ಬಾಗೇಪಲ್ಲಿ: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನುಸರಿಸುತಿರವ ಜನವಿರೋಧಿ ನೀತಿಗಳ ವಿರುದ್ಧ ಡಿಸೆಂಬರ್ 21ರಂದು ಬೆಂಗಳೂರುನಲ್ಲಿ ನಡೆಯುವ ಬೃಹತ್ ಪ್ರತಿಭಟನಾ ಸಮಾವೇಶದ ಭಾಗವಾಗಿ ಇಂದು ಸಿಪಿಐಎಂ ಪಕ್ಷದ ತಾಲ್ಲೂಕು ಕಮಿಟಿ ವತಿಯಿಂದ ನಿಧಿ ಸಂಗ್ರಹಣೆಯನ್ನು ಬಾಗೇಪಲ್ಲಿ ಪಟ್ಟಣದ ಮುಖ್ಯ ಬೀದಿಯ ಬೀದಿ ಬದಿ ವ್ಯಾಪಾರಸ್ಥರು ಬಳಿ ಸಿಪಿಎಂ ಪಕ್ಷದ ತಾಲೂಕು ಸಮಿತಿ ನೇತೃತ್ವದಲ್ಲಿ ನಿಧಿ ಸಂಗ್ರಹ ಮಾಡಲಾಯಿತು.
ಸಿಪಿಎಂ ತಾಲ್ಲೂಕು ಸಮಿತಿ ಕಾರ್ಯದರ್ಶಿ ಎಂ.ಎನ್.ರಘುರಾಮರೆಡ್ಡಿ ಮಾತನಾಡಿ, ನ.1 ರಿಂದ ಡಿ. 15ರವರೆಗೂ ಮನೆ ಮನೆಗೆ ಭೇಟಿ ಮಾಡಿ, ಜನರ ಸಮಸ್ಯೆಗಳ ಬಗ್ಗೆ ಹಾಗೂ ರಾಜಕೀಯದ ಬಗ್ಗೆ ಜನಜಾಗೃತಿ ಮೂಡಿಸಲಾಗುವುದು. ಡಿಸೆಂಬರ್ 5 ರಿಂದ 15 ರವರೆಗೆ ಪ್ರಜಾನಾಟ್ಯ ಕಲಾ ಮಂಡಳಿಯಿಂದ ಕ್ರಾಂತಿಗೀತೆಗಳ ಮೂಲಕ ಜಾಗೃತಿ ಮೂಡಿಸಲಾಗುವುದು. ಡಿ. 21ರಂದು ಬೆಂಗಳೂರಿನಲ್ಲಿ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಿಂದ 15 ಸಾವಿರ ಹಾಗೂ ಕ್ಷೇತ್ರದಿಂದ 6 ಸಾವಿರ ಜನ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಇದನ್ನು ಓದಿದ್ದೀರಾ..? ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಈ ಸಂದರ್ಭದಲ್ಲಿಸಿಪಿಎಂ ಜಿಲ್ಲಾ ಸಮಿತಿ ಸದಸ್ಯ ಬಿಳ್ಳೂರುನಾಗರಾಜ್, ಅಶ್ವತ್ಥಪ್ಪ, ಡಿ.ಟಿ.ಮುನಿಸ್ವಾಮಿ, ಚನ್ನರಾಯಪ್ಪ, ಜಿ.ಕೃಷ್ಣಪ್ಪ, ಜಿ.ಮುಸ್ತಾಫ, ಕೆ.ಮುನಿಯಪ್ಪ, ಎಚ್.ಎ.ರಾಮಲಿಂಗಪ್ಪ, ಬಿ.ಎಚ್.ರಫೀಕ್, ಇಮ್ರಾನ್, ನರಸಿಂಹರೆಡ್ಡಿ, ಚಂಚುರಾಯನಪಲ್ಲಿ ಕೃಷ್ಣಪ್ಪ, ಎ.ಸೋಮಶೇಖರ ಇದ್ದರು.





