ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ: ಫೋಟೋ ಆಲ್ಬಮ್

Date:

ಮಂಡ್ಯದಲ್ಲಿ ಡಿಸೆಂಬರ್‌ 20ರಿಂದ ಆರಂಭಗೊಂಡಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಇಂದು(ಡಿ.22) ಸಮಾರೋಪಗೊಂಡಿದೆ. ಸಕ್ಕರೆ ನಾಡು ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜನಸಾಗರವೇ ಹರಿದು ಬಂದಿದೆ. ರಾಜ್ಯದ ಮೂಲೆ ಮೂಲೆಗಳಿಂದ ನೂರಾರು ಅತಿಥಿಗಳು, ಸಾವಿರಾರು ಕನ್ನಡಾಭಿಮಾನಿಗಳು ಬಂದಿದ್ದರು. ಇದು ನಮ್ಮ ಕನ್ನಡ ನಾಡು, ನುಡಿಯ ಬಗ್ಗೆ ಜನರಿಗಿರುವ ಪ್ರೀತಿ, ಅಭಿಮಾನಕ್ಕೆ ಸಾಕ್ಷಿಯಾಗಿದೆ.

ಪುಸ್ತಕ ಪ್ರದರ್ಶನ, ವಾಣಿಜ್ಯ ಮಳಿಗೆಗಳು ಜನರಿಂದ ತುಂಬಿ ತುಳುಕಿತ್ತು. ಊಟೋಪಚಾರವೂ ನಿರಂತರವಾಗಿ ನಡೆಯುತ್ತಿತ್ತು. ಇದಕ್ಕಾಗಿ ಸುಮಾರು 1000 ಸಾವಿರದಷ್ಟು ಜನರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಜೊತೆಗೆ, ಮಂಡ್ಯದ ಬಾಡೂಟವನ್ನು ಸಾಹಿತ್ಯ ಸಮ್ಮೇಳನದಲ್ಲಿ ನೀಡದಿದ್ದಕ್ಕೆ ಪ್ರತಿರೋಧವಾಗಿ ಜನಪರ ಸಂಘಟನೆಗಳ ಮುಖಂಡರು, ಚಿಕನ್ ಸಾರು, ಮೊಟ್ಟೆ, ರಾಗಿ ಮುದ್ದೆ ಇರುವ ಬಾಡೂಟವನ್ನು ಕೂಡ ಹಂಚುವ ಮೂಲಕ ಹೊಸ ಕ್ರಾಂತಿಗೆ ನಾಂದಿ ಹಾಡಿದರು. ಹೋರಾಟಕ್ಕೆ ಕೊನೆಗೂ ಮಣಿದ ಕಸಾಪ, ಸಮಾರೋಪ ಸಮಾರಂಭದ ಬಳಿಕ ಹಂಚಿದ ರಾತ್ರಿಯ ಊಟದೊಂದಿಗೆ ಸಾರ್ವಜನಿಕರಿಗೆ ಮೊಟ್ಟೆ ವಿತರಣೆ ಮಾಡಿತು.

20 2

ಪ್ರತಿದಿನ ಸಂಜೆ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮಂಡ್ಯ ಮಾತ್ರವಲ್ಲದೇ ಸುತ್ತಮುತ್ತಲಿನ ಜನರೆಲ್ಲರೂ ಪ್ರವಾಹದಂತೆ ಹರಿದುಬಂದಿದ್ದರು. ಬೀದಿ ವ್ಯಾಪಾರ, ತಿಂಡಿ-ತಿನಿಸು, ಜ್ಯೂಸ್‌ ಅಂಗಡಿಗಳು ಸಮ್ಮೇಳನದ ಮುಖ್ಯದ್ವಾರದಿಂದಲೇ ಬಂದವರನ್ನು ಸ್ವಾಗತಿಸುತ್ತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಮೂರು ವೇದಿಕೆಗಳ ಹೊರಭಾಗದ ವಿಶಾಲ ಅಂಗಣದಲ್ಲಿ ವಿವಿಧ ವಸ್ತುಗಳನ್ನು ಮಾರುವವರು ಮತ್ತು ಮಳಿಗೆಗಳಲ್ಲಿ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡುತ್ತಿರುವವರ ದಂಡೇ ನೆರೆದಿತ್ತು.

ವೇದಿಕೆಯ ಹಿಂಭಾಗದಲ್ಲಿ ಮಾಡಲಾಗಿದ್ದ ‘ಮಾಧ್ಯಮ ಕೇಂದ್ರ’ದಲ್ಲಿ ಪತ್ರಿಕೆ, ವಿದ್ಯುನ್ಮಾನ, ಡಿಜಿಟಲ್ ಮೀಡಿಯಾ, ಫೋಟೋಗ್ರಾಫರ್ಸ್‌ ಸೇರಿದಂತೆ ಎಲ್ಲ ಪತ್ರಕರ್ತರು ತಮ್ಮ ತಮ್ಮ ಕೆಲಸಗಳಲ್ಲಿ ‘ಬ್ಯುಝಿ’ಯಾಗಿದ್ದರು.

WhatsApp Image 2024 12 22 at 7.14.30 PM 1

ಈ ಸಮ್ಮೇಳನದ ಸರ್ವಾಧ್ಯಕ್ಷ್ಯತೆಯನ್ನು ಹಿರಿಯ ಸಾಹಿತಿ ಗೊಂಡೇದಹಳ್ಳಿ ರುದ್ರಪ್ಪ ಚನ್ನಬಸಪ್ಪ(ಗೊರುಚ) ವಹಿಸಿದ್ದರು. ಮುಂದಿನ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಗಣಿ ನಾಡು ಬಳ್ಳಾರಿಯಲ್ಲಿ ನಡೆಯಲಿದೆ ಎಂದು ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಸಮಾರೋಪ ಸಮಾರಂಭದಲ್ಲಿ ಘೋಷಿಸಿದರು.

ಪುಸ್ತಕ ಮಳಿಗೆಗಳ ಪೈಕಿ ಈ ದಿನ ಡಾಟ್ ಕಾಮ್ ಕೂಡ ಬ್ಲಾಕ್ ‘ಸಿ’ಯಲ್ಲಿನ ಮಳಿಗೆಯ 166ನೇ ಸ್ಟಾಲ್‌ನಲ್ಲಿ ತನ್ನ ಸ್ಟಾಲ್ ತೆರೆದು, ಹೊಸ ಓದುಗರಿಗೆ ನಮ್ಮ ಸಂಸ್ಥೆಯನ್ನು ಪರಿಚಯಿಸಿತ್ತು.

ಈ ಮೂರು ದಿನಗಳ ಎಲ್ಲ ಫೋಟೋಗಳ ಸಂಗ್ರಹ ಈ ಆಲ್ಬಮ್‌ನಲ್ಲಿದೆ. ಬಲಬದಿಯಲ್ಲಿನ ಬಾಣದ ಗುರುತನ್ನು ಕ್ಲಿಕ್ ಮಾಡಿ, ಎಲ್ಲ ಫೋಟೋಗಳನ್ನು ವೀಕ್ಷಿಸಬಹುದು.

(ಫೋಟೋ ಕೃಪೆ: ಕಸಾಪ, ಮಂಡ್ಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಚಾರ ಹಾಗೂ ಮಾಧ್ಯಮ ಸಮಿತಿ , ಕೆಲವು ಫೇಸ್‌ಬುಕ್ ಸ್ನೇಹಿತರು, ಬಾಡೂಟ ಬಳಗ, ಜಾಗೃತ ಕರ್ನಾಟಕ & ಈ ದಿನ ಡಾಟ್ ಕಾಮ್ ಬಳಗ)

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...