ಕಲಬುರಗಿ | ಬಡ್ತಿ ಪಡೆದಿದ್ದ ಜಿಲ್ಲೆಯ 100ಕ್ಕೂ ಹೆಚ್ಚು ಅಧಿಕಾರಿಗಳಿಗೆ ಹಿಂಬಡ್ತಿ

Date:

ಕಳೆದ ವರ್ಷ ಬಡ್ತಿ ಪಡೆದಿದ್ದ 100ಕ್ಕೂ ಅಧಿಕ ನೌಕರರು ಇದೀಗ, ಹಿಂಬಡ್ತಿ ಪಡೆದಿರುವ ಅಪರೂಪದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. 68 ಮಂದಿ ದ್ವಿತೀಯ ವಿಭಾಗದ ಸಹಾಯಕ (ಎಸ್‌ಡಿಎ)/ಗ್ರಾಮ ಆಡಳಿತಾಧಿಕಾರಿಗಳು, 33 ಮಂದಿ ಪೇದೆಗಳು ಸೇರಿದಂತೆ ಕಂದಾಯ ಇಲಾಖೆಯ 100ಕ್ಕೂ ಅಧಿಕ ನೌಕರರು 2023ರಲ್ಲಿ ಎಫ್‌ಡಿಎ ಹುದ್ದೆಗಳಿಗೆ ಬಡ್ತಿ ಪಡೆದಿದ್ದರು. ಈಗ ಆ ಎಲ್ಲ ನೌಕರರ ಬಡ್ತಿಯನ್ನು ಹಿಂಪಡೆಯಲಾಗಿದೆ.

ಅಧಿಕೃತ ಮೂಲಗಳ ಪ್ರಕಾರ, ಕಲಬುರಗಿ ಜಿಲ್ಲೆಯ ಕಂದಾಯ ಇಲಾಖೆಯ ವಿವಿಧ ಕಚೇರಿಗಳಲ್ಲಿ 68 ನೌಕರರು (33 ದ್ವಿತೀಯ ವಿಭಾಗ ಸಹಾಯಕರು ಮತ್ತು 35 ಗ್ರಾಮಾಭಿವೃದ್ಧಿ ಅಧಿಕಾರಿಗಳು) ಪ್ರಥಮ ವಿಭಾಗದ ಸಹಾಯಕರಾಗಿ (ಎಫ್‌ಡಿಎ) ಬಡ್ತಿ ಪಡೆದಿದ್ದರು. ಅವರೆಲ್ಲರಿಗೂ 2021ರ ಜುಲೈ 17ರಿಂದ ಪೂರ್ವಾನ್ವಯವಾಗುವಂತೆ ಎಫ್ ಡಿಎ ಹುದ್ದೆಯಲ್ಲಿ ವೇತನ ಹೆಚ್ಚಳ ಮತ್ತು ಬಡ್ತಿ ನೀಡಿ 2023ರ ಮೇ 18ರಂದು ಆದೇಶ ನೀಡಲಾಗಿತ್ತು ಎಂದು ‘ಟಿಎನ್‌ಐಎ’ ವರದಿ ಮಾಡಿದೆ.

ಎಸ್‌ಡಿಎ ಮತ್ತು ಗ್ರಾಮಾಭಿವೃದ್ಧಿ ಅಧಿಕಾರಿಗಳಿಗೆ ಬಡ್ತಿ ಮತ್ತು ಪೋಸ್ಟಿಂಗ್ ಮಾಡುವಾಗ ಎಷ್ಟು ಎಫ್‌ಡಿಎ ಹುದ್ದೆಗಳು ಖಾಲಿ ಇವೆ ಎಂಬ ಅಂಶವನ್ನು ಅಂದಿನ ಜಿಲ್ಲಾಧಿಕಾರಿ ನೇತೃತ್ವದ ಅಧಿಕಾರಿಗಳು ಪರಿಗಣಿಸಿಲ್ಲ ಎಂಬ ಅಂಶವೂ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಡ್ತಿ ಪಡೆಯುವ ನೌಕರರು ಯಾವುದೇ ಇಲಾಖಾ ವಿಚಾರಣೆ ಎದುರಿಸಿದ್ದಾರೆಯೇ ಎಂಬ ವಿವರಗಳನ್ನು ಪಡೆಯುವುದು ಹಾಗೂ ವಿಚಾರಣೆಯ ಅಂತಿಮ ವರದಿಯನ್ನು ನೀಡುವುದು ಅಗತ್ಯವಾಗಿತ್ತು. ಆದರೆ ಬಡ್ತಿ ನೀಡುವಾಗ ಈ ವಿಧಾನವನ್ನು ಅನುಸರಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ಕಲಬುರಗಿಯಲ್ಲಿ ಎಫ್‌ಡಿಎ ಹುದ್ದೆಗಳು ಖಾಲಿ ಇಲ್ಲದಿದ್ದರೂ ಬಡ್ತಿ ನೀಡಲಾಗಿದೆ ಎಂದು ಬಡ್ತಿ ನೀಡುವ ಪ್ರಕ್ರಿಯೆ ನಿಲ್ಲಿಸುವಂತೆ ಕರ್ನಾಟಕ ರಾಜ್ಯ ಗ್ರಾಮಾಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರು ಕಂದಾಯ ಇಲಾಖೆ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ, ಅಗತ್ಯ ಕ್ರಮ ಕೈಗೊಂಡು ಸರ್ಕಾರಕ್ಕೆ ಅನುಪಾಲನಾ ವರದಿ ಕಳುಹಿಸುವಂತೆ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗೆ ಕಂದಾಯ ಇಲಾಖೆ ಕಾರ್ಯದರ್ಶಿ ಸೂಚಿಸಿದ್ದಾರೆ.

ಪ್ರಕರಣದ ಬಗ್ಗೆ ವಿಚಾರಣೆ ನಡೆಸಿರುವ ಈಗಿನ ಜಿಲ್ಲಾಧಿಕಾರಿ ಫೌಜಿಯಾ ತರನಮ್ ಅವರು ರಾಜ್ಯ ಸರ್ಕಾರದ ನಿರ್ದೇಶನಗಳಂತೆ 2023ರಲ್ಲಿ ಹೊರಡಿಸಿದ್ದ ಬಡ್ತಿ ಆದೇಶವನ್ನು 2024ರ ಫೆಬ್ರವರಿ 14ರಂದು ಹಿಂಪಡೆದಿದ್ದಾರೆ. ಬಡ್ತಿ ಪಡೆದಿದ್ದ ನೌಕರರು ತಮ್ಮ ಮೂಲ ಹುದ್ದೆಗಳಿಗೆ ಹಿಂದಿರುಗಲು ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಡಿ’ ಗ್ರೂಪ್ ನೌಕರರ ಜೇಷ್ಠತಾ ಪಟ್ಟಿಯನ್ನು 2024ರ ಫೆಬ್ರವರಿ 16ರಂದು ಪ್ರಕಟಿಸಲಾಗಿದ್ದು, ಸಂಬಂಧಪಟ್ಟ ನೌಕರರು ತಮ್ಮ ಆಕ್ಷೇಪಣೆಗಳಿದ್ದಲ್ಲಿ 15 ದಿನಗಳೊಳಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...