ಕಲಬುರಗಿ | 371 (ಜೆ) ವಿರುದ್ಧ ಅಪಪ್ರಚಾರ; ಜೂ.1ರಂದು ಬೃಹತ್‌ ಪ್ರತಿಭಟನೆ

Date:

ಸಂವಿಧಾನದ 371 (ಜೆ ) ಜಾರಿಯಿಂದ ರಾಜ್ಯದ ಇತರೆ ಜಿಲ್ಲೆಗಳಿಗೆ ಅನ್ಯಾಯವಾಗುತ್ತಿದೆ ಎಂದು ಜನರಿಗೆ ತಪ್ಪು ಸಂದೇಶ ನೀಡಲು ಬೆಂಗಳೂರಿನಲ್ಲಿ ಕೆಲವರು ಪ್ರತಿಭಟನೆ ನಡೆಸಿ, ಈ ಭಾಗದ ಅಸ್ಮಿತೆಗೆ ಧಕ್ಕೆ ತರುವ ಹುನ್ನಾರ ನಡೆಯುತ್ತಿದ್ದು, ಅದಕ್ಕೆ ಪ್ರತಿಯಾಗಿ ಜೂ.1ರಂದು ಕಲಬುರಗಿಯಲ್ಲಿ ಬೃಹತ್ ಹೋರಾಟ ನಡೆಸಲಾಗುವುದು ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಪ್ರಮುಖರು ತಿಳಿಸಿದರು.

ಕಲಬುರಗಿಯ ಪತ್ರಿಕಾ ಭವನದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಅಧ್ಯಕ್ಷ ಲಕ್ಷ್ಮಣ ದಸ್ತಿ ಹಾಗೂ ಎಚ್‍ಕೆಇ ಅಧ್ಯಕ್ಷ ಶಶಿಲ್ ಜಿ.ನಮೋಶಿ ಮಾತನಾಡಿ, “ಸರಕಾರಿ ನೌಕರಿ, ಶೈಕ್ಷಣಿಕ ಪ್ರವೇಶಗಳಲ್ಲಿ ಮೀಸಲಾತಿ ಮತ್ತು 371(ಜೆ) ಅಡಿ ಸ್ವಾಯತ್ತ ಅಭಿವೃದ್ಧಿ ಮಂಡಳಿ ರಚನೆಯಾಗಿ ಒಂದು ದಶಕ ಕಳೆದಿದೆ. ಕೆಲವು ಅಭಿವೃದ್ಧಿ ಕಾರ್ಯಗಳು ಬಂದಿವೆ. ಭವಿಷ್ಯದಲ್ಲಿಅಭಿವೃದ್ಧಿಯ ವೇಗ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಹೀಗಿರುವಾಗ, ಸಂವಿಧಾನ ಕಲ್ಪಿಸಿದ ಮೀಸಲಾತಿಯ ಮೂಲ ಸಿದ್ಧಾಂತದ ಅರ್ಥವೇ ಗೊತ್ತಿಲ್ಲದ ಪಟ್ಟಭದ್ರ ಹಿತಾಸಕ್ತಿಗಳು ಅಪಪ್ರಚಾರದ ಮೂಲಕ ಅಖಂಡ ಕರ್ನಾಟಕ ಒಡೆಯುವ ಹತಾಶ ಯತ್ನ ನಡೆಸುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

“ಕಲ್ಯಾಣಕ ರ್ನಾಟಕ ಪ್ರದೇಶ ಎಷ್ಟು ಹಿಂದುಳಿದಿದೆ ಎಂಬುದನ್ನು ಅಧಿಕೃತವಾಗಿ ಖಾತ್ರಿಪಡಿಸಿಕೊಳ್ಳಲು ಸರಕಾರದ ಅಧಿಕೃತ ಸಂಸ್ಥೆಗಳಾದ ಸತ್ಯಶೋಧನಾ ಸಮಿತಿ, ಧರಂಸಿಂಗ್ ಸಮಿತಿ ಹಾಗೂ ನಂಜುಂಡಪ್ಪ ವರದಿ ಸಮಿತಿಗಳು ತಮ್ಮ ತಮ್ಮ ವರದಿಗಳಲ್ಲಿ ಸ್ಪಷ್ಟವಾಗಿ ಇರುವ ಸತ್ಯವನ್ನುಉಲ್ಲೇಖಿಸಿವೆ. ವಿಶಾಲ ಕರ್ನಾಟಕದ ಮಾತಿಗೆ ಬಂದಾಗ ಕಲ್ಯಾಣಕ ರ್ನಾಟಕ ಜಿಲ್ಲೆಗಳ ಜನರು ಶಿಕ್ಷಣ ಮತ್ತುಉದ್ಯೋಗಾವಶಕಾಶ ಮತ್ತು ಅಭಿವೃದ್ಧಿಯಿಂದ ವಂಚಿತರಾದಾಗ ಕ್ಯಾರೆ ಎನ್ನದ ಸಂವಿಧಾನ ವಿರೋಧಿ ಶಕ್ತಿಗಳು ಇಂದು 371 (ಜೆ) ಅಡಿ ಕಲ್ಯಾಣ ಭಾಗಕ್ಕೆ ಸಂವಿಧಾನ ಬದ್ಧವಾಗಿ ಸವಲತ್ತುಗಳು ಲಭಿಸುತ್ತಿರುವಾಗ ಆರಂಭಿಕ ಹಂತದಲ್ಲಿಯೇ 371(ಜೆ) ಕುರಿತು ವಿರೋಧಿಸುತ್ತಿರುವ ಮೂಲಕ ಕೀಳುಮಟ್ಟದ ಬುದ್ಧಿ ಪ್ರದರ್ಶನ ಮಾಡುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜೂನ್ 1 ರಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯಿಂದ ಬೆಳಿಗ್ಗೆ10 ಗಂಟೆಗೆ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ನಡೆಯುವ ಬೃಹತ್ ಹೋರಾಟದಲ್ಲಿ ಕಲಬುರಗಿ ನಗರ ಹಾಗೂ ಜಿಲ್ಲೆಯಾದ್ಯಂತ ಇರುವ ಸರಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳು, ವಿವಿಧ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು, ಸಿಬ್ಬಂದಿ, ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಮುಖಂಡರು ಹಾಗೂ ಎಲ್ಲ ರಾಜಕಿಯ ಪಕ್ಷಗಳ ಮುಖಂಡರು, ಆಯಾ ಕ್ಷೇತ್ರದ ಗಣ್ಯರು, ವಿವಿಧಸಂಘ ಸಂಸ್ಥೆಗಳ ಮುಖಂಡರು ಭಾಗವಹಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ನಿಷ್ಪಕ್ಷಪಾತ ಮತ ಎಣಿಕೆಗೆ ʼಎದ್ದೇಳು ಕರ್ನಾಟಕʼ ಆಗ್ರಹ

ಪತ್ರಿಕಾಗೋಷ್ಠಿಯಲ್ಲಿ ಶರಣ ಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಕರ್ನಾಟಕ ಪೀಪಲ್ಸ್ ಶಿಕ್ಷಣ ಸಂಸ್ಥೆಯ ಶಾಂತಪ್ಪ ಸೂರನ್, ಶಿಕ್ಷಣ ತಜ್ಞರಾದ ಪ್ರತಾಪಸಿಂಗ್ ತಿವಾರಿ, ಡಾ.ಎಸ್.ಎ.ಖಾದ್ರಿ, ಡಾ. ಬಸವರಾಜ ಕುಮನೂರ, ಪ್ರೊ.ಆರ್.ಕೆ.ಹುಡಗಿ, ಡಾ.ಬಿ.ಸಿ.ಗುಳಶೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...