ಬೀದರ್ ಜಿಲ್ಲೆಯ ಕೆರೆ ಪುನಶ್ಚೇತನ, ಉದ್ಯಾನ ಅಭಿವೃದ್ಧಿಗೆ ₹110 ಕೋಟಿ : ಸಚಿವ ಈಶ್ವರ ಖಂಡ್ರೆ

Date:

ಬೀದರ್ ಜಿಲ್ಲೆಯಲ್ಲಿರುವ 29 ಕೆರೆಗಳ ಪುನಶ್ಚೇತನಕ್ಕೆ ₹77 ಕೋಟಿ ಹಾಗೂ 33 ಉದ್ಯಾನವನಗಳ ಅಭಿವೃದ್ಧಿಗೆ ₹23 ಕೋಟಿ ಅಮೃತ್ -2 ಅಡಿಯಲ್ಲಿ ಮಂಜೂರು ಮಾಡಲಾಗಿದ್ದು, ಇದನ್ನು ಸಮರ್ಪಕವಾಗಿ ಬಳಕೆ ಮಾಡಬೇಕೆಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಕಾಸಸೌಧದ 422ನೇ ಕೊಠಡಿಯಲ್ಲಿ ಗುರುವಾರ ಪೌರಾಡಳಿತ ಸಚಿವ ರಹೀಂ ಖಾನ್ ಅವರೊಂದಿಗೆ ಬೀದರ್ ಜಿಲ್ಲೆಯ ಕೆರೆಗಳ ಪುನಶ್ಚೇತನ ಮತ್ತು ಉದ್ಯಾನವನ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು ತ್ವರಿತವಾಗಿ ಈ ಎಲ್ಲ ಕಾಮಗಾರಿ ಆರಂಭಿಸುವಂತೆ ತಿಳಿಸಿದರು.

ಈ ಬಾರಿಯ ವನಮಹೋತ್ಸವದ ವೇಳೆ ಬೀದರ್ ಹವಾಮಾನಕ್ಕೆ ಹೊಂದಿಕೊಳ್ಳುವಂತಹ ಸ್ಥಳೀಯ ಪ್ರಭೇದದ ಗಿಡಗಳನ್ನು ನೆಟ್ಟು ಬೆಳೆಸುವಂತೆ ಎತ್ತರದ ಸಸಿಗಳನ್ನು ನೆಟ್ಟರೆ ಅವು ಹೆಚ್ಚಿನ ಪ್ರಮಾಣದಲ್ಲಿ ಬದುಕಿ ಉಳಿಯುತ್ತವೆ ಹೀಗಾಗಿ ಈ ಬಾರಿ ಎತ್ತರದ ಸಸಿಗಳನ್ನು ನೆಡುವಂತೆ ನಿರ್ದೇಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉದ್ಯಾನದಲ್ಲಿ ಪುತ್ಥಳಿಗೆ ಅವಕಾಶವಿಲ್ಲ:

‘ಯಾವುದೇ ಉದ್ಯಾನವನ ಪ್ರದೇಶದಲ್ಲಿ ಅನಧಿಕೃತವಾಗಿ ಯಾವುದೇ ಪುತ್ಥಳಿಯನ್ನು ಸ್ಥಾಪಿಸಲು ಅಥವಾ ದೇವಾಲಯ ನಿರ್ಮಾಣ ಮಾಡಲು ಅವಕಾಶ ನೀಡಬಾರದು. ಉದ್ಯಾನವನಗಳು ಉತ್ತಮ ಶ್ವಾಸ ತಾಣಗಳಾಗಿರಬೇಕು. ಇಲ್ಲಿ ಸ್ಥಳೀಯ ಪ್ರಬೇಧದ ಗಿಡಗಳನ್ನು ಬೆಳೆಸಬೇಕು’ ಎಂದು ಹೇಳಿದರು.

ಜಿಲ್ಲೆಯಲ್ಲಿರುವ 33 ಉದ್ಯಾನವನಗಳಲ್ಲಿ ಯಾವುದೂ ಒತ್ತುವರಿ ಆಗದಂತೆ ತಡೆಯಲು ಹಾಗೂ ಉದ್ಯಾನದಲ್ಲಿನ ಹೂಗಿಡಗಳನ್ನು ದರಕರುಗಳು ತಿನ್ನದಂತೆ ಕಾಪಾಡಲು ಗಟ್ಟಿಮುಟ್ಟಾದ ತಂತಿಬೇಲಿ ಹಾಕುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದರು.

‘ನಗರ, ಪಟ್ಟಣದ ಉದ್ಯಾನವನಗಳನ್ನು ವಿಶ್ವದರ್ಜೆಯ ಮಟ್ಟದ ಮಾನದಂಡಗಳಿಗೆ ಅನುಗುಣವಾಗಿ ಅಭಿವೃದ್ಧಿಪಡಿಸಬೇಕು, ಮಕ್ಕಳ ಆಟಿಕೆಗಳನ್ನು ಅಳವಡಿಸಿ, ನಿರ್ವಹಣೆ ಮಾಡಬೇಕು ಮತ್ತು ಅಲ್ಲಿರುವ ವೃಕ್ಷಗಳ ಮೇಲೆ ಅವುಗಳ ಪ್ರಭೇದ, ವೈಶಿಷ್ಟ್ಯದ ಫಲಕ ಹಾಕಿ ಮಕ್ಕಳಿಗೆ ಪ್ರಕೃತಿ, ಪರಿಸರದ ಅರಿವು ಮೂಡಿಸಬೇಕು’ ಎಂದು ತಿಳಿಸಿದರು.

ಕೆರೆಗಳ ಹೂಳು ತೆಗೆಯಲು ಸೂಚನೆ : ಕೆರೆಗಳ ಸ್ವಚ್ಛತೆ ಅತಿ ಮುಖ್ಯವಾಗಿದೆ. ಕೆರೆಗಳಿಗೆ ತ್ಯಾಜ್ಯ ಜಲ ಸೇರಿದರೆ ಜನ, ಜಾನುವಾರಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಜಲಚರಗಳು ಸಾವಿಗೀಡಾಗುತ್ತವೆ. ಹೀಗಾಗಿ ಜಿಲ್ಲೆಯ ಎಲ್ಲ 29 ಕೆರೆಗಳ ಹೂಳು ತೆಗೆಯುವಂತೆ ಮತ್ತು ಕೆರೆಗೆ ಸಂಸ್ಕರಣೆ ಆಗದ ತ್ಯಾಜ್ಯ ಜಲ ಹರಿಯಲು ಅವಕಾಶ ನೀಡದಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಎಸ್‌ಟಿಪಿ ಸ್ಥಾಪನೆ : ನಗರ, ಪಟ್ಟಣಕ್ಕೆ ಹೊಂದಿಕೊಂಡಿರುವ ಕೆರೆಗಳ ಬಳಿ ತ್ಯಾಜ್ಯ ಜಲ ಸಂಸ್ಕರಣಾ ಘಟಕ (ಎಸ್‌ಟಿಪಿ) ಸ್ಥಾಪಿಸಿ, ಜಲ ಶುದ್ಧೀಕರಣವಾದ ಬಳಿಕವಷ್ಟೇ ಕೆರೆಗೆ ಹರಿಸಬೇಕು. ಇದಕ್ಕೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ ಎಂದು ಈಶ್ವರ ಖಂಡ್ರೆ ಸೂಚನೆ ನೀಡಿದರು.

ಈಗಾಗಲೇ ಸ್ಥಾಪಿಸಲಾಗಿರುವ ಎಸ್‌ಟಿಪಿಗಳು ಕಾರ್ಯ ನಿರ್ವಹಿಸುತ್ತಿದೆಯೇ ಇಲ್ಲವೇ ಎಂಬುದನ್ನು ಖಾತ್ರಿಪಡಿಸಿಕೊಳ್ಳುವಂತೆ ಸೂಚಿಸಿದ ಅವರು, ಜಲ ಮೂಲಗಳ ನಿಯಮಿತ ಪರಿಶೀಲನೆ ನಡೆಸುವಂತೆ ತಿಳಿಸಿದರು.

ಭಾಲ್ಕಿಯ ಮಾಸೂಂಪಾಶಾ ಕಾಲೋನಿಯಲ್ಲಿರುವ 8 ಎಕರೆ ಕೆರೆ ಸ್ವಚ್ಛತೆಗೆ ಕ್ರಮ ಕೈಗೊಳ್ಳುವಂತೆ ಹಾಗೂ ಏರಿ ನಿರ್ಮಾಣ ಮಾಡಲು ಸೂಚನೆ ನೀಡಿದರು.

ಇದನ್ನೂ ಓದಿ : ಬಸವಕಲ್ಯಾಣ | ಧಾರಾಕಾರ ಮಳೆಗೆ ಕೊಚ್ಚಿ ಹೋದ ಸೇತುವೆ : ಸ್ಥಳಕ್ಕೆ ಶಾಸಕ ಶರಣು ಸಲಗರ ಭೇಟಿ

ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್, ಪೌರಾಡಳಿತ ಇಲಾಖೆ ನಿರ್ದೇಶಕ ಪ್ರಭುಲಿಂಗ್ ಕವಳಿಕಟ್ಟಿ ಮತ್ತು ಜಿಲ್ಲೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...