ಚಿಂತಾಮಣಿ:ನಾಯಿಗಳು ದಾಳಿ ನಡೆಸಿ 11 ಕುರಿಗಳನ್ನು ಬಲಿ ತೆಗೆದುಕೊಂಡಿದ್ದಲ್ಲದೆ,ಎಂಟಕ್ಕಿಂತ ಹೆಚ್ಚು ಕುರಿಗಳನ್ನು ವಿಪರೀತ ಗಾಯಗೊಳಿಸಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಅಂಬಾಜಿದುರ್ಗ ಹೋಬಳಿಯ ಮಿಟ್ಟಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಗ್ರಹಾರಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ಸದರಿ ಗ್ರಾಮದ ಚೌಡಪ್ಪ ಎಂಬುವರಿಗೆ ಸೇರಿದ ಜಾಗದಲ್ಲಿ ರೈತ ಸತ್ಯನಾರಾಯಣ ಬಿನ್ ಕನ್ನಯ್ಯ ಎಂಬುವರು ಸುಮಾರು 50ಕ್ಕಿಂತ ಹೆಚ್ಚು ಕುರಿಗಳು ಸಾಕುತ್ತಿದ್ದು ರಾತ್ರಿ ಸುಮಾರು 2 ಗಂಟೆ ಸಮಯದಲ್ಲಿ ಕುರಿಗಳ ಶೆಡ್ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು,11 ಕುರಿಗಳು ಸಾವನ್ನಪ್ಪಿವೆ ಹಾಗೂ ಎಂಟು ಕುರಿಗಳಿಗೆ ವಿಪರೀತ ಗಾಯಗಳಾಗಿದ್ದು,ಸ್ಥಳಕ್ಕೆ ಪಶು ವೈದ್ಯರಾದ ಡಾ!ಅಮರನಾಥ್ ರೆಡ್ಡಿ ಬೆಟ್ಟಿ ನೀಡಿ ಗಾಯಗೊಂಡಿರುವ ಕುರಿಗಳಿಗೆ ಚಿಕಿತ್ಸೆ ನೀಡಿದ್ದಾರೆ.
ಸ್ಥಳಕ್ಕೆ ಕಂದಾಯ ಇಲಾಖೆಯ ರೆವಿನ್ಯೂ ಇನ್ಸ್ಪೆಕ್ಟರ್ ನರಸಿಂಹಮೂರ್ತಿ ಹಾಗೂ ಸಿಬ್ಬಂದಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕುರಿಗಳು ಸಾವನ್ನಪ್ಪಿರುವ ಬಗ್ಗೆ ವರದಿ ತಯಾರಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆ.
ಇದನ್ನು ಓದಿದ್ದೀರಾ..? ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ- ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ
ರೈತ ಸತ್ಯನಾರಾಯಣ ಕುರಿಗಳನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದು,ರಾತ್ರಿ ನಾಯಿಗಳ ದಾಳಿಗೆ 11 ಕುರಿಗಳು ಮೃತಪಟ್ಟಿದ್ದು ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ನಷ್ಟ ಉಂಟಾಗಿರಬಹುದು ಎಂದು ಅಂದಾಜಿಸಲಾಗಿದೆ ಕೂಡಲೇ ಸಂಬಂಧಪಟ್ಟ ಇಲಾಖೆಯವರು ರೈತನಿಗೆ ಪರಿಹಾರ ಒದಗಿಸಿ ಕೊಡಬೇಕೆಂದು ಮನವಿ ಮಾಡಿದ್ದಾರೆ.





