ಮೈಸೂರು | 24 ಮಂದಿ ಕೈದಿಗಳ ಬಿಡುಗಡೆ

Date:

ಮೈಸೂರು ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 24 ಮಂದಿ ಅಪರಾಧಿಗಳನ್ನು ಸನ್ನಡತೆ ಆಧಾರ ಮೇಲೆ ಸೋಮವಾರ ಬಿಡುಗಡೆ ಮಾಡಲಾಗಿದೆ. ಈ ಪೈಕಿ ಬೆಂಗಳೂರು ಜೈಲಿನಲ್ಲಿದ್ದ ಓರ್ವ ಮಹಿಳೆ ಹಾಗೂ ಮೈಸೂರಿನಲ್ಲಿದ್ದ 23 ಮಂದಿ ಬಿಡುಗಡೆಯಾಗಿದ್ದಾರೆ.

ಮೈಸೂರಿನ ಕೇಂದ್ರ ಕಾರಾಗೃಹ ಆವರಣದಲ್ಲಿ ಸೋಮವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾಗಿರುವ ಬಿ.ಜಿ ದಿನೇಶ್ ಕೈದಿಗಳ ಬಿಡುಗಡೆಗೊಳಿ ಮಾತನಾಡಿದರು. “ಕೈದಿಗಳು ಜೈಲಿನಲ್ಲಿ ಪಡೆದ ವೃತ್ತಿ ತರಬೇತಿಯನ್ನು ಸದ್ಬಳಕೆ ಮಾಡಿಕೊಂಡು ಸಮಾಜದಲ್ಲಿ ಕುಟುಂಬದವರು, ಸ್ನೇಹಿತರು ಮತ್ತು ಬಂಧು-ಬಳಗದೊಂದಿಗೆ ಉತ್ತಮ ಜೀವನ ನಡೆಸಲಿ” ಎಂದು ಶುಭ ಹಾರೈಸಿ, ಬಿಡುಗಡೆ ಪತ್ರ ನೀಡಿದರು.

ಕಾರಾಗೃಹದ ಮುಖ್ಯ ಅಧೀಕ್ಷಕಿ ಕೆ.ಸಿ.ದಿವ್ಯಶ್ರೀ ಮಾತನಾಡಿ, “ಕಳೆದ ಜೂನ್‌ನಲ್ಲಿ 31 ಮಂದಿಯ ಕಡತ ಸಲ್ಲಿಸಲಾಗಿತ್ತು. ಅದರಲ್ಲಿ ನಾಲ್ಕು ಮಂದಿಯ ಬಿಡುಗಡೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇಬ್ಬರ ಅರ್ಜಿಯನ್ನು ರಾಜ್ಯಪಾಲರು ತಿರಸ್ಕರಿಸಲಾಗಿದ್ದು, ಒಬ್ಬರ ಅರ್ಜಿಯನ್ನು ಮರು ಪರಿಶೀಲಿಸುವಂತೆ ಸೂಚನೆ ನೀಡಲಾಗಿದೆ” ಎಂದು ಮಾಹಿತಿ ನೀಡಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾವಣೆ ಹಿನ್ನೆಲೆಯಲ್ಲಿ ಬಿಡುಗಡೆ ವಿಳಂಬವಾಗಿದೆ. ಶಿಕ್ಷೆಯನ್ನು ಕಡಿತಗೊಳಿಸಿದ ಬಳಿಕ ಅವರ ಸನ್ನಡತೆ ಆಧಾರದ ಮೇಲೆ ಸುಮಾರು 24 ಮಂದಿಯನ್ನು ಜೈಲಿನಿಂದ ಬಿಡುಗಡೆ ಮಾಡಲಾಯಿತು. ಕೇಂದ್ರ ಕಾರಾಗೃಹದಲ್ಲಿ ಪ್ರಸ್ತುತ 33 ಮಹಿಳೆಯರು ಸೇರಿದಂತೆ 814 ಕೈದಿಗಳು ಇದ್ದಾರೆ” ಎಂದು ಹೇಳಿದ್ದಾರೆ.

“ಕಾರಾಗೃಹದಲ್ಲಿ ಸರ್ಕಾರಿ ಅನುಮೋದಿತ ಕೈಗಾರಿಕಾ ಸಂಸ್ಥೆಗಳ ಸಹಕಾರದೊಂದಿಗೆ ವಿವಿಧ‌ ರೀತಿಯ ಕೌಶಲ್ಯ ತರಬೇತಿಗಳನ್ನು ನೀಡಲಾಗುತ್ತದೆ. ಎಲೆಕ್ಟ್ರಿಷಿಯನ್, ಬ್ಯೂಟಿಷಿಯನ್ ಸೇರಿದಂತೆ ಹಲವು ತರಬೇತಿ, ಜೊತೆಗೆ ಸಮಸ್ಯೆಗಳನ್ನು ಎದುರಿಸುವ ಆಪ್ತಸಮಾಲೋಚನೆ ತರಬೇತಿ ಕಾರ್ಯಕ್ರಮಗಳ ಮೂಲಕ ಹಾಗೂ ಹಲವಾರು ಆಯಾಮಗಳಲ್ಲಿ ಒಬ್ಬ ಕೈದಿಯನ್ನು ಬಿಡುಗಡೆಗೆ ಸಜ್ಜುಗೊಳಿಸಲಾಗುತ್ತದೆ” ಎಂದು ತಿಳಿಸಿದರು.

“ಕೌಶಲ್ಯ ತರಬೇತಿ ಪಡೆದವರು ಸ್ವಂತ ಉದ್ದಿಮೆ ಪ್ರಾರಂಭಿಸಬಹುದು. ಇತರೆ ಉದ್ದಿಮೆಗಳಲ್ಲಿ ಸೇರಿ ತಮ್ಮ ಜೀವನ ರೂಪಿಸಿಕೊಳ್ಳಬಹುದು. ಹತ್ತಾರು ವರ್ಷ ಕಾರಾಗೃಹದಲ್ಲಿ ಇದ್ದವರು ಸಮಾಜದ ಮುಖ್ಯವಾಹಿನಿಗೆ ಹೊಂದಿಕೊಳ್ಳುವುದು, ಆದಾಯ ಗಳಿಸುವುದು ತುಂಬಾ ಕಷ್ಟ. ಹಾಗಾಗಿ ಕೌಶಲ್ಯ ತರಬೇತಿಗಳಿಂದ ಕಲಿತಿರುವುದು ಅವರ ಬದುಕಿಗೆ ಸಹಾಯ ಮಾಡುತ್ತದೆ” ಎಂದು ಕಾರಾಗೃಹದ ಮುಖ್ಯ ಅಧೀಕ್ಷಕಿ ತಿಳಿಸಿದರು.

ಕಾರಾಗೃಹ ಜನರನ್ನು ಇಟ್ಟುಕೊಳ್ಳುವ ಸ್ಥಳವಲ್ಲ. ನ್ಯಾಯದಾನ ಪದ್ದತಿಯನ್ನು ಕಾನೂನು ಬಾಹಿರ ಚಟುವಟಿಕೆಯನ್ನು ಮಾಡಿದವರಿಗೆ ಈ ತರಹದ ಶಿಕ್ಷಾ ವಿಧಾನಗಳಿರುತ್ತವೆ. ಅದನ್ನು ಜಾರಿಗೊಳಿಸುವ ಜೊತೆಗೆ ಅವರ ಮನಪರಿವರ್ತನೆ ಮಾಡುವ ಜವಾಬ್ದಾರಿ ಕಾರಾಗೃಹದ ಮೇಲೆ ಇರುತ್ತದೆ. ಶಿಕ್ಷೆಯನ್ನು ಜಾರಿಗೊಳಿಸುವುದ ಜೊತೆಗೆ ಅವರಿಗೆ ಶಿಕ್ಷಣವನ್ನು ನೀಡಲಾಗುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮುರುಘಾ ಮಠಕ್ಕೆ ಸರ್ಕಾರದ ಆಡಳಿತಾಧಿಕಾರಿ ನೇಮಕ ರದ್ದು; ಹೈಕೋರ್ಟ್ ಆದೇಶ

“ಕಾರಾಗೃಹಕ್ಕೆ ಬಂದಾಗ ಕೈದಿ ಎಂದು ನೋಡದೆ ವ್ಯಕ್ತಿಯಾಗಿ ನೋಡುತ್ತೇವೆ. ಆತನಲ್ಲಿರುವ ತಪ್ಪುಗಳನ್ನು ತಿದ್ದುವ ಕೆಲಸ ಮಾಡುತ್ತೇವೆ. ಸನ್ನಢತೆ ಆಧಾರದ ಮೇಲೆ ಬಿಡುಗಡೆ ಮಾಡುವುದು ಜೀವನ ನಡೆಸಲು ನೀಡುವ ಎರಡನೇ ಅವಕಾಶದಂತೆ. ಅದಕ್ಕೆ ಸಮಾಜವೂ ಅನುವು ಮಾಡಿಕೊಡಬೇಕು. ಹೊಸ ಮನಷ್ಯರಾಗಿ ಸ್ವೀಕರಿಸಬೇಕು. ಬಿಡುಗಡೆಯಾಗಲಿರುವ ಕೈದಿಗಳು ಅಪರಾಧ ಮುಕ್ತ ಸಮಾಜದ ರಾಯಭಾರಿಗಳಾಗಲಿ” ಎಂದು ಮುಖ್ಯ ಅಧೀಕ್ಷಕಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕಾರಾಗೃಹ ಇಲಾಖೆಯ ಜೈಲರ್‌ಗಳು ಧರಣೇಶ್, ಗೀತಾ, ಅಮರ್ ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...