ಸಾಯಿ ಲೀಲಾ ಎಜುಕೇಷನ್ ಫೌಂಡೇಷನ್ ಎನ್.ಜಿ.ಓ ಸಂಸ್ಥೆ ವತಿಯಿಂದ ಲೇಖನ ಸಾಮಾಗ್ರಿ ವಿತರಣೆ

Date:

ಬಾಗೇಪಲ್ಲಿ:ಸರಕಾರ ನೀಡುವ ಸೌಲಭ್ಯಗಳ ಜತೆಗೆ ದಾನಿಗಳು ನೀಡುವ ಎಲ್ಲಾಸೌಲಭ್ಯಗಳನ್ನು ಪಡೆದು ಶೈಕ್ಷಣಿಕ ಪ್ರಗತಿ ಹೊಂದಬೇಕು, ಸಮಾಜದಲ್ಲಿ ಉನ್ನತ ಹುದ್ದೆ ಅಲಂಕರಿಸಿ ಸತ್ಪ್ರಜೆಗಳಾಗಿ ರೂಪುಗೊಂಡು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಬಿಇಓ ವೆಂಕಟೇಶಪ್ಪ ಕರೆ ನೀಡಿದರು.

ಪಟ್ಟಣದ ಪಿ.ಎಂ.ಶ್ರೀ ಶಾಲೆಗೆ ಅಮೆರಿಕದ ಸಾಯಿ ಲೀಲಾ ಎಜುಕೇಷನ್ ಫೌಂಡೇಷನ್ ಮುಖ್ಯಸ್ಥ ಹಾಗೂ ಅಮೇರಿಕಾದ ನಿವೃತ್ತ ಅಂಚೆ ಅಧಿಕಾರಿಗಳಾದ ಡೇವಿಡ್ ಎಂ ಉಲ್ಪ್ ಎಂಬವರು ಶಾಲೆಯ ಎಲ್ಲಾ ಮಕ್ಕಳಿಗೆ ಬಿಸ್ಕತ್ತು, ಪರೀಕ್ಷೆ ಬೈಂಡ್,ಕಲರ್ ಸ್ಕಚ್ ,ಕ್ರಯಾನ್ಸ್, ಪೆನ್ , ಪೆನ್ಸಿಲ್ ಮತ್ತಿತರೆ ಲೇಖನ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದ ಅವರು, ನೀವು ಉತ್ತಮವಾಗಿ ಕಲಿಯುವ ಮೂಲಕ ಸಮಾಜ, ಹೆತ್ತವರು ಹಾಗೂ ಗುರು ಹಿರಿಯರ ಋುಣ ತೀರಿಸಬೇಕು ಎಂದು ಸಲಹೆ ನೀಡಿದರು.

ಸಾಯಿ ಲೀಲಾ ಎಜುಕೇಷನ್ ಫೌಂಡೇಷನ್ ಮುಖ್ಯಸ್ಥ ಹಾಗೂ ಅಮೇರಿಕಾದ ನಿವೃತ್ತ ಅಂಚೆ ಅಧಿಕಾರಿಗಳಾದ ಡೇವಿಡ್ ಎಂ ಉಲ್ಪ್ ಎಂಬ ಎನ್.ಜಿ.ಓ ಸಂಸ್ಥೆಯ ಮೂಲಕ ಲೇಖನ ಸಾಮಾಗ್ರಿಗಳನ್ನು ವಿತರಣೆ ಮಾಡಿ ಮಾತನಾಡಿ ಆಧ್ಯಾತ್ಮಿಕ ದೇವಮಾನವ ಪುಟ್ಟಪರ್ತಿ ಸತ್ಯ ಸಾಯಿ ಬಾಬರವರು 100 ನೇ ಜಯಂತಿ ಹಾಗೂ ಇಂದು ವೀರ ವನಿತೆ ಓಬವ್ವ,ಹಾಗೂ ಪ್ರಥಮ ಶಿಕ್ಷಣ ಮಂತ್ರಿ ಮೌಲಾನಾ ಅಬ್ದುಲ್ ಕಲಾಂ ಅವರ ಜಯಂತಿ ಪ್ರಯುಕ್ತ, ಶೈಕ್ಷಣಿಕ ಪ್ರಗತಿಗೆ ಬೇಕಾದ ಸಮವಸ್ತ್ರ, ಕಲಿಕಾ ಸಾಮಗ್ರಿಗಳನ್ನು ಸಂಸ್ಥೆಯಡಿ ಸರಕಾರಿ ಶಾಲೆಗಳ ಮಕ್ಕಳಿಗೆ ವಿತರಿಸುವ ಮೂಲಕ ಪ್ರೋತ್ಸಾಹ ನೀಡುತ್ತಾ ಬರಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು, ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಗೆ ದಾಖಲು ಮಾಡಬೇಕು ಎಂದರು.

ಇದನ್ನು ಓದಿದ್ದೀರಾ..? ಕೋರ್ಟ್ ಮೊರೆ ಹೊದ ಮಂಜುನಾಥ್ ಗೌಡರಿಗೆ ಬಾರಿ ಮುಖ ಭಂಗ ಆಗಿದೆ : ಶಾಸಕ‌ ನಂಜೇಗೌಡ

ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕ ಆರ್ ವೆಂಕಟರಾಮ್ , ಮುಖ್ಯ ಶಿಕ್ಷಕ ಆರ್.ಹನುಮಂತ ರೆಡ್ಡಿ, ಪ್ರಭಾತಿ,ಧರ್ಮಪುತ್ರಿ ಹಾಗೂ ವಿಧ್ಯಾರ್ಥಿಗಳು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...