.

ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ಚಿಂತಾಮಣಿಯಲ್ಲಿ ಒಳಚರಂಡಿ ಯೋಜನೆಯನ್ನು ಅಂದಿನ ಶಾಸಕ ಚೌಡರೆಡ್ಡಿ ಮಂಜೂರು ಮಾಡಿಸಿದ್ದರು. ನಗರದ ಹೊಸ ಬಡಾವಣೆಗಳಲ್ಲಿ ಹಾಗೂ ಹಾಳಾಗಿರುವ ಕೆಲವು ಪ್ರದೇಶಗಳ ಹಳೆಯ ಒಳಚರಂಡಿ ವ್ಯವಸ್ಥೆಯನ್ನು ಬದಲಿಸಲು 52 ಕೋಟಿ ರೂ ಮಂಜೂರಾಗಿದ್ದು ಕಾಮಗಾರಿ ಚಾಲನೆಯಲ್ಲಿದೆ. ನಗರೋತ್ಥಾನ ಯೋಜನೆಯಲ್ಲಿ ರಸ್ತೆಗಳ ಕಾಮಗಾರಿ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದರು.
ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶದಲ್ಲಿ 5 ಕೋಟಿ ರೂ ವೆಚ್ಚದಲ್ಲಿ ಸಿಮೆಂಟ್ ರಸ್ತೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಇನ್ನೂ 10-15 ಕೋಟಿ ಅವಶ್ಯಕತೆ ಇದ್ದು, ಪ್ರಸ್ತಾವನೆ ಸಲ್ಲಿಸಲಾಗಿದೆ. ಚೊಕ್ಕರೆಡ್ಡಿಹಳ್ಳಿ ಸಮೀಪ 10 ಮಕೋಟಿ ರೂ ವೆಚ್ಚದಲ್ಲಿ ಎಸ್.ಸಿ.ಪಿ ಟ್ರೀಟ್ ಮೆಂಟ್ ಪ್ಲಾಂಟ್ ಕಾಮಗಾರಿ ನಡೆಯುತ್ತಿದೆ ಎಂದು ತಿಳಿಸಿದರು.

ಬೆಂಗಳೂರು ರಸ್ತೆಯ ಎಂಜನಿಯರಿಂಗ್ ಕಟ್ಟಡ ನಿರ್ಮಾಣ ಪ್ರದೇಶದಲ್ಲಿ ಒಕ್ಕಲಿಗ ಸಂಘ, ಬಲಿಜಿಗ ಸಂಘ, ಯಾದವ ಸಂಘ, ವಿಶ್ವಕರ್ಮ ಸಂಘ, ಕನ್ನಡ ಸಂಘ , ಮುಸ್ಲಿಂ ಸಮುದಾಯ ಸೇರಿದಂತೆ ವಿವಿಧ ಜನಾಂಗ ಮತ್ತು ಸಂಸ್ಥೆಗಳ ಸಮುದಾಯ ಭವನಗಳ ನಿರ್ಮಾಣಕ್ಕಾಗಿ ಸ್ಥಳವನ್ನು ಮಂಜೂರು ಮಾಡಲಾಗಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ..? ಮಾಲೂರಿನ ಯುಕೆನ್ ಇಂಡಿಯಾ ಕಂಪನಿಯಿಂದ ಕಾರ್ಮಿಕರಿಗೆ ಕಿರುಕುಳ

ಈ ಸಂದರ್ಭದಲ್ಲಿ ನಗರ ಸಭೆ ಪೌರಾಯುಕ್ತ ಜಿ ಎನ್ ಚಲಪತಿ , ಮುಖಂಡರಾದ ಶೇಕ್ ಸಾಧಿಕ್ ರಜ್ವಿ , ಇಂತಿಯಾಜ್ ಪಾಷಾ , ಅಮುನ್‌ , ಮಾಲಿಕ್ ಪಾಷಾ, ನಗರಸಭೆಯ ಮಾಜಿ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು, ಅಮರ್ , ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.  

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...