ರಾಜ್ಯದಲ್ಲಿ 3 ವರ್ಷಗಳಲ್ಲಿ 45,000 ಅಪ್ರಾಪ್ತೆಯರು ಗರ್ಭಿಣಿಯಾಗಿದ್ದಾರೆ

Date:

2020ರಿಂದ 2023ರವರೆಗೆ ರಾಜ್ಯದಲ್ಲಿ 45,000ಕ್ಕೂ ಹೆಚ್ಚು ಹದಿಹರೆಯದ ಹೆಣ್ಣುಮಕ್ಕಳು ಗರ್ಭಿಣಿಯರಾಗಿದ್ದಾರೆ. ಅವರಲ್ಲಿ ಕೆಲವರು ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರಾಗಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರಿನ ಒಡನಾಡಿ ಸಂಸ್ಥೆಯು ಆರ್‌ಟಿಐ ಮೂಲಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪಡೆದ ಮಾಹಿತಿಯ ಪ್ರಕಾರ, 2020ರ ಜನವರಿಯಿಂದ 2023ರ ಜೂನ್‌ವರೆಗೆ 45,000ಕ್ಕೂ ಹೆಚ್ಚು ಅಪ್ರಾಪ್ತೆಯರು ಗರ್ಭ ಧರಿಸಿದ್ದಾರೆ. 2023ರ ಜನವರಿಯಿಂದ ಜೂನ್‌ ನಡುವೆಯೇ 2,736 ಬಾಲಕಿಯರು ಗರ್ಭಿಣಿಯಾರಾಗಿದ್ದಾರೆ.

2020ರಲ್ಲಿ 10,101, 2021ರಲ್ಲಿ 13,159 ಅಪ್ರಾಪ್ತೆಯರು ಗರ್ಭವತಿಯರಾಗಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಹದಿಹರೆಯದ ಅಪ್ರಾಪ್ತೆಯರಲ್ಲಿ ಗರ್ಭಧಾರಣೆಯು ದ್ವಿಗುಣಗೊಳ್ಳುತ್ತಿದೆ. ಬಾಲ್ಯ ವಿವಾಹ ಮತ್ತು ಅಪ್ರಾಪ್ತ ವಯಸ್ಸಿನಲ್ಲಿಯೇ ಗರ್ಭಿಣಿಯರಾಗುತ್ತಿರುವ ಕಾರಣ, ಬಾಲಕಿಯರು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಅಪ್ರಾಪ್ತ ವಯಸ್ಸಿನಲ್ಲಿ ಗರ್ಭ ಧರಿಸುವುದು ಅವರ ಜೀವಕ್ಕೂ ಅಪಾಯವಿದೆ. ಆದರೂ, ಈ ಬಗ್ಗೆ ಯಾವುದೇ ಚರ್ಚೆಗಳು ನಡೆಯುತ್ತಿಲ್ಲ ಎಂದು ಒಡನಾಡಿ ಸಂಸ್ಥೆಯ ಸಹ ಸಂಸ್ಥಾಪಕ ಎಲ್‌ ಪರಶುರಾಮ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಾಯಿ ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆ ಎದುರಾಗುತ್ತಿದೆ. ಅಪ್ರಾಪ್ತ ತಾಯಂದಿರಿಗೆ ಮಗುವಿನ ಆರೈಕೆಯ ಬಗ್ಗೆ ಮಾರ್ಗದರ್ಶನದ ಅಗತ್ಯವಿರುತ್ತದೆ. ಬಾಲ್ಯದಲ್ಲಿಯೇ ಹೆಣ್ಣುಮಕ್ಕಳು ತಮ್ಮ ಜೀವನವನ್ನು ಕಳೆದುಕೊಳ್ಳುತ್ತಿದ್ದಾರೆ. ಆದರೂ, ರಾಜ್ಯ ಸರ್ಕಾರ ಇಂತಹ ಗಂಭೀರ ಸಮಸ್ಯೆಗಳನ್ನು ಪರಿಗಣಿಸುತ್ತಿಲ್ಲ. ವಿಧಾನಸಭೆಯಲ್ಲಿ ಈ ಬಗ್ಗೆ ಯಾವುದೇ ಚರ್ಚೆಗಳು ನಡೆಯುತ್ತಿಲ್ಲ. ಅಪ್ರಾಪ್ತೆಯರನ್ನು ರಕ್ಷಿಸಲು ಕಾನೂನುಗಳನ್ನು ಅನುಷ್ಠಾನಗೊಳಿಸುತ್ತಿಲ್ಲ” ಎಂದು ಅವರು ಕಿಡಿಕಾರಿದ್ದಾರೆ.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ದತ್ತಾಂಶದ ಪ್ರಕಾರ, 2020ರಿಂದ 2023ರ ಜೂನ್‌ವರೆಗೆ ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯಗಳಿಗೆ ಸಂಬಂಧಿಸಿದಂತೆ ಒಟ್ಟು 584 ಅಪ್ರಾಪ್ತ ಸಂತ್ರಸ್ತೆಯರಿಗೆ ಪರಿಹಾರ ನೀಡಲಾಗಿದೆ.

2020-21ರಲ್ಲಿ 219 ಅಪ್ರಾಪ್ತ ಸಂತ್ರಸ್ತರಿಗೆ 5.84 ಕೋಟಿ ರೂ. ಪರಿಹಾರವನ್ನು ನೀಡಲಾಗಿದೆ. 2021-22ರಲ್ಲಿ 187 ಸಂತ್ರಸ್ತರಿಗೆ 5.29 ಕೋಟಿ ರೂ. ಪರಿಹಾ ಪಾವತಿಸಲಾಗಿದೆ. 2022-2023ರ ಸಾಲಿನಲ್ಲಿ 178 ಸಂತ್ರಸ್ತರಿಗೆ 6.68 ಕೋಟಿ ರೂ. ಪರಿಹಾರ ನೀಡಲಾಗಿದೆ ಎಂದು ಪ್ರಾಧಿಕಾರದ ದತ್ತಾಂಶಗಳು ತಿಳಿಸಿವೆ ಎಂದು ಪರಶುರಾಮ್ ವಿವರಿಸಿದ್ದಾರೆ.

ಬಾಲ್ಯ ವಿವಾಹ, ಅಪ್ರಾಪ್ತೆಯರ ಮೇಲಿನ ದೌರ್ಜನ್ಯಗಳನ್ನು ತಡೆಯಲು ಕ್ರಮ ವಹಿಸಬೇಕು. ಹದಿಹರೆಯವರ ಮೇಲೆ ದೌರ್ಜನ್ಯ ಎಸಗುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪರಶುರಾಮ್ ಒತ್ತಾಯಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...