ಬೆಂಗಳೂರು | ಶೇ.60ರಷ್ಟು ಪತ್ರಕರ್ತೆಯರು ಆನ್‌ಲೈನ್‌ ದಾಳಿಗೊಳಗಾಗುತ್ತಿದ್ದಾರೆ: ಕೆ ಪಿ ಅಶ್ವಿನಿ

Date:

ಪತ್ರಕರ್ತೆಯರ ಮೇಲೆ ನಿರಂತರವಾಗಿ ಆನ್‌ಲೈನ್‌ನಲ್ಲಿ ದಾಳಿ ನಡೆಸಲಾಗುತ್ತಿದೆ. ಈ ಬಗ್ಗೆ ನಾನು ನಡೆಸಿದ ಅಧ್ಯಯನದಲ್ಲಿ ಶೇ.60ರಿಂದ 70ರಷ್ಟು ಪತ್ರಕರ್ತೆಯರು ತಮ್ಮ ವರದಿ, ಲೇಖನಗಳ ಕಾರಣಕ್ಕಾಗಿ ಆನ್‌ಲೈನ್‌ನಲ್ಲಿ ದಾಳಿಗೊಳಗಾಗಿರುವ ಅಂಶ ಬಹಿರಂಗವಾಗಿದೆ ಎಂದು ವಿಶ್ವಸಂಸ್ಥೆಯ ವರ್ಣಭೇದ ನೀತಿ ಸದಸ್ಯೆ ಹಾಗೂ ಮಾನವ ಹಕ್ಕುಗಳ ತಜ್ಞೆ ಕೆ ಪಿ ಅಶ್ವಿನಿ ಹೇಳಿದರು.

ಬೆಂಗಳೂರು ನಗರದಲ್ಲಿ ಕರ್ನಾಟಕ ಪತ್ರಕರ್ತೆಯರ ಸಂಘ ಗುರುವಾರ ಆಯೋಜಿಸಿದ್ದ ನಾಗಮಣಿ ಎಸ್. ರಾವ್ ದತ್ತಿ ಉಪನ್ಯಾಸ ಹಾಗೂ ಪ್ರಶಸ್ತಿ ಪುರಸ್ಕೃತ ಪತ್ರಕರ್ತೆಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ‘ಮಾಧ್ಯಮದಲ್ಲಿ ಮಹಿಳಾ ಪ್ರಾಮುಖ್ಯತೆ ಮತ್ತು ಜವಾಬ್ದಾರಿ’ ವಿಷಯ ಕುರಿತು ಮಾತನಾಡಿದರು.

ಇದನ್ನೂ ಓದಿ : ಬೆಂಗಳೂರು | ಭ್ರಷ್ಟ ಅಧಿಕಾರಿಯ ಮನೆಯಲ್ಲಿ ಚಿನ್ನ, ಬೆಳ್ಳಿಗಳ ರಾಶಿ: ಬೆಚ್ಚಿಬಿದ್ದ ಲೋಕಾಯುಕ್ತ ಅಧಿಕಾರಿಗಳು!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇತ್ತೀಚೆಗಷ್ಟೇ ಡೇಟಿಂಗ್ ಆ್ಯಪ್ ಬಗ್ಗೆ ಬರೆದ ತಳಸಮುದಾಯದ ಪತ್ರಕರ್ತೆಯೊಬ್ಬರ ಮೇಲೂ ನಿರಂತರ ದಾಳಿ ನಡೆಸಲಾಗಿತ್ತು. ಆದರೆ, ಆಕೆ ಕಾರ್ಯನಿರ್ವಹಿಸುವ ಮಾಧ್ಯಮ ಸಂಸ್ಥೆ ಟ್ರೋಲ್ ಮಾಡುವವರಿಗೆ ಕಾನೂನು ಸಮರದ ಎಚ್ಚರಿಕೆ ನೀಡಿದ ಮೇಲಷ್ಟೇ ಅದು ನಿಂತಿತು. ಈ ರೀತಿಯ ಬೆಂಬಲದ ವಾತಾವರಣ ಎಲ್ಲ ಮಾಧ್ಯಮ ಸಂಸ್ಥೆಗಳಲ್ಲೂ ಇರಬೇಕು” ಎಂದು ಆಶಿಸಿದರು.

“ಕಳೆದ ಮೂರು ದಶಕಗಳಲ್ಲಿ ಮಾಧ್ಯಮರಂಗ ವೇಗವಾಗಿ ಬೆಳೆದಿದೆ. ಆದರೆ, ಜಾಗತಿಕ ಮಟ್ಟಕ್ಕೆ ಹೋಲಿಸಿದರೆ ಭಾರತೀಯ ಮಾಧ್ಯಮಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ತೃಪ್ತಿಕರವಾಗಿಲ್ಲ. ಅದರಲ್ಲೂ ಕೋವಿಡ್ ನಂತರದ ದಿನಗಳಲ್ಲಿ ಪತ್ರಕರ್ತೆಯರು ತಮ್ಮ ವೈಯಕ್ತಿಕ ಬದುಕು ಹಾಗೂ ವೃತ್ತಿ ಎರಡನ್ನೂ ನಿಭಾಯಿಸಲಾಗದೇ ಹೆಚ್ಚಿನ ಸಂಖ್ಯೆಯಲ್ಲಿ ವೃತ್ತಿಯನ್ನು ತೊರೆದಿರುವುದು ವಿಷಾದನೀಯ” ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ನಬಾರ್ಡ್ ಸಾಲ ಖೋತಾ ಮಾಡಿದ ಮೋದಿ ಸರ್ಕಾರ ರೈತಪರವೇ?

ಕಾರ್ಯಕ್ರಮದಲ್ಲಿ ವಿವಿಧ ಪ್ರಶಸ್ತಿ ಪುರಸ್ಕೃತ ಪತ್ರಕರ್ತೆಯರಾದ ಆರ್ ಪೂರ್ಣಿಮಾ, ಎಚ್ ಎಲ್ ಸೀತಾದೇವಿ, ಎಚ್ ಎನ್ ಆರತಿ, ಶಾಂತಕುಮಾರಿ ಕೆ, ಭಾರತಿ ಹೆಗಡೆ, ರಶ್ಮಿ ಎಸ್, ಮಂಜುಳಾ ಕಿರುಗಾವಲು, ಮಂಜುಳಾ ಹುಲಿಕುಂಟೆ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪತ್ರಕರ್ತ ವಿ ಟಿ ರಾಜಶೇಖರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.

ದತ್ತಿನಿಧಿ ಸ್ಥಾಪಕಿ ನಾಗಮಣಿ ಎಸ್ ರಾವ್, ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಪದ್ಮಾ ಶಿವಮೊಗ್ಗ, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ ಹಾಗೂ ಸಂಘದ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...