ಕಲಬುರಗಿ ಜಿಲ್ಲೆಯ 2,04,073 ರೈತರಿಗೆ ₹667.73 ಪರಿಹಾರ : ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ 

Date:

ಕಲಬುರಗಿ ಜಿಲ್ಲೆಯಲ್ಲಿ ಬೆಳೆ ವಿಮೆ ಯೋಜನೆಯಡಿ ವಿಮೆ ಪರಿಹಾರ ಕೋರಿ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ನೋಂದಣಿ ಮಾಡಿಕೊಂಡಿದ್ದ 2,04,073 ರೈತರಿಗೆ ₹575.194 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ʼಜಿಲ್ಲೆಯಲ್ಲಿ ಬೆಳೆ ವಿಮೆ ಹಾಗೂ ಬೆಳೆಹಾನಿ ಸೇರಿದಂತೆ 2,36,933 ರೈತರಿಗೆ ಒಟ್ಟು ₹667.73 ಕೋಟಿ ನೀಡಲಾಗುತ್ತಿದೆ. ರಾಜ್ಯ ಸರ್ಕಾರದಿಂದ ಜಿಲ್ಲೆಯ ರೈತರಿಗೆ ಇಷ್ಟು ದೊಡ್ಡ ಮೊತ್ತದ ಬೆಳೆ ವಿಮೆ ಪರಿಹಾರ ನೀಡುವ ಮೂಲಕ ದಾಖಲೆ ಸೃಷ್ಟಿಸಲಾಗಿದೆʼ ಎಂದು ಮಾಹಿತಿ ನೀಡಿದ್ದಾರೆ.

ʼಜಿಲ್ಲೆಯಲ್ಲಿ 4.36 ಲಕ್ಷ ರೈತರು ತೊಗರಿ, ಹೆಸರು, ಉದ್ದು, ಸೋಯಾಬೀನ್, ಹತ್ತಿ ಹಾಗೂ ಇತರೆ ಬೆಳೆಗಳನ್ನು ಬೆಳೆದಿದ್ದಾರೆ. ಈ ಪೈಕಿ ಸ್ಥಳೀಯ ಪ್ರಕೃತಿ ವಿಕೋಪದಡಿ ದೂರು ಸಲ್ಲಿಸಿದ 2,01,847 ರೈತರಿಗೆ ಮಧ್ಯಂತರ ಪರಿಹಾರವಾಗಿ ₹76.34 ಕೋಟಿ ಪರಿಹಾರ ಈಗಾಗಲೇ ನೀಡಲಾಗಿದೆʼ ಎಂದು ಸಚಿವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼರೈತವಾರು ಮಾಹಿತಿಯನ್ನು ಸಂರಕ್ಷಣಾ ಪೋರ್ಟಲ್‌ನಲ್ಲಿ ದಾಖಲಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲೀಯೇ ಬೆಳೆ ವಿಮೆ ಪರಿಹಾರ ರೈತರ ಖಾತೆಗೆ ನೇರವಾಗಿ ಜಮೆಯಾಗಲಿದೆʼ ಎಂದು ಸಚಿವರು ತಿಳಿಸಿದ್ದಾರೆ.

ʼಜಿಲ್ಲೆಯ ರೈತರು ಬೆಳೆಯುತ್ತಿರುವ ತೊಗರಿಗೆ ಕ್ವಿಂಟಲ್‌ಗೆ ₹7550 ಬೆಂಬಲ ಬೆಲೆ ನಿಗದಿ ಮಾಡಿದ್ದು, ರಾಜ್ಯ ಸರ್ಕಾರ ಪ್ರತಿ ಕ್ವಿಂಟಲ್‍ಗೆ ₹450 ಪ್ರೋತ್ಸಾಹಧನವನ್ನು ನಿಗದಿ ಮಾಡಿದೆ. ಜಿಲ್ಲೆಯ 9,189 ರೈತರಿಗೆ ₹108.30 ಕೋಟಿ ಸಹಾಯಧನವನ್ನು ವಿತರಿಸಲಾಗಿದೆʼ ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ನಿಲ್ಲದ ರೈತರ ಆತ್ಮಹತ್ಯೆ : 2 ವರ್ಷದಲ್ಲಿ 100 ಅನ್ನದಾತರ ಸಾವು

ʼ2024-25ನೇ ಸಾಲಿನಲ್ಲಿ ಆಗಸ್ಟ್‌ ಕೊನೆಯ ವಾರ ಹಾಗೂ ಸೆಪ್ಟೆಂಬರ್ ತಿಂಗಳ ಮೊದಲನೇ ವಾರದಲ್ಲಿ ಸುರಿದ ಹೆಚ್ಚಿನ ಮಳೆಯಿಂದಾಗಿ ಒಟ್ಟು 16,373 ಹೆಕ್ಟೇರ್‌ನಷ್ಟು ಬೆಳೆ ಹಾನಿಯಾಗಿದ್ದು, ರಾಷ್ಟ್ರೀಯ ಹಾಗೂ ರಾಜ್ಯ ಬರ ಪರಿಹಾರ ನಿಧಿ ಮಾರ್ಗಸೂಚಿಯಂತೆ 35,086 ರೈತರಿಗೆ ₹13.47 ಕೋಟಿ ಪರಿಹಾರವನ್ನು ನೀಡಲಾಗಿದೆʼ ಎಂದು ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...