ಕೊಡಗು | ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ; ಕಸಾಪ ಜಿಲ್ಲಾಧ್ಯಕ್ಷರಿಂದ ಆಹ್ವಾನ ಪತ್ರಿಕೆ ಬಿಡುಗಡೆ

Date:

ಕೊಡಗು ಜಿಲ್ಲೆಯ ಮಡಿಕೇರಿ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಕೇಶವ ಕಾಮತ್ ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದರು.

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್‌ ಹಾಗೂ ಕೊಡಗು ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್‌ ಸಂಯುಕ್ತಾಶ್ರಯದಲ್ಲಿ ಮಡಿಕೇರಿಯ ಜೂನಿಯರ್‌ ಕಾಲೇಜು ಆವರಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಫೆಬ್ರವರಿ 20ರಂದು ‘ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ’ ಕಾರ್ಯಕ್ರಮ ನಡೆಯಲಿದೆ.

“ಕಾರ್ಯಕ್ರಮದಂದು ವಿಚಾರ ಸಂಕಿರಣ-ಗೀತ ಗಾಯನ-ನೃತ್ಯ ರೂಪಕ” ನಡೆಯಲಿದೆ. ಪಂಜೆ ಮಂಗೇಶರಾಯರು ರಚಿಸಿದ ಗೀತೆಗಳಿಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಗಾಯನ ಮತ್ತು ನೃತ್ಯ ರೂಪಕ ನಡೆಸಿಕೊಡಲಿದ್ದಾರೆ” ಎಂದು ಕಸಾಪ ಜಿಲ್ಲಾಧ್ಯಕ್ಷ ಕೇಶವ ಕಾಮತ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ ಮಹೇಶ್ ಜೋಷಿ ಫೆಬ್ರವರಿ 20ರಂದು ಬೆಳಿಗ್ಗೆ 10ಕ್ಕೆ ಉದ್ಘಾಟನೆ ಮಾಡಲಿದ್ದಾರೆ.
ಅಧ್ಯಕ್ಷತೆ ಕೇಶವ ಕಾಮತ್, ಪುಸ್ತಕ ಬಿಡುಗಡೆ ಶಾಸಕ ಎ ಎಸ್ ಪೊನ್ನಣ್ಣ ಹಾಗೂ ಡಾ ಮಂತರ್ ಗೌಡ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೊಡವ ಸಾಹಿತ್ಯ ಆಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ಮಾಚಯ್ಯ, ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಆಕಾಡೆಮಿ ಅಧ್ಯಕ್ಷ ಸದಾನಂದ ಮಾವೋಜಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನ್ಲಿ ಅಲ್ವರೆಸ್ ಭಾಗವಹಿಸಲಿದ್ದಾರೆ” ಎಂದರು.

“ಶಕ್ತಿ ದೈನಿಕ ಪತ್ರಿಕೆ ಸಂಪಾದಕ ಜಿ ಚಿದ್ವಿಲಾಸ್ ಸಾಂಸ್ಕೃತಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮಡಿಕೇರಿ ತಾಲೂಕು ಜನಪದ ಪರಿಷತ್ ಅಧ್ಯಕ್ಷ ಅನಿಲ್ ಎಚ್ ಟಿ ಉದ್ಘಾಟನೆ ನಡೆಸಿಕೊಡಲಿದ್ದಾರೆ.‌ ಕಾರ್ಯಕ್ರಮದಲ್ಲಿ ಸಾಹಿತಿ ಜಲಜಾ ಶೇಖರ್ ಅವರ ‘ಅಗ್ನಿಕುಂಡ’ ಕಥಾ ಸಂಕಲನ ಹಾಗೂ ಸಾಹಿತಿ ಉಳುವಂಗಡ ಕಾವೇರಿ ಉದಯ ಅವರ ‘ಮುಕ್ತಕ ಮಾಣಿಕ್ಯ’ ಪುಸ್ತಕಗಳು ಲೋಕಾರ್ಪಣೆಗೊಳ್ಳಲಿವೆ. ವಿಚಾರಗೋಷ್ಠಿಯಲ್ಲಿ ಉಡುಪಿ ಜಿಲ್ಲೆಯ ಸಪ್ರದ ಕಾಲೇಜು ಪ್ರಾಂಶುಪಾಲರು ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಪ್ರೊ. ಜಯಪ್ರಕಾಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಕಳವು ಪ್ರಕರಣ ; ಮೂವರು ಆರೋಪಿಗಳ ಬಂಧನ

ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಕೆ ಮಂಜುಳಾ, ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ ರಂಗಧಾಮಪ್ಪ ವಹಿಸಲಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ನಿವೃತ್ತ ಸಹ ಕಾರ್ಯದರ್ಶಿ ಡಾ ಎಸ್ ಪಿ ಮಹಾಲಿಂಗೇಶ್ವರ್ ‘ ಪಂಜೆಯವರ ಬದುಕು-ಬರಹ’ ಕುರಿತು ಉಪನ್ಯಾಸ, ಉಡುಪಿಯ ಎಂಜಿಎಂ ಕಾಲೇಜು ಉಪನ್ಯಾಸಕಿ ಹಾಗೂ ಸಾಹಿತಿ ಡಾ ಕಾತ್ಯಾಯಿನಿ ಕುಂಜಿಬೆಟ್ಟು ‘ಸಂಶೋಧನಾ ನೆಲೆಯಲ್ಲಿ ಪಂಜೆ’ ಕುರಿತಾದ ಉಪನ್ಯಾಸ, ಕಾಸರಗೋಡು ನಳಂದ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಹಾಗೂ ಸಾಹಿತಿ ಡಾ ಕೆ ಕಮಲಾಕ್ಷ ‘ಪಂಜೆಯವರ ಶಿಶು ಸಾಹಿತ್ಯ’ ಉಪನ್ಯಾಸ ನಡೆಸಿಕೊಡಲಿದ್ದಾರೆ” ಎಂದು ಮಾಹಿತಿ ನೀಡಿದರು.

“ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಿದ್ದು, ಸಮಿತಿ ರಚಿಸಿ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...