‘ಕರ್ನಾಟಕ’ ರಾಜ್ಯ ನಾಮಕರಣವಾಗಿ 50 ವರ್ಷ; ರಾಜ್ಯಾದ್ಯಂತ ಸಂಗೀತ ಕಾರ್ಯಕ್ರಮ

Date:

  • ಪಂಡಿತ್‌ ಭೀಮಸೇನ್ ಜೋಶಿ ಜಿಲ್ಲಾ ರಂಗಮಂದಿರ ಲೋಕಾರ್ಪಣೆ
  • ರಂಗ‌ಮಂದಿರಗಳನ್ನು ಪ್ರತಿ ಜಿಲ್ಲೆಗೆ ನಿರ್ಮಾಣ ಮಾಡಲು ಆಲೋಚನೆ

ಕರ್ನಾಟಕ ರಾಜ್ಯ ಎಂದು ನಾಮಕರಣವಾಗಿ 50 ವರ್ಷ ತುಂಬಿದ ಹಿನ್ನೆಲೆ ವರ್ಷವಿಡಿ ಸಂಗೀತ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುವುದು. ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಗದಗ ಜಿಲ್ಲೆಯಿಂದಲೇ ಚಾಲನೆ ನೀಡಲಾಗುವುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಹಾಗೂ ಕನ್ನಡ‌ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ ಭಾರತರತ್ನ ಪಂಡಿತ್‌ ಭೀಮಸೇನ್ ಜೋಶಿ ಜಿಲ್ಲಾ ರಂಗಮಂದಿರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಗದಗ ಜಿಲ್ಲೆ‌ ಕಲೆ‌ ಮತ್ತು ಸಂಸ್ಕೃತಿಯಲ್ಲಿ ತನ್ನದೇ ಆದ ಚಾಪು‌ ಮೂಡಿಸಿದೆ. ಈ ರಂಗ‌ಮಂದಿರ‌ ನಿರ್ಮಾಣದಲ್ಲಿ ನಮ್ಮ‌ ಇಲಾಖೆ‌ ಉತ್ತಮ ಕಾರ್ಯ ನಿರ್ವಹಿಸಿದ್ದು, ಇಂತಹ ರಂಗ‌ಮಂದಿರಗಳನ್ನು ಪ್ರತಿ ಜಿಲ್ಲೆಗೆ ನಿರ್ಮಾಣ ಮಾಡಲು ಆಲೋಚನೆ ಮಾಡಲಾಗುವದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಂಡಿತ್‌ ಪುಟ್ಟರಾಜ ಗವಾಯಿ ಸ್ಮಾರಕ ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಸಾಧ್ಯವಾದಷ್ಟು ಒದಗಿಸಿ ಸ್ಮಾರಕ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಸಚಿವ ಶಿವರಾಜ ತಂಗಡಗಿ ಬರವಸೆ ನೀಡಿದರು.

ಪ್ರವಾಸೋದ್ಯಮ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ ಮಾತನಾಡಿ, ಗದುಗಿಗೆ ಇಂದು ಸಂತೋಷದ ದಿನವಾಗಿದೆ. ನಾವೆಲ್ಲ ಅಭಿಮಾನ ಪಡುವ ರೀತಿಯಲ್ಲಿ ಭಾರತರತ್ನ ಪಂಡಿತ್‌ ಭೀಮಸೇನ್ ಜೋಶಿ ಅವರ ಹೆಸರಿನಲ್ಲಿ‌ ಪ್ರಾರಂಭವಾಗಿರುವ ರಂಗಮಂದಿರ ಉತ್ತಮ ಗುಣಮಟ್ಟದೊಂದಿಗೆ ಅಂತರಾಷ್ಟ್ರೀಯ ಮಟ್ಟದ ರಂಗ ಮಂದಿರ ಇದಾಗಿದೆ ಎಂದರು.‌

ದೇಶದಲ್ಲಿ ಸಂಗೀತ‌ ಕ್ಷೇತ್ರದಲ್ಲಿ ಎಕೈಕ ಭಾರತ ರತ್ನ ಪಡೆದಿರುವುದು ಗದುಗಿನ ಪಂಡಿತ್‌ ಭೀಮಸೇನ್ ಜೋಶಿ ಎಂಬುದು ಹೆಮ್ಮೆಯ ವಿಷಯವಾಗಿದೆ. ವರ್ಷದಲ್ಲಿ ಸರ್ಕಾರಿ ಪೋಷಿತ ಇಪ್ಪತ್ತೈದು ಕಾರ್ಯಕ್ರಮಗಳು‌ ನಡೆಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಲ್ಲಿ‌ ಮನವಿ ಮಾಡಿದರು.

ಹಂಪಿಯಷ್ಠೆ ಶ್ರೇಷ್ಠವಾದ ಸ್ಮಾರಕ ಲಕ್ಕುಂಡಿ ನಮ್ಮಲ್ಲಿದ್ದು, ಇದರ ಜೊತೆಗೆ ಎಲ್ಲ ಕ್ಷೇತ್ರಗಳಲ್ಲಿಯೂ ಪ್ರತಿಭೆಗಳು ದೊರೆಯುತ್ತವೆ. ಈ ನಾಡು ಪ್ರವಾಸೊದ್ಯಮದ ನಾಡಾಗಬೇಕು. ಈ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯನ್ಮುಕವಾಗಬೇಕು ಎಂದರು.

ಯುವಕರು ಇತಿಹಾಸವನ್ನು ಅರ್ಥ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ ಸಾಕಷ್ಟು ಸಂಸ್ಕೃತ ಭವನಗಳು ನಿರ್ಮಾಣಗೊಂಡಿದ್ದು ಅದರಲ್ಲಿ ಇದೊಂದು ವಿಶೇಷ ರಂಗ‌ಮಂದಿರವಾಗಿದೆ. ಇವೆಲ್ಲಗಳ ನಿರ್ಮಾಣಕ್ಕೆ ಸಾಕಷ್ಟು ಆಯಾಸ ಪಟ್ಟಿದ್ದು ಇದರಿಂದ‌‌ ಸುಧಾರಿಸಿಕೊಳ್ಳಲು ಅನುದಾನ ನೀಡಿಬೇಕು ಎಂದು ಮನವಿ ಮಾಡಿದರು.

ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ರಂಗ ಮಂದಿರಕ್ಕೆ ಪಂ. ಭೀಮಸೇನ ಜೋಷಿ ಹೆಸರು ಇಡುವ ಮೂಲಕ ಅವರಿಗೆ ಗೌರವ ಸಲ್ಲಿಸಿದಂತಾಗಿದೆ ಎಂದರು. ಗದಗ ಜಿಲ್ಲೆಯ ಇತಿಹಾಸ ಹಾಗೂ ಪ್ರಸಿದ್ದಿಯನ್ನು ಅಳಿಯದಂತೆ ಉಳಿಸಲು ಒಂದು ಪುಸ್ತಕ ರೂಪದಲ್ಲಿ ಹೊರ ತರಬೇಕೇಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕಾಡಾನೆ ಹಾವಳಿ ತಡೆಗೆ ಜಂಟಿ ಸಮೀಕ್ಷೆ ನಡೆಸಿ ಕ್ರಮ; ಈಶ್ವರ ಖಂಡ್ರೆ ಭರವಸೆ

ಜಿಲ್ಲಾಧಿಕಾರಿ ಎಂ ಎಲ್‌ ವೈಶಾಲಿ ಮಾತನಾಡಿ, ಸಚಿವರ ಹೆಬ್ಬಯಕೆಯಂತೆ ಸುಸಜ್ಜಿತ ಮತ್ತು ಭವ್ಯವಾದ ಜಿಲ್ಲಾ ರಂಗಮಂದಿರ ನಿರ್ಮಾಣಗೊಂಡಿದೆ. 582 ಆಸನಗಳುಳ್ಳ ಅತ್ಯಾಧುನಿಕ ತಂತ್ರಜ್ಞಾನದ ಸೌಂಡ ಸಿಸ್ಟಮ್‌ ಜೊತೆಗೆ ನಿರ್ಮಾಣಗೊಂಡಿರುವ ಈ‌ ರಂಗ ಮಂದಿರ ಜಿಲ್ಲೆಯ ಹೆಮ್ಮೆ ಆಗಿದೆ ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ‌ ಬಾಕಳೆ, ಕನ್ನಡ‌ ಮತ್ತು ಸಂಸ್ಕೃತಿ ಇಲಾಖೆ ನಿರ್ದೆಶಕ ವಿಶ್ವನಾಥ ಹಿರೇಮಠ , ಕೊಳಲು ವಾದಕ ರಾಕೇಶ ಚೌರಾಸಿಯಾ, ತಬಲಾ ವಾದಕ ಪಂ. ವಿಜಯ ಘಾಟೆ, ಹಿಂದೂಸ್ಥಾನಿ ಗಾಯಕ ವೆಂಕಟೇಶಕುಮಾರ, ಮಾಜಿ ಸಂಸದ ಪ್ರೊ. ಐ ಜಿ ಸನದಿ, ನಗರಸಭೆ ವಿರೋಧ ಪಕ್ಷದ ನಾಯಕ ಎಲ್ ಡಿ ಚಂದಾವರಿ ಹಾಗೂ ಇತರರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...