ತಿಪಟೂರಿನಲ್ಲಿ ಸೆ.2 ಕ್ಕೆ ಪತ್ರಕರ್ತರ 78ನೇ ರಾಷ್ಟ್ರೀಯ ಮಂಡಳಿ ಸಮಾವೇಶ : ತೆಂಗು ಉತ್ಪನ್ನಗಳ ಪ್ರದರ್ಶನ

Date:

ಕಲಾಕೃತಿ ಸಂಸ್ಥೆ ಅದರ ಪ್ರಧಾನ ಪ್ರಾಯೋಜಕತ್ವದಲ್ಲಿ ಸೆ.2 ಸೋಮವಾರ ತಿಪಟೂರಿನ ಎಸ್.ಎನ್.ಎಸ್. ಕನ್ವೆನ್ಷನ್ ಹಾಲ್‌ನಲ್ಲಿ ನವದೆಹಲಿಯ ಭಾರತೀಯ ಕಾರ್ಯನಿರತ ಪತ್ರಕರ್ತರ 78ನೇ ರಾಷ್ಟ್ರೀಯ ಮಂಡಳಿ ಸಮಾವೇಶ, ವಿಚಾರ ಸಂಕಿರಣ ಹಾಗೂ ತೆಂಗು ಉತ್ಪನ್ನಗಳ ಪ್ರದರ್ಶನ ಮತ್ತು ಗೋಷ್ಠಿ ಏರ್ಪಡಿಸಲಾಗಿದೆ ಎಂದು ಕಲಾಕೃತಿ ಸಂಸ್ಥೆಯ ಅಧ್ಯಕ್ಷ ಡಾ.ಶ್ರೀಧರ್ ತಿಳಿಸಿದರು.

ತಿಪಟೂರು ನಗರದ ಕೌಸ್ತುಭ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯನಿರತ ಪತ್ರಕರ್ತರ ಒಂದು ದಿನದ ವಿಚಾರ ಸಂಕಿರಣ, ಭಾರತ ಸ್ವಾತಂತ್ರೋತ್ಸವದ 75ನೇ ವರ್ಷದ ನೆನಪಿನಲ್ಲಿ ಬೃಹತ್ ಅಂಚೆಚೀಟಿ, ಲಕೋಟೆ ಮತ್ತು ಭಾರತದ ಸ್ವಾತಂತ್ರ್ಯ ನಂತರದ ಅಮೂಲ್ಯ ನಾಣ್ಯಗಳ ಪ್ರದರ್ಶನ ಹಾಗೂ ವಿಶ್ವ ತೆಂಗು ದಿನದ ಅಂಗವಾಗಿ ತೆಂಗು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಪತ್ರಕರ್ತರ ಒಂದು ರಾಷ್ಟ್ರೀಯ ಸಮ್ಮೇಳನ ತಿಪಟೂರಿನಲ್ಲಿ ನಡೆಯುತ್ತಿರುವುದು ಒಂದು ಸುದೈವ. ವಸ್ತು ಪ್ರದರ್ಶನದಲ್ಲಿ ತೆಂಗಿನಕಾಯಿ, ಒಣಕೊಬ್ಬರಿ, ತೆಂಗಿನ ಸಂಸ್ಕರಿಸಿದ ಒಣಪುಡಿ, ತೆಂಗಿನ ಗಾಣದ ಎಣ್ಣೆ, ನೀರಾ, ಕೊಬ್ಬರಿ ಮಿಠಾಯಿ ಸ್ಭೆರಿದಂತೆ ತೆಂಗಿನಿಂದ ಉತ್ಪಾದಿಸಬಹುದಾದ ನಾನಾ ಉತ್ಪನ್ನಗಳ ಪ್ರದರ್ಶನ, ತೆಂಗಿನ ಸಸಿಗಳು, ಅಡಿಕೆ ಸಸಿಗಳು ಹಾಗೂ ಇತರೆ ಸಾವಯವ ವಸ್ತುಗಳ ಪ್ರದರ್ಶನ ಇರುತ್ತದೆ ಎಂದರು.

ಬೆಳಿಗ್ಗೆ 10ಗಂಟೆಗೆ ಗೃಹ ಸಚಿವ ಜಿ.ಪರಮೇಶ್ವರ್ ಪತ್ರಕರ್ತರ ರಾಷ್ಟ್ರೀಯ ಸಮಾವೇಶ ಉದ್ಘಾಟಿಸಲಿದ್ದು, ಶಾಸಕ ಕೆ.ಷಡಕ್ಷರಿ ವಸ್ತುಪ್ರದರ್ಶನ ಮತ್ತು ಅಂಚೆಚೀಟಿ ಪ್ರದರ್ಶನ ಉದ್ಘಾಟಿಸಲಿದ್ದಾರೆ. ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನ್ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕಲ್ಪಶ್ರೀ ಸ್ಪರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಧ್ಯಾಹ್ನ 12 ಗಂಟೆಗೆ ಪತ್ರಕರ್ತರ ರಾಷ್ಟ್ರೀಯ ಮಂಡಳಿ ಸಮಾವೇಶ ನಂತರ ಮಧ್ಯಾಹ್ನ 2.30ಕ್ಕೆ ಪತ್ರಿಕೆಗಳ ಮೇಲೆ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಪರಿಣಾಮ ವಿಷಯದ ಬಗ್ಗೆ ಗೋಷ್ಠಿ ನಂತರ 3.30ಕ್ಕೆ ‘ತಿಪಟೂರು ಉಂಡೆ ಕೊಬ್ಬರಿ ಮಾರುಕಟ್ಟೆ ಸಮಸ್ಯೆ ಮತ್ತು ಪರಿಹಾರ ಮಾರ್ಗಗಳು’ ಎಂಬ ವಿಷಯದ ಬಗ್ಗೆ ಗೋಷ್ಠಿ ಏರ್ಪಡಿಸಲಾಗಿದ್ದು ದೇಶದಾದ್ಯಂತ ಎಲ್ಲ ರಾಜ್ಯಗಳಿಂದ ಪತ್ರಕರ್ತರು ಮತ್ತು ರೈತ ಮುಖಂಡರು, ಬೆಳೆಗಾರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಲಾಕೃತಿ ಸಂಸ್ಥೆಯ ಜ್ಯೋತಿ ಗಣೇಶ್, ಎ.ಟಿ.ಪ್ರಸಾದ್, ಕೆ.ಎಂ.ರಾಜಣ್ಣ, ಕಸಾಪ ಅಧ್ಯಕ್ಷ ಬಸವರಾಜಪ್ಪ, ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...