ಔರಾದ್ ಅಮರೇಶ್ವರ ದೇವಸ್ಥಾನ ಅಭಿವೃದ್ಧಿಗೆ‌ ₹1 ಕೋಟಿ ಅನುದಾನ : ಸಂಸದ ಸಾಗರ್ ಖಂಡ್ರೆ

Date:

ಬೀದರ್‌ ಜಿಲ್ಲೆಯ ಔರಾದ ಪಟ್ಟಣದ ಐತಿಹಾಸಿಕ ಉದ್ಭವಲಿಂಗ ಅಮರೇಶ್ವರ ದೇವಸ್ಥಾನ ಅಭಿವೃದ್ಧಿಗೆ‌ ₹1 ಕೋಟಿ ಅನುದಾನ ನೀಡುವದಾಗಿ ಸಂಸದ ಸಾಗರ ಖಂಡ್ರೆ ಭರವಸೆ ನೀಡಿದರು.

ಸೋಮವಾರ ಪಟ್ಟಣದ ಅಮರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮಾತನಾಡಿ, ʼಅಮರೇಶ್ವರ ದೇವಸ್ಥಾನದ ಮಹಾದ್ವಾರ ಸೇರಿದಂತೆ ಜೀರ್ಣೋದ್ಧಾರ ಕಾಮಗಾರಿಗೆ ಸಂಸದರ ಅನುದಾನದಡಿಯಲ್ಲಿ ₹1 ಕೋಟಿ ಅನುದಾನ ನೀಡುತ್ತೇನೆ. ಕರ್ನಾಟಕ ಮಾತ್ರವಲ್ಲದೇ ನೆರೆಯ ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಿಂದಲೂ ಪ್ರತಿ ವರ್ಷ ಲಕ್ಷಾಂತರ ಭಕ್ತರು ಅಮರೇಶ್ವರ ದೇವರ ದರ್ಶನ ಪಡೆಯುತ್ತಾರೆ. ಈ ದೇವಸ್ಥಾನದ ಅಭಿವೃದ್ಧಿಯಿಂದ ಪ್ರವಾಸೋದ್ಯಮ ಅಭಿವೃದ್ಧಿಗೂ ನೆರವಾಗಲಿದೆʼ ಎಂದರು.

ʼದೇವಸ್ಥಾನದ ಅಭಿವೃದ್ಧಿ ಸಮಿತಿಯಲ್ಲಿರುವ ಅನುದಾನ ಇಲಾಖೆಯ ಅಧಿಕಾರಿಗಳು ಬೇರೆಯ ಅಭಿವೃದ್ಧಿಗೆ ಬಳಸಲಿ. ಸಂಸದರ ಅಡಿಯಲ್ಲಿ ನಾನು ಪ್ರತ್ಯೇಕ ಅನುದಾನ ನೀಡುತ್ತೇನೆ. ಇನ್ನೂ ಅವಶ್ಯಕತೆಯಿದ್ದಲ್ಲಿ ಮುಜರಾಯಿ ಇಲಾಖೆ ಅಥವಾ ಪ್ರವಾಸೋದ್ಯಮ ಇಲಾಖೆಯಿಂದ ಅನುದಾನ ಒದಗಿಸಲು ಪ್ರಾಮಾಣಿಕ ಪ್ರಯತ್ನಿಸುವೆ ಎಂದರು. ಬಳಿಕ ದೇವಸ್ಥಾನದ ಮಹಾದ್ವಾರ, ಗೋಪುರ, ಕಲ್ಯಾಣ ಮಂಟಪ, ಭಕ್ತಾದಿಗಳಿಗೆ ವಾಸ್ತವ್ಯದ ವ್ಯವಸ್ಥೆನ ಸೇರಿದಂತೆ ದೇವಸ್ಥಾನವನ್ನು ಇನ್ನಷ್ಟು ಆಕರ್ಷಕವಾಗಿಸಲು ಅಗತ್ಯವಿರುವ ಕಾಮಗಾರಿಯ ಬಗ್ಗೆ ತಹಸೀಲ್ದಾರ ಮಹೇಶ ಪಾಟೀಲ್ ಹಾಗೂ ಸಾರ್ವಜನಿಕರೊಂದಿಗೆ ಚರ್ಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 08 04 at 6.54.38 PM
ಸಂಸದ ಸಾಗರ್‌ ಖಂಡ್ರೆ ಅವರು ಔರಾದ್‌ ಪಟ್ಟಣದ ಅಮರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಸೋಮವಾರ ಕಮಲನಗರ ತಾಲೂಕಿನ ಡೊಂಗರಗಾಂವ, ಔರಾದ್‌ ತಾಲೂಕಿನ ಕೊಳ್ಳೂರು ಗ್ರಾಮಗಳಿಗೆ ಭೇಟಿ ನೀಡೆದ ಸಂಸದ ಸಾಗರ ಖಂಡ್ರೆಗೆ ಗ್ರಾಮಸ್ಥರು ಬಾಜಾ ಭಜಂತ್ರಿಯೊಂದಿಗೆ ಅದ್ಧೂರಿಯಾಗಿ ಸ್ವಾಗತಿಸಿದರು. ನಂತರ ಸಂಸದ ಸಾಗರ ಖಂಡ್ರೆ ಅವರಿಗೆ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

ಡೊಂಗರಗಾವ್ ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಕಳಪೆ ಮಟ್ಟದಲ್ಲಿ ನಡೆಯುತ್ತಿದೆ. ಅಲ್ಲದೇ ಗ್ರಾಮದಲ್ಲಿ ನೀರಿನ ಸಮಸ್ಯೆಯಿದೆ ಎಂದು ಸಮಸ್ಯೆ ತೋಡಿಕೊಂಡರು. ಇದಕ್ಕೆ ಸ್ಪಂದಿಸಿದ ಸಂಸದರು ತಾಲೂಕು ಪಂಚಾಯತಿ ಇಒ ಶಿವಕುಮಾರ ಘಾಟೆ ಅವರಿಗೆ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳುವಂತೆ ತಿಳಿಸಿದ ಅವರು ʼಜೆಜೆಎಂ ಕಾಮಗಾರಿಯ ಬಗ್ಗೆ ಅಧಿಕಾರಿಗಳಿಗೆ ಮಾತನಾಡಿ ಗುಣಮಟ್ಟದ ಕಾಮಗಾರಿ ಮಾಡುವಂತೆ ಸೂಚಿಸುವೆʼ ಎಂದು ಭರವಸೆ ನೀಡಿದರು.

ಅಲೆಮಾರಿ ಜನಾಂಗದ ಸಮಸ್ಯೆ ಆಲಿಸಿದ ಸಂಸದ ಸಾಗರ್ ಖಂಡ್ರೆ‌‌ :

ಔರಾದ್ ಪಟ್ಟಣದಲ್ಲಿ ಸ್ವಂತ ನೆಲೆಯಿಲ್ಲದೆ ಬೀದಿ ಬದಿಯಲ್ಲಿ ಗುಡಿಸಲಿನಲ್ಲಿ ವಾಸಿಸುತ್ತಿರುವ ಅಲೆಮಾರಿ ಜನಾಂಗ ಕುಟುಂಬಗಳಿಗೆ ಸಂಸದ ಸಾಗರ ಖಂಡ್ರೆ ಅವರ ಭೇಟಿ ನೀಡಿ ಅಲೆಮಾರಿಗಳ ಸಮಸ್ಯೆ ಆಲಿಸಿದರು.

ʼಕಳೆದ 4 ದಶಕದಿಂದ ಸ್ವಂತ ಸೂರು ಸೇರಿದಂತೆ ಕನಿಷ್ಠ ಮೂಲ ಸೌಲಭ್ಯ ಇಲ್ಲದೆ ಬೀದಿ ಬದಿಯಲ್ಲಿ ವಾಸವಾಗಿದ್ದೇವೆ. ಈ ಬಗ್ಗೆ ಅನೇಕ ಬಾರಿ ಜನಪ್ರತಿನಿಧಿಗಳಿಗೆ, ಅಧಿಕಾರಿಗಳ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿದಿಲ್ಲ. ಕೂಡಲೇ ನಮ್ಮ ಸಮಸ್ಯೆಗೆ ಸ್ಪಂದಿಸಿ ಸ್ವಂತ ಸೂರು ಕಲ್ಪಿಸಬೇಕುʼ ಎಂದು ಗೊಳು ತೋಡಿಕೊಂಡರು.

ಅದಕ್ಕೆ ಸಂಸದ ಸಾಗರ್‌ ಖಂಡ್ರೆ ಪ್ರತಿಕ್ರಿಯಿಸಿ ಔರಾದ್‌ ಹೊರವಲಯದಲ್ಲಿ ಈಗಾಗಲೇ 2 ಎಕರೆ ಜಮೀನು ಮಂಜುರಾತಿಯಾಗಿದೆ. ಇನ್ನೂ 2 ಎಕರೆ ಜಮೀನು ಮಂಜುರಾತಿ ಮಾಡಲಾಗುತ್ತದೆ. ಮನೆಗಳಿಗಾಗಿ ತಾವುಗಳು ಅರ್ಜಿ ಸಲ್ಲಿಸುವಂತೆ ಎಲ್ಲ ಜನರಿಗೆ ಮನವರಿಕೆ ಮಾಡಿದರು.

ಇದನ್ನೂ ಓದಿ : ಬೀದರ್‌ ನೂತನ ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪಾಟೀಲ್, ತಾಪಂ ಮಾಜಿ ಅಧ್ಯಕ್ಷ ನೆಹರೂ ಪಾಟೀಲ್, ಭಾಲ್ಕಿ ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸೋನು ದೇಶಮುಖ, ಪಪಂ ಸದಸ್ಯ ಸುನಿಲಕುಮಾರ ದೇಶಮುಖ ಸೇರಿದಂತೆ ಮುಖಂಡರಾದ ಬಸವರಾಜ ದೇಶಮುಖ ಶಿವರಾಜ ದೇಶಮುಖ, ರಾಮಣ್ಣ ವಡಿಯಾರ್, ಅನಿಲ ನಿರ್ಮಳೆ, ಶರಣಪ್ಪ ಪಾಟೀಲ್, ರಾಜಕುಮಾರ ಎಡವೆ, ಶಂಕು ನಿಶ್ಪತೆ, ಧನರಾಜ ಮುಸ್ತಾಪುರ, ಸತೀಶ ವಗ್ಗೆ, ಸೂರ್ಯಕಾಂತ ಮಾಲೆ, ರತ್ನಾದೀಪ ಕಸ್ತೂರೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...