ಈ ಜನಾಂಗಕ್ಕೆ ಬೇಕಂತೆ ಹೆಚ್ಚು ಮಕ್ಕಳು: 4 ಮಕ್ಕಳನ್ನು ಹೆತ್ತವರಿಗೆ ₹1 ಲಕ್ಷ ಬಹುಮಾನದ ಆಫರ್!

Date:

ಕೊಡಗಿನಲ್ಲಿ ಪ್ರಾಬಲ್ಯತೆ ಹೊಂದಿರುವ ಕೊಡವ ಸಮಾಜವು ತಮ್ಮ ಸಮುದಾಯದ ಜನಸಂಖ್ಯೆ ಕ್ಷೀಣಿಸುತ್ತಿದೆ ಎಂದು ಭಾವಿಸಿದೆ. ಕೊಡವ ಸಮುದಾಯದ ಜನಸಂಖ್ಯೆಯನ್ನು ಹೆಚ್ಚಿಲು ಸಮುದಾಯದ ದಂಪತಿಗಳು ನಾಲ್ಕು ಮಕ್ಕಳನ್ನು ಹೆರಬೇಕೆಂದು ಹೇಳಿದೆ. ನಾಲ್ಕು ಮಕ್ಕಳನ್ನು ಹೆತ್ತವರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿಯೂ ಕೊಡವ ಸಮಾಜ ಘೋಷಿಸಿದೆ ಎಂದು ವರದಿಯಾಗಿದೆ.

ಕೊಡಗಿನಲ್ಲಿ ವಿಶಿಷ್ಟ ಸಂಪ್ರದಾಯವನ್ನು ಪಾಲಿಸುವವರಲ್ಲಿ ಕೊಡವರು ಪ್ರಮುಖರು. ಕೊಡವ ಸಂಸ್ಕೃತಿ, ಪರಂಪರೆಯನ್ನು ಉಳಿಸಬೇಕು. ಕೊಡಗಿನಲ್ಲಿ ಕೊಡವರೇ ಹೆಚ್ಚಿನ ಸಂಖ್ಯೆಯಲ್ಲಿರಬೇಕೆಂದು ಪೊನ್ನಂಪೇಟೆ ತಾಲ್ಲೂಕಿನ ಟಿ ಶೆಟ್ಟಿಗೇರಿ ಕೊಡವ ಸಮಾಜ ಭಾವಿಸಿದೆ. ಅದಕ್ಕಾಗಿ, ಹೆಚ್ಚು ಮಕ್ಕಳನ್ನು ಹೊಂದುವ ಪೋಷಕರಿಗೆ 25,000 ರೂ.ಗಳಿಂದ 1 ಲಕ್ಷ ರೂ.ವರೆಗೆ ಬಹುಮಾನ ನೀಡಲು ಮುಂದಾಗಿದೆ ಎಂದು ತಿಳಿದುಬಂದಿದೆ.

ನಿರುದ್ಯೋಗ, ಆರ್ಥಿಕ ಬಲವು ಕೊಡವ ಸಮುದಾಯವನ್ನೂ ಕಾಡುತ್ತಿದೆ. ಉದ್ಯೋಗ ಹರಸಿ ಕೊಡವ ಸಮುದಾಯದ ಯವಜನರು ಕೊಡಗು ತೊರೆಯುತ್ತಿದ್ದಾರೆ. ಇತರ ನಗರಗಳಲ್ಲಿ ನೆಲೆಯೂರುತ್ತಿದ್ದಾರೆ. ಹೀಗಾಗಿ, ತಮ್ಮ ಸಂಸ್ಕೃತಿ ಅವನತಿ ಹೊಂದುತ್ತಿದೆ ಎಂಬ ಆತಂಕವೂ ಸಮುದಾಯದಲ್ಲಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...