ಬೀದರ್‌ | ಅಪ್ರಾಪ್ತ ಮಕ್ಕಳ ಕೈಗೆ ವಾಹನ ನೀಡಿದವರಿಗೆ 25 ಸಾವಿರ ರೂ. ದಂಡ

Date:

  • ಬಸ್ಸಗಳಲ್ಲಿ ಪ್ರಯಾಣಿಸಿ ಅಪಘಾತ ಅವಗಢಗಳನ್ನು ತಪ್ಪಿಸಲು ಸಹಕರಿಸಲು ಮನವಿ
  • ರಸ್ತೆ ಅಪಘಾತದಲ್ಲಿ 2022ನೇ ಸಾಲಿನಲ್ಲಿ 332 ಜನ ಮೃತಪಟ್ಟಿದ್ದಾರೆ

ಸಾರ್ವಜನಿಕರ ಹಾಗೂ ಶಾಲಾ, ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬೀದರ ವಿಭಾಗದಿಂದ ಈಗಾಗಲೇ ಜಿಲ್ಲೆಯಲ್ಲಿ ಬೀದರ ನಗರ ಹಾಗೂ ಗ್ರಾಮೀಣ ಪ್ರದೇಶದ ಎಲ್ಲ ಗ್ರಾಮಗಳಿಗೆ ಸಮಯಕ್ಕೆ ಸರಿಯಾಗಿ ಸಾರಿಗೆ ಸೇವೆಯನ್ನು ಕಲ್ಪಿಸಲಾಗುತ್ತಿದೆ. ಇನ್ನೂ ಹೆಚ್ಚಿನ ಸಾರಿಗೆ ಸೇವೆಯ ಬೇಡಿಕೆಗಳು ಬಂದಲ್ಲಿ ನಿಗಮದಿಂದ ಸಾರಿಗೆ ಸೇವೆಯನ್ನು ಒದಗಿಸಿಕೊಡಲಾಗುವುದು ಎಂದು ಬೀದರ್ ವಿಭಾಗದ ಕಕರಸಾ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

“ಅಪ್ತಾಪ್ತ ಮಕ್ಕಳಿಗೆ ಪಾಲಕರಾಗಲಿ ಅಥವಾ ವಾಹನದ ಮಾಲೀಕರಾಗಲಿ ದ್ವಿಚಕ್ರ ವಾಹನಗಳನ್ನು ನೀಡಿದಲ್ಲಿ ಅಂತಹ ಪಾಲಕರಿಗೆ ಮತ್ತು ವಾಹನದ ಮಾಲೀಕರಿಗೆ ಮೋಟಾರ ಕಾಯ್ದೆಯಡಿಯಲ್ಲಿ 25,000 ರೂ. ದಂಡ ಅಥವಾ 3 ತಿಂಗಳು ಸಾಧಾರಣ ಜೈಲು ಶಿಕ್ಷೆಗೆ ಗುರಿಪಡಿಸಲಾಗುತ್ತದೆ. ಆದ್ದರಿಂದ ಸಾರಿಗೆ ನಿಗಮದ ಸೇವೆಯು ಸದುಪಯೋಗವನ್ನು ಪಡೆದುಕೊಂಡು ಅಪಘಾತ ಹಾಗೂ ಅವಗಢಗಳನ್ನು ತಪ್ಪಿಸಲು ಸಾರ್ವಜನಿಕರಲ್ಲಿ ಹಾಗೂ ಶಾಲಾ, ಕಾಲೇಜು ವಿದ್ಯಾರ್ಥಿಗಳು ಸಹಕರಿಸಬೇಕೆಂದು” ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳು ಪಾಲಿಸಿ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯಲ್ಲಿ ರಸ್ತೆ ಸುರಕ್ಷತಾ ಅಭಿಯಾನ ಜುಲೈ 2023 ರಿಂದ ಪ್ರಾರಂಭ ಮಾಡಿದ್ದು, ಆಗಸ್ಟ್ 30 ರವರೆಗೆ ರಸ್ತೆ ಅಪಘಾತದಲ್ಲಿ 214 ಜನರು ಮೃತಪಟ್ಟಿದ್ದು, 522 ಜನರು ಗಾಯಗೊಂಡಿದ್ದಾರೆ. ರಸ್ತೆ ಸುರಕ್ಷತಾ ಅಭಿಯಾನ ಜುಲೈ 2023 ರಿಂದ ಪ್ರಾರಂಭ ಮಾಡಿದ್ದರಿಂದ ರಸ್ತೆ ಅಪಘಾತದಲ್ಲಿ ಮರಣ ಮತ್ತು ಗಾಯಗೊಂಡವರ ಪ್ರಮಾಣ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಕಡಿಮೆಯಾಗಿರುವುದು ಕಂಡುಬಂದಿದೆ ಎಂದು ಬೀದರ್ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

“2022ನೇ ಸಾಲಿನಲ್ಲಿ 332 ಜನ ಮೃತಪಟ್ಟಿದ್ದು, 525 ಜನರು ಗಾಯಗೊಂಡಿದ್ದಾರೆ ಹಾಗೂ ಆಗಸ್ಟ್ 2023 ರವರೆಗೆ 214 ಜನರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುತ್ತಾರೆ. ಜುಲೈ 2023 ರಿಂದ ಜಿಲ್ಲೆಯಲ್ಲಿ ರಸ್ತೆ ಸುರಕ್ಷತಾ ಅಭಿಯಾನ ಅರಿವು ಕಾರ್ಯಕ್ರಮಗಳ ಮೂಲಕ ಪೊಲೀಸ್ ಇಲಾಖೆಯಿಂದ ಜಿಲ್ಲೆಯಾದ್ಯಂತ ರಾಷ್ಟ್ರೀಯ ಹೆದ್ದಾರಿಗಳ ಮೇಲೆ, ರಾಜ್ಯ ಹೆದ್ದಾರಿಗಳ ಮೇಲೆ, ಶಾಲಾ ಕಾಲೇಜುಗಳಲ್ಲಿ ಹಾಗೂ ಇತರೆ ಸ್ಥಳಗಳಲ್ಲಿ ಸಾರ್ವಜನಿಕರಿಗೆ ರಸ್ತೆ ಸುರಕ್ಷತಾ ಬಗ್ಗೆ ಅಭಿಯಾನಗಳು ನಡೆಸಿ ವಾಹನ ಸವಾರರು ದ್ವಿಚಕ್ರ ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ನಾಲ್ಕು ಚಕ್ರಗಳ ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬೇಕು” ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಸರ್ಕಾರಿ ಕೆಲಸ ಮಾಡಿಕೊಡಲು ಲಂಚಕ್ಕೆ ಬೇಡಿಕೆ; ಭೂಮಾಪಕನಿಗೆ ಮೂರು ವರ್ಷ ಜೈಲು ಶಿಕ್ಷೆ

“ವಾಹನ ಚಲಾಯಿಸುವಾಗ ಮೊಬೈಲ್ ಬಳಕೆ ಮಾಡಬಾರದು. ಪೋಷಕರು ಅಪ್ತಾಪ್ತ ಮಕ್ಕಳಿಗೆ ವಾಹನ ಚಲಾಯಿಸಲು ಅವಕಾಶ ಕೊಡಬಾರದು ಮತ್ತು ಹೆಲ್ಮೆಟ್ ಧರಿಸದವರನ್ನು ಕರೆಸಿ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತಗಳ ಸಿಸಿ ಟಿವಿ ಫುಟೇಜ್ ತೆಗೆದು ಅವುಗಳ ತುಣುಕು ವಿಡಿಯೋ ತೋರಿಸುವುದರ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗಿದೆ.
ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಗಳು ಕಡ್ಡಾಯವಾಗಿ ಪಾಲನೆ ಮಾಡಿದರೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ರಸ್ತೆ ಅಪಘಾತದಲ್ಲಿ ಮೃತರ ಹಾಗೂ ಗಾಯಗೊಳ್ಳುವವರ ಸಂಖ್ಯೆ ಕಡಿಮೆಯಾಗಬಹುದು” ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...