ಬೀದರ್‌ | ಆದಾಯಕ್ಕಿಂತ 6.43 ಲಕ್ಷ ರೂ. ಅಧಿಕ ಆಸ್ತಿ; ಎಂಜಿನಿಯರ್‌ಗೆ 4 ವರ್ಷ ಜೈಲು, 25 ಲಕ್ಷ ದಂಡ

Date:

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಕಾರಂಜಾ ಕಾಲುವೆ ನಿರ್ಮಾಣ ಯೋಜನೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಫಿರೋಜುದ್ದಿನ್ ಖಮ್ರೋದ್ದಿನ್ ಖಾನ್ ಅವರಿಗೆ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಧೀಶರ ನ್ಯಾಯಾಲವು 4 ವರ್ಷ ಜೈಲು ಹಾಗೂ 25 ಲಕ್ಷ ರೂ. ದಂಡ ವಿಧಿಸಿದೆ.

ಆರೋಪಿಯು ಅದಾಯಕ್ಕಿಂತ 6.43 ಲಕ್ಷ ರೂ. ಹೆಚ್ಚಿನ ಅಕ್ರಮ ಆಸ್ತಿ ಹೊಂದಿರುವುದು ಸಾಬೀತು ಆಗಿರುವುದರಿಂದ ಆರೋಪಿ ವಿರುದ್ಧ ಮಂಗಳವಾರ ನ್ಯಾಯಾಧೀಶ ವಿಜಯಕುಮಾರ ಎಮ್. ಆನಂದಶೆಟ್ಟಿ ಅವರು ತೀರ್ಪು ನೀಡಿದ್ದಾರೆ. ಲಂಚ ನಿಷೇಧ ಕಾಯ್ದೆಯ ಕಲಂ 13(2) ಪ್ರಕಾರ ಶಿಕ್ಷೆ ವಿಧಿಸಲಾಗಿದೆ. ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ ವೇಳೆ ದೊರೆತ ಚಿನ್ನಾಭರಣ ಹಾಗೂ ನಗದು ಹಣ ಜಪ್ತಿ ಮಾಡಲು ಆದೇಶಿಸಿದ್ದಾರೆ.

ಬೀದರ್‌ ನಗರದ ಗುರುನಗರ ಕಾಲೋನಿಯ ನಿವಾಸಿಯಾದ ಫಿರೋಜುದ್ದಿನ್ ಖಾನ್‌ 1982ರಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್‌ ಆಗಿ ಸೇವೆಗೆ ಸೇರಿದ್ದರು. ನಂತರ ಬೀದರ, ಹುಮನಾಬಾದನಲ್ಲಿ  ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ, ಕಾರಂಜಾ ಕಾಲುವೆ ನಿರ್ಮಾಣ ಯೋಜನೆ, ಕಾರಂಜಾ ಏತ ನೀರಾವರಿ, ಜಲ ಸಂಪನ್ಮೂಲ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ ಜಿಲ್ಲೆಯ ಕಾರಂಜಾ ಕಾಲುವೆ ನಿರ್ಮಾಣ ಯೋಜನೆಯ ಹುಮನಾಬಾದ ಕ್ಯಾಂಪ್‌ನಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಆಗಿ ಕರ್ತವ್ಯದಲ್ಲಿದಾಗ 2008ರ ಫೆ.2ರಂದು ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ನಗರದ‌ ಗುರುನಾನಕ ಕಾಲೋನಿಯ ಅವರ ಮನೆ, ನೆಹರು ಕ್ರೀಡಾಂಗಣ ಹತ್ತಿರದ ಅವರ ಮಾವ ಲೈಕೊದ್ದೀನ್ ಮನೆ ಮತ್ತು ಗೋಲೆಖಾನಾದಲ್ಲಿನ ಅಣ್ಣ ಎಮ್.ಝಡ್.ಬಾಬರ್ ಅವರ ಮನೆಗಳ ಮೇಲೆ ದಾಳಿ ನಡೆಸಿದರು. ಹುಮನಾಬಾದ ಕಛೇರಿಯಲ್ಲಿ ಸಹ ಶೋಧನೆ ನಡೆಸಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಜಾಗತಿಕ ಮಟ್ಟದಲ್ಲಿ ಬಸವ ಚಿಂತನೆ ತಲುಪಿಸುವುದು ಇಂದಿನ ತುರ್ತು : ಆರ್.ಕೆ.ಹುಡುಗಿ

ಆರೋಪಿಯ ಆದಾಯ, ಸ್ಥಿರಾಸ್ತಿ, ಚರಾಸ್ತಿ ಮತ್ತು ಖರ್ಚು ವೆಚ್ಚ ಲೆಕ್ಕ ಮಾಡಿದಾಗ ಅದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವುದು ಕಂಡು ಬಂದಿರುವುದರಿಂದ ಲೋಕಾಯುಕ್ತ ಡಿವೈಎಸ್‌ಪಿ ಟಿ.ಜಿ. ರಾಯ್ಕರ್ ತನಿಖೆ ನಡೆಸಿ,  ದೋಷರೋಪಣಾ ಪತ್ರ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿತ್ತು. ಲೋಕಾಯುಕ್ತ ವಿಶೇಷ ಸರ್ಕಾರಿ ಅಭಿಯೋಜಕರಾಗಿ ಕೇಶವರಾವ ಶ್ರೀಮಾಳೆ ಅವರು ವಾದ ಮಂಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...