ಸಿಟಿಜನ್ ವೆಲ್ ಫೇರ್ ಫೋರಂ ಅಸೋಸಿಯೇಷನ್ ವತಿಯಿಂದ ಸಂಕ್ರಾಂತಿ ಸಂಭ್ರಮ.

Date:

ಚಿಂತಾಮಣಿ : ನಗರದ ರಾಜೀವ್ ಬಡಾವಣೆಯ ಸಿಟಿಜನ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಸಂಕ್ರಾಂತಿ ಸಂಭ್ರಮ 2026,ಸಂಭ್ರಮದ ಸುಗ್ಗಿ ಹಬ್ಬವನ್ನು ವಿವಿಧ ಚಟುವಟಿಕೆಗಳ ಮೂಲಕ ಅದ್ದೂರಿಯಾಗಿ ಆಚರಿಸಲಾಯಿತು.

ಮುಂಜಾನೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೂ ಸಡಗರ ಸಂಭ್ರಮದಿಂದ ವಿವಿಧ ಕಾರ್ಯಕ್ರಮಗಳು ನಡೆದವು.

ರಾಜೀವನಗರ ಬಡಾವಣೆಯ ರಸ್ತೆಗಳಿಗೆ ಸೋಮವಾರವೇ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.ಬೆಂಗಳೂರು ರಸ್ತೆಯಿಂದ ಪ್ರವೇಶದ್ವಾರ, 30 ಅಡಿ ರಸ್ತೆ ಸೇರಿದಂತೆ ಬಡಾವಣೆಯ ವಿವಿಧ ರಸ್ತೆಗಳು ವಿದ್ಯುತ್ ದೀಪಗಳಿಂದt ಜಗಮಗಿಸುತ್ತಿವೆ.ಮೂರು ದಿನಗಳ ಕಾಲ ವಿದ್ಯುತ್ ದೀಪಾಲಂಕಾರ ನೋಡುಗರ ಮನತಣಿಸಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಡಿನ ಸಂಸ್ಕೃತಿ ಮತ್ತು ಪರಂಪರೆ ಹಾಗೂ ಹಳ್ಳಿಯ ಸೊಬಗನ್ನು ಪ್ರತಿಬಿಂಬಿಸುವ ಪ್ರಮುಖ ಹಬ್ಬಗಳಲ್ಲಿ ಸಂಕ್ರಾಂತಿಯ ಹಬ್ಬದಲ್ಲಿ ಬಡಾವಣೆಯ ಜನರು ಸಡಗರ ಸಂಭ್ರಮದಿಂದ ಭಾಗವಹಿಸಿದ್ದರು.

ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದರು. ನೂರಾರು ಸಂಖ್ಯೆಯಲ್ಲಿ ಮಹಿಳೆಯರು 30 ಅಡಿ ರಸ್ತೆಯಲ್ಲಿ ಬಣ್ಣ ಬಣ್ಣದ ಚಿತ್ತಾರಗಳಲ್ಲಿ ಆಕರ್ಷಣೀಯವಾದ ರಂಗೋಲಿಗಳನ್ನು ಬಿಡಿಸಿದ್ದರು
ಗ್ರಾಮೀಣ ಆಟಗಳಾದ ಪುರುಷರಿಗೆ ಮಡಿಕೆ ಒಡೆಯುವುದು ಗೋಣಿ ಚೀಲದ ಓಟ ಹಗ್ಗ ಜಗ್ಗಾಟ ಮಡಿಕೆ ಹೊಡೆಯುವುದು,ಲೆಮನ್ ಅಂಡ್ ಸ್ಪೂನ್ ನಡಿಗೆ,ಮ್ಯೂಜಿಕಲ್ ಚೇರ್,ಹಗ್ಗ ಜಗ್ಗಾಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.ಮಹಿಳೆಯರು,ಪುರುಷರು ಸಂತಸದಿಂದ ಆಟಗಳಲ್ಲಿ ಭಾಗವಹಿಸಿ ಬಾಲ್ಯತನದ ಮೆಲಕು ಹಾಕಿದರು.ಮಕ್ಕಳಿಗೆ ಚಿತ್ರಕಲೆ ಸ್ಪರ್ಧೆಯನ್ನು ಎರಡು ವಿಭಾಗಗಳಾಗಿ ವಿಂಗಡಿಸಿದ್ದು1 ರಿಂದ 5 ನೇ ತರಗತಿ ಹಾಗೂ 6 ರಿಂದ 10 ನೇ ತರಗತಿ ಮಕ್ಕಳು ಭಾಗವಹಿಸಿದ್ದರು.

ಅಸೋಸಿಯೇಷನ್ ವತಿಯಿಂದ ಪ್ರತಿ ತಿಂಗಳು ಸ್ವಚ್ಚತಾ ಕಾರ್ಯಕ್ರಮ,ದೇಶೀಯ ಸಂಸ್ಕೃತಿ ಮತ್ತು ಪರಂಪರೆಯ ಅರಿವನ್ನು ಮೂಡಿಸುವ ಸಲುವಾಗಿ ಎಲ್ಲ ಹಬ್ಬಗಳನ್ನು ಸಾಮೂಹಿಕವಾಗಿ ಆಚರಣೆ ಮಾಡುತ್ತಿದ್ದೇವೆ. ಸ್ವಚ್ಛತೆಯ ಕಡೆಗೆ ನಮ್ಮ ನಡಿಗೆ ಎಂಬ ಘೋಷ ವಾಕ್ಯದೊಂದಿಗೆ 9 ವರ್ಷಗಳಿಂದ ಪ್ರತಿ ತಿಂಗಳು ಮೊದಲ ಭಾನುವಾರ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರಲಾಗುತ್ತಿದೆ ಎಂದು ಕಾರ್ಯದರ್ಶಿ ಕೃಷ್ಣಾರೆಡ್ಡಿ ತಿಳಿಸಿದರು.

ಸಂಜೆ ಸುಂದರವಾಗಿ ಅಲಂಕೃತಗೊಂಡಿದ್ದ ತಮಟೆಯೊಂದಿಗೆ ಅಲಂಕೃತ ರಾಸುಗಳ ಮೆರವಣಿಗೆ ಹಾಗೂ ಕಿಚ್ಚು ಹಾಯಿಸುವ ಕಾರ್ಯಕ್ರಮ ನಡೆಯಿತು. ಕಿಚ್ಚು ಹಾಯಿಸುವ ಕಾರ್ಯಕ್ರಮ ತೀವ್ರ ಕುತೂಹಲ ಮೂಡಿಸಿತ್ತು. ವೇದಿಕೆ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಇದನ್ನು ಓದಿದ್ದೀರಾ..?ಶಿಡ್ಲಘಟ್ಟ | ಪೌರಾಯುಕ್ತೆಗೆ ಬೆದರಿಕೆ: ಕಾಂಗ್ರೆಸ್ ಮುಖಂಡನ ಬಂಧನಕ್ಕೆ ಪೌರಕಾರ್ಮಿಕರ ಆಗ್ರಹ

ಸಿಟಿಜನ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಶಂಕರರೆಡ್ಡಿ,ಕಾರ್ಯದರ್ಶಿ ಕೃಷ್ಣಾರೆಡ್ಡಿ ಹಾಗೂ ಪದಾಧಿಕಾರಿಗಳು,ಬಡಾವಣೆಯ ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...