ಕಲಬುರಗಿ | ಸಾಂವಿಧಾನಿಕ 371(ಜೆ) ಕಲಂ ಕುರಿತು ಜಾಗೃತಿ ಕಾರ್ಯಗಾರಕ್ಕೆ ಚಿಂತನೆ

Date:

ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಪರಿಣಿತ ತಜ್ಞರ ನಿಯೋಗವು ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಅವರಿಗೆ ಅವರ ನಿವಾಸದಲ್ಲಿ ಭೇಟಿಯಾಗಿ ಕಲಬುರಗಿ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿಯ ವಿಷಯಗಳ ಕುರಿತು ಚರ್ಚಿಸಿ ಮನವರಿಕೆ ಮಾಡಿತು.

ನೂತನ ಸಂಸದರಿಗೆ ಅಭಿನಂದನೆ ಸಲ್ಲಿಸಿದ  ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ, ʼಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕೇಂದ್ರ ಸರಕಾರ ಘೋಷಣೆ ಮಾಡಿರುವ ಯೋಜನೆಗಳ ಬಗ್ಗೆ ವಿವರಿಸಿದರು. ಕಲಬುರಗಿಯ ರೈಲ್ವೆ ವಿಭಾಗೀಯ ಕಚೇರಿ ಸ್ಥಾಪನೆ, ಜವಳಿ ಪಾರ್ಕ್‌ ಅನುಷ್ಠಾನ, ಕಲಬುರಗಿ ಎರಡನೇ ವರ್ತುಲ ರಸ್ತೆ, ಕಲ್ಯಾಣ ಪಥ ಹೆದ್ದಾರಿ ರಸ್ತೆಗಳು, ಏಮ್ಸ್ ಸ್ಥಾಪನೆ ಸೇರಿದಂತೆ ಹಲವು ವಿಷಯಗಳ ಮನವರಿಕೆ ಮಾಡಿದರು.

ಚಿಂತಕ ಪ್ರೊ.ಆರ್.ಕೆ.ಹುಡಗಿ ಮಾತನಾಡಿ, ʼ371ನೇ(ಜೆ) ಕಲಂ ಕುರಿತು ಕಲ್ಯಾಣ ಕರ್ನಾಟಕ ಪ್ರದೇಶದ ವಿಭಾಗೀಯ ಕೇಂದ್ರವಾದ ಕಲಬುರಗಿಯಲ್ಲಿ ಒಂದು ದಿನದ ಬೃಹತ್ ಕಾರ್ಯಾಗಾರ ಸಮಿತಿ ಹಮ್ಮಿಕೊಳ್ಳಲು ನಿರ್ಧರಿಸಿದೆ. ಈ ಕಾರ್ಯಾಗಾರದ ಉದ್ಘಾಟನೆ ಎಐಸಿಸಿ ಅಧ್ಯಕ್ಷರಿಂದ ಉದ್ಘಾಟಿಸಬೇಕು. ಕಲ್ಯಾಣ ಕರ್ನಾಟಕದ ಸಚಿವರು, ಸಂಸದರು, ಶಾಸಕರು ಸೇರಿದಂತೆ ಸಂಘ-ಸಂಸ್ಥೆಗಳ ಅಧ್ಯಕ್ಷರು, ವಿಶೇಷವಾಗಿ ಏಳು ಜಿಲ್ಲೆಯ ಪರಿಣಿತ ವ್ಯಕ್ತಿಗಳನ್ನು ಆಹ್ವಾನಿಸಿ 371ನೇ(ಜೆ) ಕಲಂ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಬೇಕಿದೆ. ಇದರ ಪರಿಣಾಮಕಾರಿ ಅನುಷ್ಠಾನದ ಕ್ರಮಗಳು ಹಾಗೂ ಕಲ್ಯಾಣ ಕರ್ನಾಟಕದ ರಚನಾತ್ಮಕ ಅಭಿವೃದ್ಧಿ ವಿಚಾರಗಳನ್ನು ಚರ್ಚಿಸುವ ಫಲಪ್ರದ ಐತಿಹಾಸಿಕ ವೇದಿಕೆಯಾಗಬೇಕು. ಇದಕ್ಕೆ ನೂತನ ಸಂಸದರು ಸ್ಪಂದಿಸಬೇಕುʼ ಎಂದು ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ ಮಾತನಾಡಿ, ʼಕಲಬುರಗಿ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಗಂಭೀರವಾಗಿ ಪರಿಗಣಿಸಿ ಸರಕಾರದ ಮಟ್ಟದಲ್ಲಿ ಒತ್ತಾಯ ತರಲಾಗುವುದು. ಕಲ್ಯಾಣ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಕಲ್ಯಾಣ ಕರ್ನಾಟಕದ ಐದೂ ಲೋಕಸಭಾ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿ ಸಂಘಟಿತ ರಾಜಕಿಯ ಇಚ್ಛಾಶಕ್ತಿ ವ್ಯಕ್ತಪಡಿಸಲಾಗುವುದುʼ ಎಂದು ತಿಳಿಸಿದರು.

ʼಕಲ್ಯಾಣ ಕಲ್ಯಾಣ ಹೋರಾಟ ಸಮಿತಿ ಆಯೋಜಿಸುವ ಒಂದು ದಿನದ ಬೃಹತ್ ಕಾರ್ಯಾಗಾರದಲ್ಲಿ ತಾವು ಸೇರಿದಂತೆ ಎಲ್ಲರನ್ನೂ ಸೇರಿಸುವ ಕಾರ್ಯಕ್ಕೆ ತಾವು ಸಂಪೂರ್ಣವಾಗಿ ಸಹಕಾರ ಸ್ಪಂದನೆ ನೀಡುವುದಾಗಿ ಸಂಸದರು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಈ ಬಾರಿಯ ಅಧಿವೇಶನದಲ್ಲಾದರೂ ಜನಪರ ಚರ್ಚೆ-ವಾಗ್ವಾದ ನಡೆಯಬಹುದೇ?

ನಿಯೋಗದಲ್ಲಿ ಪ್ರಮುಖರಾದ ಪ್ರೊ. ಬಸವರಾಜ ಕುಮನೂರ, ಪ್ರೊ. ಶಂಕ್ರೆಪ ಹತ್ತಿ, ಡಾ. ಬಸವರಾಜ ಕಳಸಾ, ಡಾ. ಮಾಜಿದ್ ದಾಗಿ, ವಿನಾಯಕ ಪತ್ರಗಾರ, ಜಾನ್ ವಿಲ್ಸನ್, ರೌಫ್ ಖಾದರಿ, ಅಸ್ಲಂ ಚೌಂಗೆ, ಶಿವಾನಂದ ಕಾಂದೆ, ಮಂಜೂರ ಡೆಕ್ಕನಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...