ಚಿಕ್ಕಬಳ್ಳಾಪುರ | 14 ಸಾವಿರ ಆಸ್ತಿಗಳಿಗೆ ಬಿ-ಖಾತೆ ಗ್ಯಾರಂಟಿ; ಶಾಸಕ ಪ್ರದೀಪ್‌ ಈಶ್ವರ್

Date:

ಚಿಕ್ಕಬಳ್ಳಾಪುರ ನಗರ ವ್ಯಾಪ್ತಿಯಲ್ಲಿ ಕುಡಾ ಅನುಮೋದನೆ, ಡಿಸಿ ಕನ್ವರ್ಷನ್‌ ಇತ್ಯಾದಿ ಸೂಕ್ತ ದಾಖಲೆಗಳನ್ನು ಹೊಂದಿರದ ಸುಮಾರು 10-14 ಸಾವಿರ ಮನೆಗಳಿದ್ದು, ಅಂತಹವರಿಗೆ ಬಿ-ಖಾತೆ ಮಾಡಿಕೊಡುವ ನಿಟ್ಟಿನಲ್ಲಿ ಫೆ.20, 21, 22ರಂದು ನಗರದ ಪ್ರತೀ ವಾರ್ಡ್‌ಗಳಿಗೂ ನಿಗಧಿತ ಸ್ಥಳಗಳಿಗೆ ನಗರಸಭೆ ಅಧಿಕಾರಿಗಳು ಬರಲಿದ್ದು, ತಮ್ಮ ಆಸ್ತಿಗಳ ಖಾತೆ ಹೊಂದಿರದ ಮಾಲೀಕರು ತಮ್ಮ ದಾಖಲೆಗಳನ್ನು ಅಧಿಕಾರಿಗಳಿಗೆ ಕೊಡಬಹುದು ಎಂದು ನಗರ ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದರು.

ಚಿಕ್ಕಬಳ್ಳಾಪುರ ನಗರದ ಎಸಿ ನ್ಯಾಯಾಲಯ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭ್ರಷ್ಟಾಚಾರ ಮತ್ತು ಜನಸಾಮಾನ್ಯರ ಕಚೇರಿ ಅಲೆದಾಟವನ್ನು ತಪ್ಪಿಸುವ ನಿಟ್ಟಿನಲ್ಲಿ ನಗರಸಭೆ ಅಧಿಕಾರಿಗಳೇ ಎಲ್ಲಾ ವಾರ್ಡ್‌ಗಳಿಗೂ ಬೆಳಗ್ಗೆ 7ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಬರಲಿದ್ದು, ಖಾತೆ ಹೊಂದಿರದ ಸಾರ್ವಜನಿಕರ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಪಡೆಯಲಿದ್ದಾರೆ ಎಂದು ಹೇಳಿದರು.

ನಗರ ವ್ಯಾಪ್ತಿಯಲ್ಲಿ ಸರಿಯಾದ ದಾಖಲೆಗಳನ್ನು ಹೊಂದಿರದ ಸುಮಾರು 10-14 ಸಾವಿರಕ್ಕೂ ಅಧಿಕ ನಿವಾಸಿಗಳಿದ್ದು, ಇದು ದೊಡ್ಡ ತಲೆನೋವಾಗಿತ್ತು. ಇದನ್ನು ಸರಕಾರದ ಗಮನಕ್ಕೆ ತರಲಾಗಿತ್ತು. ಅದಕ್ಕಾಗಿ ಸಿಎಂ, ಡಿಸಿಎಂ, ಕಂದಾಯ ಸಚಿವರ ಉಪ ಸಮಿತಿ ರಚಿಸಲಾಗಿದ್ದು, ಗುರುವಾರ ರಾತ್ರಿ ಗೆಜೆಟ್‌ ನೋಟಿಫಿಕೇಷನ್‌ ಬಂದಿದ್ದು, ಖಾತೆ ಹೊಂದಿಲ್ಲದ ನಗರ ವಾಸಿಗಳು ಮನೆಯ ಯಾವುದೇ ದಾಖಲೆಗಳನ್ನು ನೀಡಿ ಬಿ-ಖಾತೆ ಪಡೆಯಬಹುದಾಗಿದೆ. ಈ ಹಿಂದೆ ಯಾವುದೇ ವ್ಯಕ್ತಿ ಖಾತೆ ಹೊಂದಲು ನಗರಾಭಿವೃದ್ಧಿ ಪ್ರಾಧಿಕಾರದ ಅನುಮತಿ ಪಡೆಯಬೇಕಿತ್ತು. ಇದೀಗ ದಾಖಲೆ ಇಲ್ಲದವರು ಬಿ-ಖಾತೆ ಪಡೆಯಬಹುದಾಗಿದ್ದು, ಇದರಿಂದ ನಗರ ನಿವಾಸಿಗಳ ಆತಂಕ ದೂರವಾಗಲಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿ-ಖಾತೆ ಪಡೆಯಲು 90 ದಿನಗಳ ಗಡುವು ನೀಡಲಾಗಿದೆ. ಅಷ್ಟರೊಳಗೆ ಎಲ್ಲಾ ವಾರ್ಡ್ ನಿವಾಸಿಗಳ ದಾಖಲೆ ಪಡೆದು ಬಿ-ಖಾತೆ ಮಾಡಿಕೊಡುವ ವ್ಯವಸ್ಥೆ ಮಾಡಲಾಗುವುದು. ಇದರಿಂದ ದಲ್ಲಾಳಿಗಳಿಗೆ ಹಣ ನೀಡುವುದು ತಪ್ಪಲಿದ್ದು, ಪಾರದರ್ಶಕತೆ ಇರಲಿದೆ. ಈ ಕುರಿತು ಎರಡು ದಿನಗಳಲ್ಲಿ ಪ್ರತಿ ಮನೆಗೂ ಕರಪತ್ರ ಮತ್ತು ಚೆಕ್‌ಲಿಸ್ಟ್‌ ತಲುಪಿಸಲಾಗುವುದು ಎಂದು ಹೇಳಿದರು.

ಬಿ-ಖಾತೆ ನಮ್ಮ ಜನರ ಬಹುದಿನದ ಕನಸು. ಜನಸಾಮಾನ್ಯರು ಭಯಪಡುವ ಅಗತ್ಯವಿಲ್ಲ. ಯಾರೂ ಸಹ ಯಾರಿಗೂ ಹಣ ಕೊಡುವ ಅಗತ್ಯ ಇಲ್ಲ. ಬಡವರಿಂದ ಹಣ ಪಡೆದು ಕೆಲಸ ಮಾಡಿಕೊಡುವ ದಲ್ಲಾಳಿಗಳು ಯಾರಾದರೂ ಇದ್ದರೆ ನಮಗೆ ಹೆಸರು ಸಮೇತ ಮಾಹಿತಿ ಕೊಡಿ. ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದರು.

ಏನಾದರೂ ತಾಂತ್ರಿಕ ಸಮಸ್ಯೆಗಳಿದ್ದರೆ, ಅಂತಹವರ ಪಟ್ಟಿಯನ್ನು ಮಾಧ್ಯಮದವರ ಗಮನಕ್ಕೆ ತರಲಾಗುವುದು. ಬಡವರು ಎಲ್ಲಿಯೂ ಸಹ ಕಷ್ಟ ಅನುಭವಿಸಬಾರದು. ನಾನು ಎಳ್ಳಷ್ಟೂ ಭ್ರಷ್ಟಾಚಾರಕ್ಕೆ ಅವಕಾಶ ಕೊಡುವುದಿಲ್ಲ ಎಂದರು.

ಬಿ-ಖಾತೆ ಪಡೆದರೆ ಲೋನ್‌, ಮಾರಾಟಕ್ಕೆ ಅವಕಾಶ :
ಬಿ-ಖಾತೆ ಪಡೆದರೆ ಜನ ಸಾಲ ಸೌಲಭ್ಯಗಳನ್ನು ಪಡೆಯಬಹುದು. ಅಲ್ಲದೇ ಆಸ್ತಿಯನ್ನು ಮಾರಾಟ ಮಾಡಬಹುದಾಗಿದೆ ಎಂದು ಶಾಸಕರು ಹೇಳಿದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಫೆ.15ರಂದು ಉಚಿತ ಹೃದಯ ತಪಾಸಣಾ ಶಿಬಿರ

ಪಿಎಲ್‌ಡಿ ಬ್ಯಾಂಕ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಿನ ವಿಚಾರವಾಗಿ ಪ್ರತಿಕ್ರಿಯಿಸಿದ ಶಾಸಕರು, ಆ ವಿಚಾರದಲ್ಲಿ ನನಿಗೆ ಅನುಭವ ಇಲ್ಲದ ಕಾರಣ ಹಿರಿಯರಾದ ಕೆ.ಪಿ.ಬಚ್ಚೇಗೌಡರಿಗೆ ಉಸ್ತುವಾರಿ ವಹಿಸಲಾಗಿತ್ತು. ಅವರಿಗೆ ಅಗತ್ಯ ಸಹಕಾರ ನೀಡಲಾಗಿತ್ತು. ಅವರ ನೇತೃತ್ವದಲ್ಲೇ ಚುನಾವಣೆ ನಡೆದಿದೆ. ಗೆದ್ದಿರುವ ಎಲ್ಲರಿಗೂ ಅಭಿನಂದನೆಗಳು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ನಗರಸಭೆ ಆಯುಕ್ತ ಮನ್ಸೂರ್‌ ಅಲಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...