ದ.ಕ 1995ರ ದೌರ್ಜನ್ಯ ಪ್ರಕರಣ: ತಲೆಮರೆಸಿಕೊಂಡಿದ್ದ ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನದ ರೋಚಕ ಕಥೆ

Date:

  • ಜೈಲಲ್ಲಿರಬೇಕಾದವ ಸರ್ಕಾರಿ ನೌಕರನಾದ ರೋಚಕ ಕಥೆ‌
  • ದೌರ್ಜನ್ಯ ಪ್ರಕರಣವನ್ನು ಪ್ರವೀಣ್‌ಗೆ ಭಾರೀ ಪ್ರಶಂಸೆ

ಭೂಮಾಲೀಕ ಹಾಗೂ ಆರ್‌ಎಸ್‌ಎಸ್‌ ಮುಖಂಡ ನಾರಾಯಣ ಸೋಮಯಾಜಿ ಎಂಬಾತ 1995 ಅಕ್ಟೋಬರ್ 24 ರಂದು ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ದೌರ್ಜನ್ಯ ನಡೆಸಿದ್ದನು. ಆ ಪ್ರಕರಣದಲ್ಲಿ ಭಾಗಿಯಾಗಿದ್ದು, ನಂತರ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸುವಲ್ಲಿ ಬೀಟ್ ಸಿಬ್ಬಂದಿ ಪ್ರವೀಣ್ ಮತ್ತು ಗಣೇಶ್ ಯಶಸ್ವಿಯಾಗಿದ್ದಾರೆ.

1995ರಲ್ಲಿ ನರಿಕೊಂಬು ಗ್ರಾಮದಲ್ಲಿ ನಡೆದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪದ್ಮನಾಭ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಠಾಣಾ ವ್ಯಾಪ್ತಿಯ ಪಾಣೆಮಂಗಳೂರಿನ ಸಮೀಪದ ನರಿಕೊಂಬು ಗ್ರಾಮದ ಆರ್‌ಎಸ್‌ಎಸ್‌ ಮುಖಂಡ ಹಾಗೂ ಭೂಮಾಲೀಕನಾಗಿದ್ದ ನಾರಾಯಣ ಸೋಮಯಾಜಿ ಎಂಬಾತ 1995 ಅಕ್ಟೋಬರ್ 24 ರಂದು ತನ್ನ ಜಮೀನಿನಲ್ಲಿ ಆರ್‌ಎಸ್‌ಎಸ್ ಬೈಠಕ್ ಆಯೋಜಿಸಿ ಗ್ರಾಮದ ದಿನಗೂಲಿ ಕಾರ್ಮಿಕರಾದ ಗುರುವಪ್ಪ ಹಾಗೂ ರಮೇಶ ಎಂಬುವವರಿಗೆ ಆ ಬೈಠಕ್‌ನಲ್ಲಿ ಪಾಲ್ಗೊಳ್ಳುವಂತೆ ಹಾಗೂ ಸುತ್ತಮುತ್ತಲಿನ ಹಿಂದೂ ಯುವಕರನ್ನು ಸೇರಿಸುವಂತೆ ಸೂಚಿಸಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಮಿಕರಾದ ಗುರುವಪ್ಪ ಹಾಗೂ ರಮೇಶ ಭೂಮಾಲೀಕನ ಆಜ್ಞೆಗೆ ಒಪ್ಪದೇ ಬೈಠಕ್‌ನಲ್ಲಿ ಪಾಲ್ಗೊಳ್ಳುವುದಕ್ಕೆ ನಿರಾಕರಿಸಿದ್ದರು. ಇದನ್ನೇ ಕಾರಣವಾಗಿಟ್ಟುಕೊಂಡು ಕಾರ್ಮಿಕರ ಮೇಳೆ ಹಲ್ಲೆ, ದೌರ್ಜನ್ಯ ನಡೆಸಲಾಗಿತ್ತು. ನಂತರ ಅವರ ತಲೆ ಬೋಳಿಸಿ, ಬಣ್ಣ ಹಚ್ಚಿ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿ ಮೆರವಣಿಗೆ ಮಾಡಿ ಕೊನೆಗೆ ಗ್ರಾಮಸ್ಥರಿಗೆ ಅನುಮಾನ ಬರಬಾರದೆಂದು ಅವರ ಮೇಲೆ ಅಡಿಕೆ ಕದ್ದಿರುವ ಆರೋಪ ಹಾಕಲಾಗಿತ್ತು.

1995ರಲ್ಲಿ ನಡೆದ ಆ ಘಟನೆಯ ಪ್ರಮುಖ ಆರೋಪಿಗಳಾದ ಭೂಮಾಲೀಕ ನಾರಾಯಣ ಸೋಮಯಾಜಿ ಮತ್ತವನ ಸಹಚರರಾದ ಪದ್ಮನಾಭ, ವಿಠಲ, ಸುರೇಶ ಸಪಲ್ಯ ಎಂಬವರ ಮೇಲೆ ಅಂದು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೇ ಈ ಪ್ರಕರಣದ ಆರೋಪಿಗಳ ವಿರುದ್ಧ ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿತ್ತು. ಆದರೆ ಪ್ರಕರಣದ ಮೂರನೇ ಆರೋಪಿ ಪದ್ಮನಾಭ ಪೋಲಿಸರಿಗೆ ಸಿಗದೆ ತಲೆಮರೆಸಿಕೊಂಡು ಬೆಂಗಳೂರಿನಲ್ಲಿ ನೆಲೆಸಿದ್ದ. ಮಾತ್ರವಲ್ಲ ಸರ್ಕಾರವನ್ನು ವಂಚಿಸಿ ಸರ್ಕಾರಿ ಉದ್ಯೋಗವನ್ನೂ ಪಡೆದಿದ್ದ.

“ಸುಮಾರು 28 ವರ್ಷಗಳಿಂದ ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಪದ್ಮನಾಭನಿಗೆ ನ್ಯಾಯಾಲಯ ಬಂಧನದ ವಾರೆಂಟ್ ಜಾರಿ ಮಾಡುತ್ತಿದ್ದರೂ ಈವರೆಗೆ ಯಾವುದೇ ಪೊಲೀಸ್ ಅಧಿಕಾರಿಯೂ ಈತನನ್ನು ಬಂಧಿಸಲು ಶ್ರಮ ವಹಿಸಿರಲಿಲ್ಲ. ಇದಕ್ಕೆ ನಾರಾಯಣ ಸೋಮಯಾಜಿ ಮತ್ತು ಆತನ ಪರಮಾಪ್ತ ಕಲ್ಲಡ್ಕ ಪ್ರಭಾಕರ ಭಟ್ ಅವರ ಪ್ರಭಾವವೇ ಕಾರಣ” ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಕಾವಡಿ ಹಾಲಿನ ಡೇರಿ ಚುನಾವಣೆಯಲ್ಲಿ ಅಕ್ರಮ; 11 ಮಂದಿ ಅಭ್ಯರ್ಥಿಗಳಿಂದ ಮತದಾನ ಬಹಿಷ್ಕಾರ

“28 ವರ್ಷ ಕಳೆದ ನಂತರ ಆ ಗ್ರಾಮದ ಬೀಟ್ ಸಿಬ್ಬಂದಿ ಪ್ರವೀಣ್ ಎನ್ನುವವರು ಈ ಪ್ರಕರಣದ ಹಿಂದೆ ಬಿದ್ದರು. ಸಿನಿಮೀಯ ಶೈಲಿಯಲ್ಲಿ ಕಳೆದ ಒಂದು ವರ್ಷದಿಂದ ಮಾಹಿತಿ ಕಲೆ ಹಾಕಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ಅಲ್ಲದೇ ಆ ವಾರೆಂಟ್ ಅಸಾಮಿಯನ್ನು ಬೆಂಗಳೂರಿನಿಂದ ಬಂಧಿಸಿ ಠಾಣೆಗೆ ಒಪ್ಪಿಸಿರುವ ರೋಚಕ ಬೆಳವಣಿಗೆ ನಡೆದಿದೆ. ಬೀಟ್ ಸಿಬ್ಬಂದಿ ಪ್ರವೀಣ್ ಮತ್ತು ಅವರ ಜೊತೆಯಿದ್ದ ಗಣೇಶ್ ಅವರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ” ಎಂದು ಗ್ರಾಮಸ್ಥರು ಶ್ಲಾಘಿಸಿದ್ದಾರೆ.

“ಸರ್ಕಾರವನ್ನು ವಂಚಿಸಿ ಸರ್ಕಾರಿ ಉದ್ಯೋಗ ಪಡೆದಿರುವ ಈ ಆರೋಪಿಗೆ ಬೆನ್ನೆಲುಬಾಗಿರುವ ಎಲ್ಲ ಮುಖಂಡರ ವಿರುದ್ಧ ತನಿಖೆಯಾಗಬೇಕು. ಆತನನ್ನು ಕೆಲಸದಿಂದ ವಜಾ ಮಾಡಬೇಕು. ಅಲ್ಲದೇ 28 ವರ್ಷಗಳಿಂದ ಬಂಟ್ವಾಳ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಸುಮಾರು ಇಪ್ಪತ್ತಕೂ ಹೆಚ್ಚು ಆಧಿಕಾರಿಗಳು ಈ ಪ್ರಕರಣ ಯಾಕೆ ಭೇದಿಸಲು ಶ್ರಮ ವಹಿಸಿರಲಿಲ್ಲ ಎಂಬುದರ ಬಗ್ಗೆ ಸರ್ಕಾರ ತನಿಖೆ ಮಾಡಬೇಕು”‌ ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...