40% ಕಮಿಷನ್ | ತಪ್ಪು ಮಾಡಿದವರನ್ನು ಶಿಕ್ಷಿಸಿ, ನಾನೇ ನಿಮ್ಮ ಕಾಲಿಗೆ ನಮಸ್ಕರಿಸುವೆ: ಪ್ರತಾಪ್‌ ಸಿಂಹ

Date:

  • ಕಾಮಗಾರಿಗೆ ಹಣ ಬಿಡುಗಡೆ ಮಾಡುವುದನ್ನು ಏಕೆ ತಡೆದಿದ್ದೀರಿ: ಪ್ರಶ್ನೆ
  • ಗ್ಯಾರಂಟಿ ಬಗ್ಗೆ ಷರತ್ತು ವಿಧಿಸಿದರೆ ಜೂನ್​ 1ರಿಂದ ಹೋರಾಟ: ಎಚ್ಚರಿಕೆ

ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಕೂಡಲೇ ಆ ಬಗ್ಗೆ ತನಿಖೆಗೆ ಆದೇಶಿಸಲಿ. ತಪ್ಪು ಮಾಡಿದವರನ್ನು ಶಿಕ್ಷಿಸಿ, ನಾನೇ ನಿಮ್ಮ ಕಾಲಿಗೆ ನಮಸ್ಕರಿಸುವೆ. ಕಮಿಷನ್​​ ಪಡೆದವರನ್ನು ಜೈಲಿಗೆ ಕಳಿಸುವ ಹೊಣೆ ನಿಮ್ಮದು. ಇಲ್ಲದಿದ್ರೆ ನೀವು ಹೇಳಿದ್ದು ಸುಳ್ಳು ಅಂತಾಗುತ್ತೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು.

ಮೈಸೂರಿನಲ್ಲಿ ಗುರುವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಕಾಮಗಾರಿಗೆ ಹಣ ಬಿಡುಗಡೆ ಮಾಡುವುದನ್ನು ಏಕೆ ತಡೆದಿದ್ದೀರಿ. ಎಷ್ಟು ಪರ್ಸೆಂಟ್ ಕಮಿಷನ್‌ಗಾಗಿ ಕಾಯುತ್ತಿದ್ದೀರಾ” ಎಂದು ಪ್ರಶ್ನಿಸಿದರು.

“ಕಾಂಗ್ರೆಸ್‌ನವರ ಮುಖ ನೋಡಿ ರಾಜ್ಯದ ಜನತೆ ಮತ ಹಾಕಿಲ್ಲ. ಅವರು ಘೋಷಿಸಿರುವ ಗ್ಯಾರಂಟಿ ಕಾರ್ಡ್ ನೋಡಿ ಮತ ಹಾಕಿದ್ದಾರೆ. ಕೊಟ್ಟ ಭರವಸೆ ಈಡೇರಿಸಿ. ರಾಜಸ್ಥಾನದಲ್ಲಿ ಇದೇ ರೀತಿ ಹೇಳಿ ಇವತ್ತಿನವರೆಗೆ ಮಾಡಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್ ಗ್ಯಾರಂಟಿ ಕಾರ್ಡ್‌ ಕುರಿತು ಯಾವುದೇ ಷರತ್ತುಗಳ ಬಗ್ಗೆ ಉಲ್ಲೇಖಿಸಿಲ್ಲ. ಗ್ಯಾರಂಟಿಗಳ ಜಾರಿ ಬಗ್ಗೆ ಜೂನ್​ 1ರವರೆಗೆ ಕಾಯುತ್ತೇವೆ. ಷರತ್ತುಗಳು ಇಲ್ಲದೆ ಗ್ಯಾರಂಟಿಗಳನ್ನು ಜಾರಿಮಾಡಬೇಕು. ಒಂದು ವೇಳೆ ಷರತ್ತು ವಿಧಿಸಿದರೆ ಜೂನ್​ 1ರಿಂದ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಯೋಗಿ ಸಿಎಂ ಆದ ನಂತರ ರಾಜ್ಯದಲ್ಲಿ 15 ದಿನಕ್ಕೊಂದು ಎನ್‌ಕೌಂಟರ್‌

“ಗ್ಯಾರಂಟಿ ಕಾರ್ಡ್ ಅಲ್ಲಿ ಕಂಡೀಷನ್ ಅಪ್ಲೈ ಅಂತಾ ಎಲ್ಲೂ ಹಾಕಿಲ್ಲ. ಎಲ್ಲ ಮನೆಯ ಯಜಮಾನಿಗೆ 2 ಸಾವಿರ ಕೊಡಬೇಕು. ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕೊಡಬೇಕು. ಜೂನ್ 1 ರಿಂದ 200 ಯೂನಿಟ್ ಒಳಗೆ ವಿದ್ಯುತ್ ಬಿಲ್ ಬಂದರೆ ಯಾರು ಕಟ್ಟಬೇಡಿ” ಎಂದರು.

“ಸಿದ್ದರಾಮಯ್ಯ ಅಥವಾ ನಾನು ಯಾರು ಆರ್ಥಿಕ ತಜ್ಞರಲ್ಲ. ಸಿಎಂ ಕುರ್ಚಿ ಅನ್ನೋದು ಯಾರ ಸ್ವತ್ತಲ್ಲ. ಆದರೆ ಪೊಲೀಸ್ ವ್ಯವಸ್ಥೆ ಅನ್ನೋದು ಶಾಶ್ವತ ಇರುತ್ತದೆ. ವಿಧಾನಸೌಧದದಲ್ಲಿ ಕೂತು ಪೊಲೀಸ್ ಇಲಾಖೆಗೆ ಧಮ್ಕಿ ಹಾಕುತ್ತೀರಾ? ಮೊದಲು ಪೊಲೀಸ್ ಇಲಾಖೆಗೆ ಧಮ್ಕಿ ಹಾಕುವುದು ನಿಲ್ಲಿಸಿ ಎಂದು ಪ್ರತಾಪ ಸಿಂಹ ವಾಗ್ದಾಳಿ ಮಾಡಿದರು.

“ಈ ಫಲಿತಾಂಶ ಲೋಕಸಭಾ ಚುನಾವಣೆ ಮೇಲೆ ಪ್ರಭಾವ ಬೀರಲ್ಲ. ದೇಶಕ್ಕೆ ಎಂತಹ ನಾಯಕ ಬೇಕು ಅನ್ನೋದು ಕನ್ನಡಿಗರಿಗೆ ಗೊತ್ತಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...