ಹೆಲ್ಮೆಟ್ ಇಲ್ಲದವರಿಗೆ ದಂಡದ ಬಿಸಿ ಮುಟ್ಟಿಸಿದ ಚಿಂತಾಮಣಿ ಪೊಲೀಸರು

Date:

ಹೆಲ್ಮೆಟ್ ಇಲ್ಲದವರಿಗೆ ದಂಡದ ಬಿಸಿ ತಟ್ಟುತ್ತಿದೆ ಭಾರತದ ಮೋಟಾರು ವಾಹನ ಕಾಯಿದೆ ಪ್ರಕಾರ,ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರಿಗೆ ₹1,000 ದಂಡ ವಿಧಿಸಲಾಗುತ್ತದೆ ಮತ್ತು ಡ್ರೈವಿಂಗ್ ಲೈಸೆನ್ಸ್ 3 ತಿಂಗಳವರೆಗೆ ಅಮಾನತುಗೊಳ್ಳಬಹುದು,ಜೊತೆಗೆ ಅರ್ಧ ಹೆಲ್ಮೆಟ್‌ಗೂ ದಂಡವಿದೆ.ಕರ್ನಾಟಕದಲ್ಲಿ ಇತ್ತೀಚೆಗೆ ಇದರ ಕಟ್ಟುನಿಟ್ಟಿನ ಜಾರಿ ಆರಂಭವಾಗಿದ್ದು,ಪೆಟ್ರೋಲ್ ಬಂಕ್‌ಗಳಲ್ಲಿಯೂ ಹೆಲ್ಮೆಟ್ ಧರಿಸದವರಿಗೆ ಪೆಟ್ರೋಲ್ ಹಾಕದಂತೆ ಸೂಚಿಸಲಾಗಿದೆ,ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.

ಹೆಲ್ಮೆಟ್‌ ಬಳಕೆ ಕಡ್ಡಾಯವಿದ್ದರೂ ಬಳಸದೇ ಚಾಲನೆ ಮಾಡುತ್ತಿದ್ದ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್‌ ಧರಿಸಿ ವಾಹನ ಓಡಿಸಲು ಡಿಸೆಂಬರ್ 12 ರವರೆಗೆ ಅವಧಿ ಕಲ್ಪಿಸಲಾಗಿತ್ತು. ಜಿಲ್ಲೆಯಲ್ಲಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಲು ಗಡುವು ನೀಡಿದ್ದರು.ಹೆಲ್ಮೆಟ್ ಕಡ್ಡಾಯಕ್ಕೆ ಸ್ವತಃ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಕುಶಲ್ ಚೌಕ್ಸೆ ರಸ್ತೆಗಿಳಿದು ಕಾರ್ಯಾಚರಣೆ ನಡೆಸಿ ದ್ವಿ ಚಕ್ರವಾಹನ ಸವಾರರಿಗೆ ಬಿಸಿ ಮುಟ್ಟಿಸಿದರು.

ಅರ್ಧ ಹೆಲ್ಮೆಟ್ ಧರಿಸಿ,ಹೆಲ್ಮೆಟ್ ಧರಿಸದ ಹಿಂಬದಿ ಸವಾರರಿಗೆ ಉತ್ತಮ ಗುಣ ಮಟ್ಟದ ಹೆಲ್ಮೆಟ್ ಧರಿಸಿ ಎಂದು ಸಲಹೆ ನೀಡುತ್ತಿದ್ದುದು ಸಾಮಾನ್ಯ ವಾಗಿತ್ತು.ಯಾವುದೇ ಒತ್ತಡಕ್ಕೂ ಮಣಿಯದೆ ದಂಡ ಹಾಕುತ್ತಿರುವುದು ಕೆಲವರಿಗೆ ತೊಂದರೆಯಾಗುತ್ತಿದ್ದರೂ ಸಹ ಸಾರ್ವಜನಿಕ ವಲಯದಲ್ಲಿ ಪೊಲೀಸರ ಕಾರ್ಯದ ಕುರಿತು ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದರ ಬೆನ್ನೆಲೆ ಚಿಂತಾಮಣಿ ನಗರ ಠಾಣೆಯ ಪೊಲೀಸರು ಹಾಗೂ ಗ್ರಾಮಾಂತರ ಸೇರಿದಂತೆ ಕೆಂಚಾಲಹಳ್ಳಿ ಬಟ್ಲಹಳ್ಳಿ,ಪೊಲೀಸರು ಸಹ ರಸ್ತೆಗೆ ಇಳಿದು ಹೆಲ್ಮೆಟ್ ಹಾಕದೆ ಇರುವ ದ್ವಿಚಕ್ರ ವಾಹನ ಸವಾರರಿಗೆ 500 ರೂ ಅಂತೆ ದಂಡ ಬಿಸಿ ಮುಟ್ಟುಸುತ್ತಿದ್ದಾರೆ.

ಇದನ್ನು ಓದಿದ್ದೀರಾ..? ಹಾಲು ಡೇರಿ ಕಾರ್ಯದರ್ಶಿಗಳ ಬೇಡಿಕೆಗಳ ಈಡೇರಿಕೆಗಾಗಿ ಕೋಮುಲ್ ಎಂಡಿಗೆ ಮನವಿ

ಇದುವವರಿಗೆ ಚಿಂತಾಮಣಿ ತಾಲೂಕಿನ ಎಲ್ಲಾ ಠಾಣಾಗಳಿಂದ ಸುಮಾರು 6 ಲಕ್ಷಕ್ಕಿಂತ ಹೆಚ್ಚು ದಂಡ ವಸೂಲಿ ಮಾಡಲಾಗಿದೆ ಎಂದು ಅಂದಾಜಿಸಲಾಗುತ್ತಿದೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...