ಬೀದರ್‌ | ಸರಳ ಸಾಮೂಹಿಕ ವಿವಾಹ : ದಾಂಪತ್ಯಕ್ಕೆ ಕಾಲಿಟ್ಟ 138 ಜೋಡಿಗಳು

Date:

ಬೀದರ್‌ ತಾಲೂಕಿನ ಆಣದೂರ ಬುದ್ಧ ವಿಹಾರದಲ್ಲಿ ಭಾನುವಾರ ಆಯೋಜಿಸಿದ್ದ ಸರಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ 138 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಬುದ್ಧ ಬೆಳಕು ಟ್ರಸ್ಟ್, ಸಂವಿಧಾನ ಜಾಗೃತಿ ವೇದಿಕೆ ಹಾಗೂ ಬುದ್ಧ, ಬಸವ, ಅಂಬೇಡ್ಕರ್ ಯುವ ಸಂಘದ ಸಂಯುಕ್ತಾಶ್ರಯದಲ್ಲಿ 75ನೇ ಸಂವಿಧಾನ ಅಮೃತ ಮಹೋತ್ಸವ, ಬುದ್ಧ, ಬಸವ, ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಸರಳ ಸಾಮೂಹಿಕ ವಿವಾಹ ಮತ್ತು ಜಿಲ್ಲಾ ಮಟ್ಟದ ಜಾನಪದ ಸಂಭ್ರಮ ಆಯೋಜನೆ ಮಾಡಲಾಗಿತ್ತು.

ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು ಸಂವಿಧಾನ ಪೀಠಿಕೆ ಓದಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಇತ್ತೀಚೆಗೆ ಆಡಂಬರದ ಮದುವೆಗಳ ಸಂಖ್ಯೆ ಹೆಚ್ಚುತ್ತಿದೆ. ಪ್ರತಿಷ್ಠೆಗಾಗಿ ಒಬ್ಬರಿಗಿಂತ ಮತ್ತೊಬ್ಬರು ಅದ್ಧೂರಿಯಾಗಿ ಮದುವೆ ಆಯೋಜಿಸಲು ದುಂದು ವೆಚ್ಚ ಮಾಡುವ ಪ್ರವೃತಿ ಬೆಳೆಯುತ್ತಿದೆ. ಆದರೆ ಇಂದಿನ ಸರಳ ಸಾಮೂಹಿಕ ವಿವಾಹ ಕಾರ್ಯ ಸಮಾಜಕ್ಕೆ ಮಾದರಿಯಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಸಮಾಜದಲ್ಲಿ ಪ್ರೀತಿ, ಭಾತೃತ್ವ , ಸಾಮರಸ್ಯ ಹಾಗೂ ಸಮಾನತೆ ಬಿತ್ತಿದ ಶ್ರೇಯಸ್ಸು ಮಹಾತ್ಮ ಗೌತಮ ಬುದ್ಧನಿಗೆ ಸಲ್ಲಬೇಕು. ಬುದ್ಧನ ಮಾರ್ಗ, ಬಸವಣ್ಣನವರ ಸನ್ಮಾರ್ಗ, ಬಾಬಾ ಸಾಹೇಬ್ ಅಂಬೇಡ್ಕರವರ ರಾಜ ಮಾರ್ಗ ಹಾಗೂ ಸಾವಿತ್ರಿಬಾಯಿ ಫುಲೆ ಅವರ ಜೀವನ ಮಾರ್ಗ ನಮಗೆ ಆದರ್ಶವಾಗಬೇಕು. ದಾಂಪತ್ಯಕ್ಕೆ ಕಾಲಿಟ್ಟ ಎಲ್ಲ ಜೋಡಿಗಳು ಪರಸ್ಪರ ಅರ್ಥೈಸಿಕೊಂಡು ಕೂಡಿ ಬಾಳಿದರೆ ಬದುಕು ಸುಖಮಯವಾಗುತ್ತದೆʼ ಎಂದು ನುಡಿದರು.

ಸಮಾರಂಭದ ಸಾನಿಧ್ಯ ವಹಿಸಿದ ಭಂತೆ ಧಮ್ಮಾನಂದ ಮಹಾಥೆರೋ ಅವರು ಮದುವೆ ವಿಧಿ, ವಿಧಾನಗಳು ನಡೆಸಿಕೊಟ್ಟರು. ಬುದ್ಧ ಬೆಳಕು ಟ್ರಸ್ಟ್ ಅಧ್ಯಕ್ಷ ಮಹೇಶ ಗೋರನಾಳಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

WhatsApp Image 2024 08 05 at 8.38.57 AM

ಇದೆ ಸಂದರ್ಭದಲ್ಲಿನಡೆದ ಜಾನಪದ ಸಂಭ್ರಮ ಕಾರ್ಯಕ್ರಮದಲ್ಲಿ ಜಾನಪದ ಕಲಾವಿದರಾದ ಶಂಕರ ಚೊಂಡಿ, ದೇವಿದಾಸ ಚಿಮಕೋಡೆ ಹಾಗೂ ಸಂಗಡಿಗರು ಜಾನಪದ ಗೀತೆ ಹಾಡಿ ಸಭಿಕರನ್ನು ರಂಜಿಸಿದರು.

ಕರ್ನಾಟಕ ವನ್ಯಜೀವಿ ಮಂಡಳಿ ಸದಸ್ಯ ವಿನಯ ಮಾಳಗೆ, ಯುವ ಉದ್ಯಮಿ ದೀಪಕ ದಿಲ್ಲೆ, ನಗರ ಸಭೆ ನಾಮನಿರ್ದೇಶನ ಸದಸ್ಯ ಸೂರ್ಯಕಾಂತ ಸಾಧೂರೆ ಅವರಿಗೆ ಸನ್ಮಾನಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಕಾರಣದಲ್ಲಿ ಭ್ರಷ್ಟಾಚಾರ ಎಂಬುದು ಗಂಭೀರ ವಿಷಯವೇ?

ಜ್ಞಾನ ಉದಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಕಾಶಿನಾಥ ಚೆಲ್ವಾ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ದೆ, ಕೊಳಾರ ಗ್ರಾಮ ಪಂಚಾಯತ ಸದಸ್ಯ ವಿಜಯಕುಮಾರ ಭಾವಿಕಟ್ಟಿ, ಸಂತೋಷ ಬಕ್ಕಚೋಡಿ, ಬೌದ್ಧ ಆಚಾರ್ಯ ಶಂಭುಲಿಂಗ ಬಾನೆ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಬುದ್ಧ ಬೆಳಕು ಟ್ರಸ್ಟ್ ಕಾರ್ಯದರ್ಶಿ ಕಲ್ಪನಾ ಗೋರನಾಳಕರ್ ಹಾಗೂ ಶರಣು ಫುಲೆ, ರಮೇಶ ಮಾಲೆ, ನೀಲಕಂಠ ಕಾಂಬಳೆ, ಗೌತಮ ಮುತ್ತಂಗಿಕರ್, ಕೃಷ್ಣ ಭೂತಾಳೆ, ಮಹಾಲಿಂಗ ಸಕ್ಪಾಲ್, ಅವಿನಾಶ್ ರಂಜೋಳ, ಅರುಣಕುಮಾರ, ಪೀಟರ್ ಇಸ್ಲಾಂಪೂರ ಉಪಸ್ಥಿತರಿದ್ದರು. ಅಮರ ಅಲ್ಲಾಪೂರ ಸ್ವಾಗತಿಸಿದರು. ಸಂವಿಧಾನ ಜಾಗೃತಿ ವೇದಿಕೆ ಸದಸ್ಯ ಪ್ರಕಾಶ ರಾವಣ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...