ಕಂಬಾಲಪಲ್ಲಿ ನರಮೇಧಕ್ಕೆ 25 ವರ್ಷ: ಸುಪ್ರೀಂ ಕೋರ್ಟ್‌ ಮೌನವೇಕೆ?

Date:

ಅದು 2000ದ ಮಾರ್ಚ್‌ 11, ಅಂದು ಕೋಲಾರ ಜಿಲ್ಲೆಯ (ಈಗ ಚಿಕ್ಕಬಳ್ಳಾಪುರ ಜಿಲ್ಲೆ) ಕಂಬಾಲಪಲ್ಲಿಯಲ್ಲಿ ಏಳು ಮಂದಿ ದಲಿತರನ್ನು ಪ್ರಬಲ ರೆಡ್ಡಿ ಸಮುದಾಯದವರು ಜೀವಂತವಾಗಿ ಸುಟ್ಟು ಕೊಂದ ದಿನ. ಆ ಘಟನೆ ನಡೆದ ಮೊನ್ನೆಗೆ (ಮಾರ್ಚ್‌ 11) 25 ವರ್ಷಗಳು ಕಳೆದಿವೆ. ಆದರೆ, ಕೊಂದವರು ಯಾರು? ಅಪರಾಧಿಗಳು ಯಾರು? ಎಂಬ ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ. ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ಕೊಳೆಯುತ್ತಿದೆ. ಆದರೆ, ವಿಚಾರಣೆಯೇ ನಡೆದಿಲ್ಲ. ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಮನಸ್ಸು ಮಾಡುತ್ತಿಲ್ಲ.

2000ದ ಮಾರ್ಚ್‌ 10ರಂದು ಬೈಕ್‌ಗೆ ದಾರಿ ಬಿಡುವ ಕ್ಷುಲ್ಲಕ ಕಾರಣಕ್ಕೆ ದಲಿತ ಶ್ರೀರಾಮಪ್ಪ ಜೊತೆ ವೆಂಕಟರೆಡ್ಡಿ ಎಂಬಾತ ಜಗಳ ಮಾಡಿದ್ದ. ಗಲಾಟೆಯಲ್ಲಿ ಶ್ರೀರಾಮಪ್ಪ ಮೇಲೆ ವೆಂಕಟರೆಡ್ಡಿ ಮತ್ತು ಪ್ರಬಲ ಜಾತಿಯ ಇತರರು ಹಲ್ಲೆಗೈದಿದ್ದರು. ಘಟನೆ ಬಗ್ಗೆ ತಿಳಿದ ಪೊಲೀಸರು ಕಂಬಾಲಪಲ್ಲಿಗೆ ಮೀಸಲು ಪಡೆಯನ್ನು ಕಳಿಸಿದರು. ಮಾರನೆ ದಿನ, ಮಾರ್ಚ್‌ 12ರಂದು ಹಲ್ಲೆಗೈದವರ ವಿರುದ್ಧ ಚಿಂತಾಮಣಿ ಪೊಲೀಸ್ ಠಾಣೆಯಲ್ಲಿ ಶ್ರೀರಾಮಪ್ಪ ಮತ್ತು ದಲಿತ ಸಂಗಡಿಗರು ಪ್ರಕರಣ ದಾಖಲಿಸಿ, ಊರಿಗೆ ಮರಳಿದರು. ಅವರ ಮರಳುವಿಕೆಗಾಗಿಯೇ ಕಾದಿದ್ದ ರೆಡ್ಡಿ ಸಮುದಾಯವರು ದಲಿತರದ ಮೇಲೆ ಮುಗಿಬಿದ್ದು, ದೌರ್ಜನ್ಯ ಎಸಗಿದರು. ಘಟನೆಯಲ್ಲಿ ಕೃಷ್ಣಾರೆಡ್ಡಿ ಎಂಬ ನೀರುಗಂಟೆ ಸಾವನ್ನಪ್ಪಿದರು. ಅವರನ್ನು ದಲಿತರೇ ಕೊಂದರೆಂದು ದಲಿತರ ತಲೆಗೆ ಕಟ್ಟಲಾಯಿತು. ಅದೇ ದಿನ ಮೀಸಲು ಪಡೆ ಕಂಬಾಲಪಲ್ಲಿಯಿಂದ ವಾಪಸ್‌ ಹೋಗಿತ್ತು. ಬಹುಶಃ ಅಂದು ಮೀಸಲು ಪಡೆ ಕಂಬಾಲಪಲ್ಲಿಯಲ್ಲಿ ಇದ್ದಿದ್ದರೆ, ದಲಿತರ ಮಾರಣಹೋಮ ನಡೆಯುತ್ತಿರಲಿಲ್ಲ.

ಅಂದಿನ ರಾತ್ರಿ, ರೆಡ್ಡಿ ಸಮುದಾಯದ 200ಕ್ಕೂ ಹೆಚ್ಚು ಮಂದಿ ದಲಿತ ಕೇರಿಗೆ ನುಗ್ಗಿದರು. ಶ್ರೀರಾಮಪ್ಪ ಅವರ ಮನೆಗೆ ಹೊರಗಿನಿಂದ ಬೀಗ ಹಾಕಿ, ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದರು. ಭೀಕರ ಘಟನೆಯಲ್ಲಿ ಮನೆಯಲ್ಲಿದ್ದ ಶ್ರೀರಾಮಪ್ಪ, ಅವರ ಸಹೋದರ ಅಂಜಿನಪ್ಪ, ರಾಮಕ್ಕ, ಸುಬ್ಬಕ್ಕ, ಪಾಪಮ್ಮ, ನರಸಿಂಹಯ್ಯ, ಚಿಕ್ಕಪಾಪಣ್ಣ ಎಂಬ ಮಂದಿ ಜೀವಂತವಾಗಿ ಸುಟ್ಟುಹೋದರು. ಗ್ರಾಮದ ಉಳಿದ ದಲಿತರು ಜೀವ ಉಳಿಸಿಕೊಳ್ಳಲು ರಾತ್ರೋ ರಾತ್ರಿ ಓಡಿ ಹೋದರು. ಪರಿಣಾಮ, ಶ್ರೀರಾಮಪ್ಪ ಅವರ ಕುಟುಂಬದಲ್ಲಿ ಬದುಕುಳಿದವರು ಅವರ ತಂದೆ ವೆಂಕಟರಾಯಪ್ಪ ಮಾತ್ರ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಲಿತರ ಹತ್ಯೆ ವಿರುದ್ಧ ಪ್ರಕರಣ ದಾಖಲಾಯಿತು. ಆದರೆ, ವಿಚಾರಣೆ ಮಾತ್ರ ಸರಿಯಾಗಿ ನಡೆಯಲಿಲ್ಲ ಎನ್ನುತ್ತಾರೆ ಪ್ರಕರಣದಲ್ಲಿ ವಾದಿಸಿದ್ದ ವಕೀಲ ಬಿ.ಟಿ ವೆಂಕಟೇಶ್. ಪ್ರಕರಣದ ವಿಚಾರಣೆ ವೇಳೆ, ಘಟನೆ ನಡೆದ ದಿನ ಕಂಬಾಲಪಲ್ಲಿಯಲ್ಲಿದ್ದ ಪೊಲೀಸ್ ಪೇದೆಗಳನ್ನು ವಿಚಾರಣೆ ಮಾಡಿಲ್ಲ. ವೈದ್ಯಾಧಿಕಾರಿಗಳನ್ನು ವಿಚಾರಿಸಲಾಗಿಲ್ಲ. ಸಾಕ್ಷಿಗಳು ಪೊಲೀಸರ ಎದುರು ನೀಡಿದ್ದ ಹೇಳಿಕೆಗಳನ್ನು ಕೋರ್ಟ್‌ನಲ್ಲಿ ನೀಡಲಿಲ್ಲ. ಈ ಬಗ್ಗೆಯೂ ವಿಚಾರಣೆ ಮಾಡಲಿಲ್ಲ. ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಡುತ್ತಿದ್ದ ಮುಖ್ಯ ಸಾಕ್ಷಿ ವೆಂಕಟರಾಯಪ್ಪನವರು ತೆಲುಗು ಭಾಷೆಯಲ್ಲಿ ಮಾತನಾಡುತ್ತಿದ್ದರಿಂದ, ಅವರ ಹೇಳಿಕೆಗಳನ್ನು ಕನ್ನಡಕ್ಕೆ ಭಾಷಾಂತರಿಸಲು ಸರಿಯಾದ ಭಾಷಾಂತರಕಾರರನ್ನು ನೇಮಿಸಲಿಲ್ಲ. ತನಿಖೆ ವೇಳೆ ಯಾವುದೇ ಮಾರಕಾಸ್ತ್ರ, ವಸ್ತುಗಳ ಮಹಜರು ಮಾಡಲಿಲ್ಲ! ಇಂತಹ ಹಲವಾರು ಲೋಪದೋಷಗಳು ತನಿಖೆಯಲ್ಲಿದ್ದವು.

ಈ ವರದಿ ಓದಿದ್ದೀರಾ?: ಈ ದಿನ ವಿಶೇಷ | ಮರಕುಂಬಿ ಬೆಳಕಿನಲ್ಲಿ‌ ಕಂಬಾಲಪಲ್ಲಿಯ ಕತ್ತಲು

ಆದಾಗ್ಯೂ, ಪ್ರಕರಣದ ವಿಚಾರಣೆ ನಡೆಸಿದ ಕೋಲಾರ ಸೆಷನ್ಸ್‌ ಕೋರ್ಟ್‌ 2006ರಲ್ಲಿ ಸಾಕ್ಷಾಧಾರಗಳ ಕೊರತೆಯಿಂದಾಗಿ ಎಲ್ಲ 46 ಆರೋಪಿಗಳನ್ನೂ ಖುಲಾಸೆ ಮಾಡಿತು. ಬಳಿಕ, ಪ್ರಕರಣ ಹೈಕೋರ್ಟ್‌ ಮೆಟ್ಟಿಲೇರಿತು. 2013ರಲ್ಲಿ ಹೈಕೋರ್ಟ್‌ ಕೂಡ ಅದೇ ಸಾಕ್ಷಾಧಾರಗಳ ಕೊರತೆಯನ್ನು ಗಮನಿಸಿ, ಆರೋಪಿಗಳನ್ನು ಖುಲಾಸೆಗೊಳಿಸಿತು. 2014ರಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತು.

ಅಂದಿನಿಂದ ಇಂದಿನವರೆಗೆ 12 ವರ್ಷಗಳಾಗಿವೆ. ಆದರೆ, ಸುಪ್ರೀಂ ಕೋರ್ಟ್‌ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿಲ್ಲ. ಈ ನಡುವೆ, 2019ರಲ್ಲಿ ವೆಂಕಟರಾಯಪ್ಪ ಕೂಡ ಕೊನೆಯುಸಿರೆಳೆದರು. ಈಗ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಡಲು ಆ ದಲಿತ ಕುಟುಂಬದಲ್ಲಿ ಒಬ್ಬರೂ ಉಳಿದಿಲ್ಲ. ರಾಜ್ಯದಲ್ಲಿ ನಡೆದ ಭೀಕರ ಹತ್ಯಾಕಾಂಡದಲ್ಲಿ ಈವರೆಗೆ ನ್ಯಾಯ ದೊರೆತಿಲ್ಲ. ಈಗಲೂ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ಕೊಳೆಯುತ್ತಿದೆ. ವಿಚಾರಣೆ ಕೋರಿ, ಕೋರ್ಟ್‌ನಲ್ಲಿ ಮತ್ತೊಂದು ಅರ್ಜಿ ಸಲ್ಲಿಸುವವರೂ ದಿಕ್ಕಿಲ್ಲದಂತಾಗಿದೆ. ನ್ಯಾಯ ಮರೀಚಿಕೆಯಾಗಿದೆ.  

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...