ಗೌರಿಬಿದನೂರು | ಮೂವರು ಮನೆಗಳ್ಳರ ಬಂಧನ

Date:

ಮನೆಗಳ್ಳತನ ಮಾಡುತ್ತಿದ್ದ ಮೂವರು ಖತರ್ನಾಕ್‌ ಕಳ್ಳರನ್ನು ಚಿಕ್ಕಬಳ್ಳಾಪುರ ಹಾಗೂ ಗೌರಿಬಿದನೂರು ನಗರ ಠಾಣೆ ಪೊಲೀಸರ ವಿಶೇಷ ತಂಡ ಬಂಧಿಸಿದ್ದು, ಕಳ್ಳರಿಂದ ಸುಮಾರು 35 ಲಕ್ಷ ಮೌಲ್ಯದ ಚಿನ್ನಾಭರಣ, ನಗದನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ತಾಲೂಕಿನ ಜಿಗಣಿ ಬಳಿಯ ಹಾರೋಗದ್ದೆ ಗ್ರಾಮದ ನಿವಾಸಿ ಶಂ ನೂರುಲ್ಲಾ ಬಿನ್‌ ಫಕ್ರುದ್ದಿನ್‌(50), ವಿನೋದ್‌ ಮಾರ್ಕಕರ್‌ ಬಿನ್‌ ವೀರಭದ್ರಪ್ಪ ಮತ್ತು ಸಾಗರ್‌ ಬಂಧಿತ ಕಳ್ಳರು.

ಈ ಮೂವರು ಸೇರಿ ಗೌರಿಬಿದನೂರು ನಗರದ ತ್ಯಾಗರಾಜ ಕಾಲೋನಿಯ ನಿವಾಸಿ ಅಶ್ವತ್ಥನಾರಾಯಣ ಶೆಟ್ಟಿ ಬಿನ್‌ ಲೇ.ಸತ್ಯನಾರಾಯಣಶೆಟ್ಟಿ ಎಂಬುವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಬೀಗ ಮುರಿದು ಜ.14ರಂದು ಮನೆಯಲ್ಲಿದ್ದ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದರು. ಈ ಕುರಿತು ಸಂತ್ರಸ್ತರು ಗೌರಿಬಿದನೂರು ಠಾಣೆಯಲ್ಲಿ ಮರುದಿನ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್ಪಿ ಕುಶಾಲ್‌ ಚೌಕ್ಸೆ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡ ರಚಿಸಿದ್ದ ಚಿಕ್ಕಬಳ್ಳಾಪುರ ಪೊಲೀಸರು ಕಳ್ಳರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳ್ಳರಿಂದ ಒಟ್ಟು 412 ಗ್ರಾಂ ಬಂಗಾರ, 2.5ಕೆಜಿ ಬೆಳ್ಳಿ, 2 ವಾಚ್‌ ಮತ್ತು 420ರೂಪಾಯಿ ರೂ. ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.

ವಿಶೇಷ ತಂಡದಲ್ಲಿ ಗೌರಿಬಿದನೂರು ವೃತ್ತದ ಸಿಪಿಐ ಕೆ. ಪಿ ಸತ್ಯನಾರಾಯಣ, ಎಸ್‌ಐಗಳಾದ ಚಂದ್ರಕಲಾ, ಗೋಪಾಲ, ರಮೇಶ್‌ ಗುಗ್ಗುರಿ, ಪ್ರಭಾಕರ್‌, ಸಿಬ್ಬಂದಿಗಳಾದ ಶ್ರೀರಾಮಯ್ಯ, ರಿಜ್ವಾನ್‌, ಶ್ರೀನಿವಾಸ್‌ರೆಡ್ಡಿ, ಅಶ್ವತ್ಥ, ಮಹಂತೇಶ್‌, ಮರಳುಸಿದ್ದೇಶ್ವರ, ಶಿವಶೇಖರ್‌, ರವಿಕುಮಾರ್‌, ಮುನಿಕೃಷ್ಣ ಅವರಿದ್ದರು. ಕಳ್ಳರನ್ನು ಬಂಧಿಸಿದ ವಿಶೇಷ ತಂಡಕ್ಕೆ ಎಸ್ಪಿ ಕುಶಾಲ್‌ ಚೌಕ್ಸೆ ನಗದು ಬಹುಮಾನವನ್ನು ಘೋಷಣೆ ಮಾಡಿದ್ದು, ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...