ಬಾಕಿ ಇದ್ದ 3,900 ಕಡತ ವಿಲೇವಾರಿ, ಕಂದಾಯ ಇಲಾಖೆಗೆ 2ನೇ ಸ್ಥಾನ: ಸಚಿವ ಕೃಷ್ಣಭೈರೇಗೌಡ

Date:

  • ‘ಹೊಸದಾಗಿ 2,123 ಕಡತ ಬಂದಿದ್ದು, ಶೀಘ್ರ ವಿಲೇವಾರಿ’
  • ಕಡತ ವಿಲೇವಾರಿ ವಿಚಾರದಲ್ಲಿ ‘ಎ’ ವರ್ಗದ ಕಾರ್ಯಕ್ಷಮತೆ

ಕಂದಾಯ ಇಲಾಖೆಯಲ್ಲಿ ಈವರೆಗೂ ಬಾಕಿ ಉಳಿದಿದ್ದ ಕಡತಗಳನ್ನು ವಿಲೇವಾರಿ ಮಾಡಲು ಆದ್ಯತೆ ನೀಡಲಾಗಿದ್ದು, ಈವರೆಗೆ ಬಾಕಿ ಇದ್ದ 3,900 ಕಡತಗಳನ್ನು ವಿಲೇವಾರಿ ಮಾಡಲಾಗಿದೆ. ಶೇ.183 ರಷ್ಟು ಕಾರ್ಯಕ್ಷಮತೆಯಿಂದ ಇಲಾಖೆ ಕೆಲಸ ನಿರ್ವಹಿಸುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿರುವ ಅವರು, “ಕಂದಾಯ ಇಲಾಖೆಯಲ್ಲಿ ಕಡತಗಳು ಮುಂದಕ್ಕೆ ಹೋಗೋದೆ ಇಲ್ಲ ಎಂಬ ದೂರುಗಳೂ ಸಹ ಜನರಿಂದ ಕೇಳಿದ್ದುಂಟು. ಹಿಂದಿನ ಈ ಎಲ್ಲ ಪರಿಪಾಠಗಳಿಗೂ ಪೂರ್ಣ ವಿರಾಮ ಇಡುವ ಸಂಕಲ್ಪದೊಂದಿಗೆ ಪ್ರಸ್ತುತ ಕಂದಾಯ ಇಲಾಖೆ ಕೆಲಸ ನಿರ್ವಹಿಸುತ್ತಿದೆ” ಎಂದಿದ್ದಾರೆ.

“ಕಂದಾಯ ಇಲಾಖೆಯಲ್ಲಿ ಸಕಾರಾತ್ಮಕ ಬದಲಾವಣೆ ತರಬೇಕು ಎಂಬ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನ್ನ ಮೇಲೆ ಭರವಸೆ ಇಟ್ಟು ಕಂದಾಯ ಇಲಾಖೆ ಜವಾಬ್ದಾರಿ ನೀಡಿದರು. ಅಧಿಕಾರ ವಹಿಸಿದ ಕಳೆದ ಎರಡು ತಿಂಗಳಿನಿಂದ ಇಡೀ ಇಲಾಖೆಗೆ ಚುರುಕು ಮುಟ್ಟಿಸಿ ಎಲ್ಲ ಕಡತಗಳನ್ನೂ ತ್ವರಿತವಾಗಿ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗ್ಯಾರಂಟಿ ಯೋಜನೆ ಮುಂದಿಟ್ಟುಕೊಂಡು ಲೋಕಸಭೆ ಎದುರಿಸೋಣ ಬನ್ನಿ: ಮೋದಿಗೆ ಸಿದ್ದರಾಮಯ್ಯ ಸವಾಲು

“ಹೊಸದಾಗಿ 2,123 ಕಡತಗಳು ಬಂದಿದ್ದು ಈ ಕಡತಗಳನ್ನೂ ಶೀಘ್ರದಲ್ಲಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಡತ ವಿಲೇವಾರಿ ವಿಚಾರದಲ್ಲಿ ಕಂದಾಯ ಇಲಾಖೆ ಈವರೆಗೆ ‘ಎ’ ವರ್ಗದ ಕಾರ್ಯಕ್ಷಮತೆ ಪ್ರದರ್ಶಿಸಿಲ್ಲ. ಆದರೆ, ನಾವು ಕಡತ ವಿಲೇವಾರಿ ವಿಚಾರದಲ್ಲಿ ‘ಎ’ ವರ್ಗದ ಜೊತೆಗೆ ಎಲ್ಲಾ ಇಲಾಖೆಗಳ ಪೈಕಿ ಎರಡನೇ ಸ್ಥಾನದಲ್ಲಿದ್ದೇವೆ ಮತ್ತು ದೊಡ್ಡ ಇಲಾಖೆಗಳ ಪೈಕಿ ಮೊದಲ ಸ್ಥಾನದಲ್ಲಿದ್ದೇವೆ. ಇದಕ್ಕೆ ಕಾರಣವಾದ ನಮ್ಮ ಇಲಾಖೆಯ ತಂಡಕ್ಕೆ ಹೃದಯಪೂರ್ವಕ ಧನ್ಯವಾದಗಳು ಅರ್ಪಿಸಲು ಇಚ್ಛಿಸುತ್ತೇನೆ” ಎಂದಿದ್ದಾರೆ.

“ಹಲವು ವರ್ಷಗಳಿಂದ ಬಾಕಿ ಇರುವ ಫೈಲ್ ಗಳನ್ನು ತ್ವರಿತವಾಗಿ ತೆರವುಗೊಳಿಸುತ್ತೇವೆ. ಮತ್ತು ಪೇಪರ್ ರಹಿತ ಡಿಜಿಟಲ್ ಸೇವೆ ಸೇರಿದಂತೆ ಏನೆಲ್ಲಾ ಸಾಧ್ಯತೆಗಳಿವೆಯೋ ಆ ಎಲ್ಲವನ್ನೂ ಬಳಸಿಕೊಂಡು ಅತ್ಯಂತ ವೇಗವಾಗಿ ಇಲಾಖೆಯ ಕಡತಗಳನ್ನು ವಿಲೇವಾರಿ ಮಾಡುವಲ್ಲಿ ನಾವು ಬದ್ಧರಾಗಿದ್ದೇವೆ ಎಂದು ಈ ಮೂಲಕ ತಿಳಿಯಪಡಿಸುತ್ತೇವೆ. ಉತ್ತಮ ಆಡಳಿತವನ್ನು ತಲುಪಿಸುವುದೊಂದೆ ನಮ್ಮ ಗುರಿ” ಎಂದು ಕೃಷ್ಣಭೈರೇಗೌಡ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...