ಪಂಚ ಗ್ಯಾರಂಟಿಗಳಿಂದ ಉತ್ತರ ಕನ್ನಡ ಜಿಲ್ಲೆಗೆ 1922.85 ಕೋಟಿ ನೆರವು: ಸತೀಶ್ ನಾಯ್ಕ

Date:

ಉತ್ತರ ಕನ್ನಡ ಜಿಲ್ಲೆಯು ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಲ್ಲಿ ರಾಜ್ಯದ ಮಾದರಿ ಜಿಲ್ಲೆಯಾಗಿದ್ದು, ಈ ಸಾಧನೆಗೆ ಜಿಲ್ಲೆಯ ಗ್ಯಾರಂಟಿ ಪ್ರಾಧಿಕಾರದ ಎಲ್ಲಾ ತಾಲ್ಲೂಕುಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಇಲಾಖೆಯ ಅಧಿಕಾರಿಗಳ ಸಮನ್ವಯ ಕಾರ್ಯವೇ ಕಾರಣವಾಗಿದೆ. ಗೃಹಲಕ್ಷ್ಮೀ, ಶಕ್ತಿ, ಯುವನಿಧಿ, ಗೃಹಜ್ಯೋತಿ ಹಾಗೂ ಅನ್ನಭಾಗ್ಯ ಯೋಜನೆಗಳಡಿ ಒಟ್ಟು 1922.85 ಕೋಟಿಯಷ್ಟು ಅನುದಾನ ಜಿಲ್ಲೆಗೆ ಹರಿದುಬಂದಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ಪಾಂಡುರಂಗ ನಾಯ್ಕ ಹೇಳಿದ್ದಾರೆ.

ಮಂಗಳವಾರ ಜಿಲ್ಲಾ ಪಂಚಾಯತ್‌ನ ಕೆಸ್ವಾನ್ ಸಭಾಭವನದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ಗಂಭೀರ ಸಮಸ್ಯೆಗಳು ಎದುರಾಗಿಲ್ಲ. ಮಧ್ಯವರ್ತಿಗಳು ಅಥವಾ ಭ್ರಷ್ಟಾಚಾರಕ್ಕೆ ಅವಕಾಶ ನೀಡದೇ, ಯೋಜನೆಗಳು ನೇರವಾಗಿ ಜನತೆಗೆ ತಲುಪುತ್ತಿದೆ. ಪ್ರತಿ ಕುಟುಂಬಕ್ಕೂ ತಿಂಗಳಿಗೆ ರೂ.5,000 ರಿಂದ ರೂ.6,000 ರ ನೆರವು ದೊರೆಯುತ್ತಿದ್ದು, ಈ ಯೋಜನೆಗಳು ಬಡವರ ಪಾಲಿಗೆ ಕಲ್ಪವೃಕ್ಷವಾಗಿವೆ,” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆಗೆ ಆರ್ಥಿಕ ಚೈತನ್ಯ ದೊರೆತಿದ್ದರೂ, ಬಸ್‌ಗಳು ಆಗಾಗ್ಗೆ ಮಾರ್ಗ ಮಧ್ಯೆ ಕೆಟ್ಟು ನಿಲ್ಲುತ್ತಿರುವುದು ಏಕೆ,‌ ಮುಂದಿನ ದಿನಗಳಲ್ಲಿ ಸಾರಿಗೆ ಅಧಿಕಾರಿಗಳು ಗುಣಮಟ್ಟದ ಬಿಡಿಭಾಗಗಳನ್ನು ಬಳಸಿ ವಾಹನ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಹಾಗೂ ಗ್ರಾಮೀಣ ಭಾಗದಲ್ಲಿ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ನಿಗಾವಹಿಸಿಲು ಅಧಿಕಾರಿಗಳಿಗೆ ತಿಳಿಸಿದರು. ಜೊತೆಗೆ ಬಸ್ ನಿಲ್ದಾಣಗಳಲ್ಲಿನ ಶೌಚಾಲಯ ಹಾಗೂ ಮೂಲಭೂತ ಸೌಕರ್ಯಗಳ ಸುಧಾರಣೆಗೂ ಒತ್ತು ನೀಡುವಂತೆ ಹೇಳಿದರು. ಯುವನಿಧಿ ಯೋಜನೆಯಡಿ ಈಗಾಗಲೇ ನೆರವು ಪಡೆದಿರುವವರಿಗೆ ಕಡ್ಡಾಯವಾಗಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ, ತರಬೇತಿಯ ನಂತರ ಉದ್ಯೋಗಾವಕಾಶ ಒದಗಿಸುವತ್ತ ಇಲಾಖೆಗಳು ಕ್ರಮ ವಹಿಸಬೇಕೆಂದು ಅವರು ಸಲಹೆ ನೀಡಿದರು.

ಗೃಹಲಕ್ಷ್ಮಿ ಯೋಜನೆಯಡಿ ಬಿಡುಗಡೆಯಾದ ಜುಲೈ ತಿಂಗಳ ಮೊತ್ತವನ್ನು ಎರಡು ದಿನಗಳೊಳಗೆ ಫಲಾನುಭವಿಗಳ ಖಾತೆಗೆ ಜಮೆ ಮಾಡಲು ಸೂಚಿಸಿದ ಅವರು, “ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆ ಶೇ.99.96 ರಷ್ಟು ಸಾಧನೆ ಮಾಡಿದೆ. ಉಳಿದ ಫಲಾನುಭವಿಗಳನ್ನು ಯೋಜನೆಯ ವ್ಯಾಪ್ತಿಗೆ ತರಲು ತಾಲ್ಲೂಕು ಮಟ್ಟದಲ್ಲಿ ಅದಾಲತ್‌ಗಳನ್ನು ಆಯೋಜಿಸಬೇಕು. ಜಿಲ್ಲೆಯ ಯಾವುದೇ ಅರ್ಹ ಮಹಿಳೆ ಯೋಜನೆಯಿಂದ ವಂಚಿತರಾಗಬಾರದು,” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಶಿರಸಿ | ಕೆಡಿಸಿಸಿ ಬ್ಯಾಂಕ್ ಚುನಾವಣೆ: ನಾಮಪತ್ರ ಸಲ್ಲಿಕೆ ಆರಂಭ

ಅನ್ನಭಾಗ್ಯ ಯೋಜನೆ: ರೂ.152.51 ಕೋಟಿ, ಶಕ್ತಿ ಯೋಜನೆ: 13.72 ಕೋಟಿ ಮಹಿಳೆಯರಿಗೆ ರೂ.404.49 ಕೋಟಿ, ಗೃಹಲಕ್ಷ್ಮಿ ಯೋಜನೆ: 32,823 ಮಹಿಳೆಯರಿಗೆ ರೂ.1299.20 ಕೋಟಿ, ಯುವನಿಧಿ ಯೋಜನೆ: ರೂ.15.30 ಕೋಟಿ, ಗೃಹಜ್ಯೋತಿ ಯೋಜನೆ: 455.84 ಕೋಟಿ ಸೇರಿ ಪಂಚ ಗ್ಯಾರಂಟಿ ಯೋಜನೆಗಳಡಿ ಇದುವರೆಗೆ ಉತ್ತರ ಕನ್ನಡ ಜಿಲ್ಲೆಗೆ ಸಾಕಷ್ಟು ನೆರವು ಒದಗಿಸಲಾಗಿದೆ.

ಸಭೆಯಲ್ಲಿ ಉಪಾಧ್ಯಕ್ಷ ಜನಾರ್ಧನ ಕುಪ್ಪ ದೇವಾಡಿಗ, ಸದಸ್ಯರು ಪಾಂಡುರಂಗ ಗೌಡ ಅಂಕೋಲಾ, ರಾಜೇಂದ್ರ ರಾಣೆ ಕಾರವಾರ, ದೇವಿದಾಸ ಶಾನುಭಾಗ ಯಲ್ಲಾಪುರ, ಅಣ್ಣಪ್ಪ ನಾಯ್ಕ ಮಂಕಿ, ರಾಜು ನಾಯ್ಕ ಭಟ್ಕಳ, ಅಶೋಕ್ ಗೌಡ ಕುಮಟಾ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಆನಂದ್‌ಸಾ ಹಬೀಬ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ, ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಮಂಜುನಾಥ ರೇವಣಕರ, ಜಿಲ್ಲಾ ಉದ್ಯೋಗಾಧಿಕಾರಿ ವಿನೋದ ನಾಯ್ಕ, ಕೌಶಲ್ಯಾಭಿವೃದ್ಧಿ ಸಹಾಯಕ ನಿರ್ದೇಶಕ ರಜತ್ ಕುಮಾರ್ ಹಬ್ಬು, ಸಾರಿಗೆ ನಿಗಮ ಮತ್ತು ಹೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...