ಬೆಂಗಳೂರು | DRDO-CABSನಲ್ಲಿ ಮಹಿಳಾ‌ ಕಾರ್ಮಿಕರ ವಜಾ: ಪ್ರತಿಭಟನಾ ಸ್ಥಳಕ್ಕೆ ಸಫಾಯಿ ಕರ್ಮಚಾರಿ ಆಯೋಗ ಭೇಟಿ

Date:

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗವು ಇಂದು ಡಿಆರ್‌ಡಿಒ-ಸಿಎಬಿಎಸ್‌ಗೆ ಭೇಟಿ ನೀಡಿದ್ದು, ಕೆಲಸ ನಿರಾಕರಣೆಗೊಳಪಟ್ಟಿರುವ 61 ಮಹಿಳಾ ಸಫಾಯಿ ಕರ್ಮಚಾರಿಗಳನ್ನು ಮರಳಿ ಕೆಲಸಕ್ಕೆ ತೆಗೆದುಕೊಳ್ಳುವಂತೆ ಸೂಚಿಸಿತು.

ಒಕ್ಕೂಟ ಸರ್ಕಾರದ ರಕ್ಷಣಾ ಸಚಿವಾಲಯದ ವ್ಯಾಪ್ತಿಯಲ್ಲಿ ಬರುವ ಡಿಆರ್‌ಡಿಒ-ಸಿಎಬಿಎಸ್‌ನಲ್ಲಿ ಕಳೆದ 2-3 ದಶಕಗಳಿಂದ ಸಫಾಯಿ ಕರ್ಮಚಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದ 61 ಜನ ಸಫಾಯಿ ಕರ್ಮಚಾರಿಗಳು ತಮಗೆ ಕಾನೂನುಬದ್ದವಾಗಿ ಸಿಗಬೇಕಾಗಿರುವ ಸೇವಾ ಸೌಲಭ್ಯಗಳನ್ನು ಕೇಳಿದ್ದಕ್ಕಾಗಿ ಮತ್ತು ಕಾರ್ಮಿಕ ವಿರೋಧಿನೀತಿಗಳ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಕೆಲಸದಿಂದ ವಜಾ ಮಾಡಿತ್ತು. ಈ ಹಿನ್ನೆಲೆಯಲ್ಲಿ 61 ಜನ ಸಫಾಯಿ ಕರ್ಮಚಾರಿಗಳು ಪ್ರತಿಭಟನೆ ನಡೆಸುತ್ತಿದ್ದರು.

ಕೆಲಸ ನಿರಾಕರಣೆಗೊಳಪಟ್ಟಿರುವ ಸಫಾಯಿ ಕರ್ಮಚಾರಿಗಳು, ತಮ್ಮನ್ನು ಸಮಾಜ ಕಲ್ಯಾಣ ಸಚಿವರು ನೀಡಿರುವ ನಿರ್ದೇಶನದ ಮೇರೆಗೆ ಕೆಲಸಕ್ಕೆ ವಾಪಸ್ಸು ತೆಗೆದುಕೊಳ್ಳುವಂತೆ ಒತ್ತಾಯಿಸಿ ಸಿಎಬಿಎಸ್ ಡಿಆರ್‌ಡಿಒ ಕಛೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದರು. ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗವು ಇಂದು(ಸೆ.3) ಭೇಟಿ ನೀಡಿ 61 ಕಾರ್ಮಿಕರನ್ನು ಮರಳಿ ಕೆಲಸಕ್ಕೆ ತೆಗೆದುಕೊಳ್ಳುವಂತೆ ಸೂಚಿಸಿತು. ಈ ಹಿಂದೆ ನೀಡಿದ್ದ ಆದೇಶವನ್ನು ಪಾಲಿಸುವಂತೆ ನಿರ್ದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನಾ ಸ್ಥಳದಲ್ಲಿ ಕಾರ್ಮಿಕರೊಂದಿಗೆ ಮಾತನಾಡಿದ ಆಯೋಗವು ಆದೇಶದ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಸಿಎಬಿಎಸ್ ಡಿಆರ್‌ಡಿಒ ನಿರ್ದೇಶಕರೊಂದಿಗೆ ಮುಂದಿನ ವಾರ ಸಭೆ ಕರೆಯಲಾಗುವುದು ಎಂದು ಹೇಳಿದರು. ಕಾರ್ಮಿಕರು ತಮ್ಮ ಬೇಡಿಕೆ ಈಡೇರಿಕೆಗಾಗಿ ಹೋರಾಟ ಮುಂದುವರಿಸಲಿದ್ದಾರೆ.

ಇದನ್ನು ಓದಿದ್ದೀರಾ? ಸಮಗ್ರ ಕೊಳಗೇರಿ ಅಭಿವೃದ್ಧಿ ನೀತಿ ಅನುಷ್ಠಾನಕ್ಕೆ ತ್ವರಿತ ನಿಯಮಾವಳಿ: ಸ್ಲಂ ಬೋರ್ಡ್ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ

ಕಾರ್ಮಿಕರ ಈ ಹೋರಾಟ ಮತ್ತೊಮ್ಮೆ ಗುತ್ತಿಗೆ ಪದ್ದತಿಯಲ್ಲಿರುವ ಕಾರ್ಮಿಕರ ದುಸ್ಥಿತಿಯನ್ನು ಎತ್ತಿ ತೋರಿಸುತ್ತದೆ. 61 ಕಾರ್ಮಿಕರನ್ನು ಮರು ಉದ್ಯೋಗ ನೀಡಲು ಮತ್ತು ಕಾರ್ಮಿಕರಿಗೆ ನ್ಯಾಯಯುತ ಮತ್ತು ಗೌರವಾನ್ವಿತ ಕೆಲಸದ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಒಕ್ಕೂಟ ಸರ್ಕಾರದ ರಕ್ಷಣಾ ಸಚಿವರು ತಕ್ಷಣವೇ ಸಿಎಬಿಎಸ್ ಡಿಆರ್‌ಡಿಒಗೆ ನಿರ್ದೇಶನ ನೀಡುವುದು ಅತ್ಯಾವಶ್ಯಕವಾಗಿದೆ ಎಂದು ಪ್ರತಿಭಟನಾ ನಿರತರು ಆಗ್ರಹಿಸಿದ್ದಾರೆ.

WhatsApp Image 2024 09 03 at 5.14.18 PM 1
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...