ಬೇತಮಂಗಲ: ಸುಂದರಪಾಳ್ಯ ಗ್ರಾಮದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ 20 ಲಕ್ಷದ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರೂಪಕಲಾ ಶಶಿಧರ್ ಶುಕ್ರವಾರ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ಈ ವೇಳೆ ಶಾಸಕಿ ರೂಪಕಲಾ ಶಶಿಧರ್ ಮಾತನಾಡಿ, ಕೆಜಿಎಫ್ ತಾಲೂಕಿನಲ್ಲಿ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಒಟ್ಟು 5 ಕೋಟಿ ಅನುದಾನದಲ್ಲಿ ಅಲ್ಪಸಂಖ್ಯಾತರ ಕಾಲೋನಿಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ತಿಳಿಸಿದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮೊದಲ ಬಾರಿಗೆ 5 ಕೋಟಿ ಅನುದಾನವು ಸಿಕ್ಕಿದ್ದು ಗುಣಮಟ್ಟದ ಕಾಮಗಾರಿಯನ್ನು ನಡೆಸಲಾಗುತ್ತಿದೆ, ಅದೇ ರೀತಿ ಸುಂದರಪಾಳ್ಯ ಗ್ರಾಮದಲ್ಲಿ 20 ಲಕ್ಷ ಅನುದಾನದಲ್ಲಿ ಸಿಸಿ ರಸ್ತೆಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸ್ಥಳದಲ್ಲಿದ್ದು ಗುಣಮಟ್ಟದ ಕಾಮಗಾರಿಯನ್ನು ಮಾಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಇದನ್ನು ಓದಿದ್ದೀರಾ…?ಮೀನು ಹಿಡಿಯಲು ಹೋದ ಮಹಿಳೆ ವಿದ್ಯುತ್ ತಂತಿಗಳಿಗೆ ಬಲಿ
ಈ ಸಂದರ್ಭದಲ್ಲಿ ಅಲ್ಲಿನ ನಿವಾಸಿಗಳು ತಮ್ಮ ಹಲವು ಕುಂದು ಕೊರತೆಗಳನ್ನು ಶಾಸಕರಿಗೆ ತಿಳಿಸಿದರು. ರಸ್ತೆಯ ಮದ್ಯದಲ್ಲಿ ಇರುವ ವಿದ್ಯುತ್ ಕಂಬವನ್ನು ಸುಮಾರು ವರ್ಷಗಳಿಂದ ಸ್ಥಳಾಂತರಿಸಿರುವುದಿಲ್ಲ ಕಂಬವನ್ನು ಸ್ಥಳಂತಾರಿಸಲು ಕೋರಿದರು.





