ಚೈತ್ರಾ ಕುಂದಾಪುರ ತಂಡದಿಂದ ₹185 ಕೋಟಿ ವ್ಯವಹಾರ: ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ಆರೋಪ

Date:

  • 23 ಜನಕ್ಕೆ ಎಂಎಲ್‌ಎ ಟಿಕೆಟ್ ಕೊಡಿಸ್ತೀವಿ ಎಂದು ಹಣ ಪಡೆಯಲಾಗಿದೆ ಎಂದ ಕಾಂಗ್ರೆಸ್ ಮುಖಂಡ
  • ಯಾರಿಗೆಲ್ಲಾ ಹಣ ಸಂದಾಯವಾಗಿದೆ ಎಂಬುದು ಪೊಲೀಸ್ ತನಿಖೆಯಿಂದ ಹೊರಬರಲಿದೆ : ಲಕ್ಷ್ಮಣ್

ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ವಂಚನೆ ಪ್ರಕರಣದಲ್ಲಿ ಬಂಧಿತಳಾಗಿರುವ ಚೈತ್ರಾ ಕುಂದಾಪುರ ಮತ್ತು ಆಕೆಯ ಬಳಗದಿಂದ ಒಟ್ಟು 17 ಜನರು ಮೋಸ ಹೋಗಿದ್ದಾರೆ. 23 ಜನಕ್ಕೆ ಟಿಕೆಟ್‌ ಕೊಡಿಸುವುದಾಗಿ ಅವರಿಂದ ಹಣ ಪಡೆದಿದ್ದು, ಅಂದಾಜು 185 ಕೋಟಿ ರೂ. ವ್ಯವಹಾರ ನಡೆದಿದೆ ಎಂದು ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಚೈತ್ರಾ ಕುಂದಾಪುರ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಬೇನಾಮಿ. ಸದ್ಯ ತನಿಖೆ ಪ್ರಗತಿಯಲ್ಲಿದೆ. ಹಾಗಾಗಿ ಹೆಚ್ಚು ಮಾತನಾಡುವ ಹಾಗೆ ಇಲ್ಲ. ಆದರೆ ಇನ್ನು ಎರಡು ದಿನದಲ್ಲಿ ಇವರ ಹಿಂದೆ ಇರುವ ಗುಂಪು ಎಷ್ಟು ಹಣ ಪಡೆದಿದ್ದಾರೆ, ಯಾರಿಗೆ ಹೋಗಿದೆ ಅನ್ನುವುದನ್ನು ಪೋಲೀಸರು ಕೊಡುತ್ತಾರೆ ಎಂದು ಹೇಳಿದರು.

chaithra kundapura

“ಒಟ್ಟು 17ಕ್ಕೂ ಹೆಚ್ಚು ಜನರು ಮೋಸ ಹೋಗಿದ್ದಾರೆ. 23 ಜನಕ್ಕೆ ಟಿಕೆಟ್ ಕೊಡಿಸ್ತೀವಿ ಅಂತ ಅವರಿಂದ ಹಣ ಪಡೆದಿದ್ದಾರೆ. 40 ಜನರು ಈ ಟಿಕೆಟ್ ಪಡೆಯುವ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆ. 185 ಕೋಟಿ ರೂಪಾಯಿಯ ವ್ಯವಹಾರ ಇಲ್ಲಿ ಆಗಿದೆ. ಟಿಕೆಟ್ ನೀಡಿ ಕೋಟ್ಯಂತರ ರೂ ಹಣ ಪಡೆಯಲಾಗಿದೆ. ಚೈತ್ರಾ ಕುಂದಾಪುರ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರಗ ಜ್ಞಾನೇಂದ್ರ ಜೊತೆ ನೇರ ಸಂಪರ್ಕ ಹೊಂದಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ವಂಚನೆ ಪ್ರಕರಣ | ಅಭಿನವ ಹಾಲಶ್ರೀ ಸ್ವಾಮೀಜಿ ಸೆ.29ರವರೆಗೆ ಸಿಸಿಬಿ ಕಸ್ಟಡಿಗೆ

“ಮೈಸೂರು ಭಾಗದಲ್ಲೂ ಇಬ್ಬರು ಹಣ ಕೊಟ್ಟು, ವಂಚನೆಗೊಳಗಾಗಿದ್ದಾರೆ. 9 ಜನರ ತಂಡದಿಂದ ಮೋಸದ ಕೃತ್ಯವಾಗಿದೆ. ಇವರೆಲ್ಲಾ ಬಿಜೆಪಿ ಹಾಗೂ ಅರ್ ಎಸ್ ಎಸ್ ಕಾರ್ಯಕರ್ತರು. ಬಿಜೆಪಿ ಹರಿಶ್ಚಂದ್ರನ ಮೊಮ್ಮಕ್ಕಳು ಅನ್ನುತ್ತಾರೆ. ಇವರ ಯೋಗ್ಯತೆ ಏನು ಅನ್ನೋದು ಬಹಿರಂಗಪಡಿಸಬೇಕು” ಎಂದು ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ಕಿಡಿಕಾರಿದರು.

abhina swamiji

ಪಿಎಸ್‌ಐ ಹಗರಣಕ್ಕೂ ಚೈತ್ರಾಗೂ ಸಂಬಂಧವಿದೆಯಾ ಅನ್ನುವ ಬಗ್ಗೆಯೂ ಸಿಸಿಬಿ ಪೊಲೀಸರು ತನಿಖೆ ಮಾಡಬೇಕು. ಸಿ ಟಿ ರವಿ, ಯಡಿಯೂರಪ್ಪ, ಸೂಲಿಬೆಲೆ ಜೊತೆ ಈಕೆಯ ಸಂಬಂಧ ಏನು ಅನ್ನುವುದನ್ನು ಕೂಡ ಸ್ಪಷ್ಟಪಡಿಸಬೇಕು. ಪಿಎಸ್‌ಐ ಹಾಗೂ ನಾಲ್ಕಕ್ಕೂ ಹೆಚ್ಚು ಹಗರಣದಲ್ಲಿ ಭಾಗಿಯಾಗಿರುವ ಬಗ್ಗೆ ನಮಗೆ ಮಾಹಿತಿ ಇದೆ. ಇವರ ಹೆಸರಿನಲ್ಲಿರುವ ಬೇನಾಮಿ ಆಸ್ತಿಪಾಸ್ತಿಗಳನ್ನು ಪತ್ತೆ ಹಚ್ಚಬೇಕು. ಚೈತ್ರಾಗೆ ಜೈಲಿನಲ್ಲಿರುವ ಕೆಲವರ ಸಂಪರ್ಕ ಇದೆ. ಈ ಬಗ್ಗೆ ಹೆಚ್ಚಿನ ತನಿಖೆಯನ್ನು ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸ್ವತಃ ಕಾಂಗ್ರೆಸ್‌ ಪಕ್ಷ ಪತ್ರ ಬರೆಯಲಿದೆ” ಎಂದು ಕಾಂಗ್ರೆಸ್ ಮುಖಂಡ ಲಕ್ಷ್ಮಣ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...