ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್‌ಗಳ ಕಿಮೋಥೆರಪಿ ಚಿಕಿತ್ಸೆ ಘಟಕ ಆರಂಭ: ಡಾ. ಶಿವಾನಂದ ಮಾಸ್ತಿಹೊಳಿ

Date:

ವಿಜಯಪುರ ನಗರದ ಜಿಲ್ಲಾಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳಿಗಾಗಿ ಕಿಮೋಥೆರಪಿ ಚಿಕಿತ್ಸೆ ಘಟಕ ಆರಭಿಸಲಾಗಿದೆ. 10 ಬೆಡ್‌ಗಳ ಸೌಲಭ್ಯ ಮಾಡಲಾಗಿದ್ದು, ಜಿಲ್ಲೆಯ ಜನತೆ ಸ್ಥಳೀಯವಾಗಿ ಇನ್ನುಮುಂದೆ ಕಿಮೋಥೆರಪಿ ಜಿಲ್ಲಾಸ್ಪತ್ರೆಯಲ್ಲಿ ಎಲ್ಲ ವ್ಯವಸ್ಥೆ ಮಾಡಲಾಗಿದೆ. ವೈದ್ಯರು, ಸಿಬ್ಬಂದಿ ಹಾಗೂ ಅಗತ್ಯ ಉಪಕರಣಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ತಿಳಿಸಿದ ಅವರು, “ಕ್ಯಾನ್ಸರ್‌ಗೆ ಸಂಬಂಧಿಸಿದಂತೆ ಮೊದಲ ಬಾರಿಗೆ ತಪಾಸಣೆ ಮಾಡಿಕೊಂಡ ನಂತರದಲ್ಲಿ ಮೂರು ತಿಂಗಳು ಕಿಮೋಥೆರಪಿ ಪಡೆಯಬೇಕಾಗುತ್ತದೆ. ವಾರಕ್ಕೊಮ್ಮೆ ಈ ಚಿಕಿತ್ಸೆ, ಇಂಜೆಕ್ಷನ್ ತೆಗೆದುಕೊಳ್ಳುವುದು ಅಗತ್ಯವಾಗಿರುತ್ತದೆ. ಈಗ ಜಿಲ್ಲಾಸ್ಪತ್ರೆಯಲ್ಲಿ ಅಂತಹ ಕಿಮೋಥೆರಪಿ ನೀಡಲಾಗುತ್ತದೆ” ಎಂದು ಹೇಳಿದರು.

“10 ಬೆಡ್‌ಗಳ ಸೌಲಭ್ಯ ಮಾಡಲಾಗಿದ್ದು, ಆಕ್ಸಿಜನ್, ವೆಂಟಿಲೇಟರ್ ವ್ಯವಸ್ಥೆಯನ್ನೂ ಮಾಡಲಾಗಿದೆ. ಆಸ್ಪತ್ರೆ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಿ ನಿಯೋಜಿಸಲಾಗಿದೆ. ನಮ್ಮಲ್ಲಿ ಕ್ಯಾನ್ಸರ್ ಶಸ್ತ್ರಚಿಕಿತ್ಸಕರಿದ್ದು, ಶಸ್ತ್ರ ಚಿಕಿತ್ಸೆ ಹಾಗೂ ಕಿಮೋಥೆರಪಿ ಮಾಡಲಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಕಿಮೋ ವೆಚ್ಚವು ಕ್ಯಾನ್ಸರ್ ಕಾಯಿಲೆ ಮೇಲೆ ಅವಲಂಬನೆಯಾಗಿರುತ್ತದೆ. ಕೆಲವೊಮ್ಮೆ ₹5.2ಲಕ್ಷ ಇಲ್ಲವೇ ₹20,000ದಲ್ಲಿ ಚಿಕಿತ್ಸೆ ಸಿಗುತ್ತದೆ. ಆದರೆ, ಇದೀಗ ಜಿಲ್ಲಾಸ್ಪತ್ರೆಯಲ್ಲಿ ಅದರ ಸೌಲಭ್ಯ ಸಿಗಲಿದೆ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಐಸಿಎಂಆರ್ -ಎನ್‌ಆರ್‌ಸಿಪಿ 2023ರ ವರದಿಯ ಪ್ರಕಾರ ಸುಮಾರು 70 ಸಾವಿರ ಹೊಸ ಕ್ಯಾನ್ಸರ್ ಪ್ರಕರಣಗಳನ್ನು ವರದಿಯಾಗಿವೆ. ಪ್ರಮುಖವಾಗಿ ಸ್ತನ(ಶೇ.18), ಗರ್ಭಕಂಠ(ಶೇ.14), ಬಾಯಿ(ಶೇ.12), ಶ್ವಾಸಕೋಶ(ಶೇ.8) ಮತ್ತು ಕೊಲೊರೆಕ್ಟಲ್(ಶೇ.6) ಕ್ಯಾನ್ಸರ್‌ಗಳು ಕಾಣಿಸಿಕೊಂಡಿವೆ.

ಇದನ್ನೂ ಓದಿದ್ದೀರಾ? ಚಾಮರಾಜನಗರ | ತಾಂತ್ರಿಕ ಕಾರಣಗಳಿಂದ 273 ಕುಟುಂಬ ಜಾತಿ ಗಣತಿ ನೋಂದಣಿಯಿಂದ ಹಿಂದುಳಿದಿದೆ : ವಡಗೆರೆ ದಾಸ್

“ಪ್ರತಿ ಒಂದು ಲಕ್ಷ ಜನಸಂಖ್ಯೆಯಲ್ಲಿ 12 ಜನರಿಗೆ ಬಾಯಿ ಕ್ಯಾನ್ಸರ್, ಮಹಿಳೆಯರಲ್ಲಿ 23 ಸ್ತನ ಕ್ಯಾನ್ಸರ್ ಪ್ರಕರಣಗಳು, 15 ಗರ್ಭಕಂಠದ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗಾಗಿ ವಿಜಯಪುರ ಜಿಲ್ಲಾ ಸೇರಿ 16 ಜಿಲ್ಲೆಗಳಲ್ಲಿ ಕಿಮೋಥೆರಪಿ ಘಟಕಗಳನ್ನು ಸರ್ಕಾರ ಆರಂಭಿಸಿದೆ” ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...