ಬೀದರ್‌ | ಶಿಕ್ಷಣ, ಆರೋಗ್ಯ ಮಾರಾಟವಾದ ದೇಶ ಅವನತಿ ಹಾದಿ ಹಿಡಿಯುತ್ತದೆ : ಸಿದ್ದಪ್ಪ ಮೂಲಗೆ

Date:

ವ್ಯವಸ್ಥೆಯ ಕುರಿತು ವೈಚಾರಿಕವಾದ ವಿಮರ್ಶೆಯ ಜೊತೆಗೆ ಸಾಂಸ್ಕೃತಿಕ ಮತ್ತು ವೈಜ್ಞಾನಿಕ ಅನ್ವೇಷಣೆಗಳು ಉನ್ನತ ಶಿಕ್ಷಣದ ಪ್ರಧಾನ ಧೋರಣೆಯಾಗಿದೆ. ಒಂದು ಸಮಾಜವನ್ನು, ದೇಶವನ್ನು ಕ್ರಿಯಾಶೀಲವಾಗಿಡುವ ಕೆಲಸ ಶಿಕ್ಷಣದಿಂದ ಮಾತ್ರ ನಡೆಯುತ್ತದೆ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಸಿದ್ದಪ್ಪ ಮೂಲಗೆ ಹೇಳಿದರು.

ಬಸವಕಲ್ಯಾಣ ನಗರದ ಶ್ರೀ ಬಸವೇಶ್ವರ ದೇವಸ್ಥಾನ ಶಿಕ್ಷಣ ಸಂಸ್ಥೆಯ ಶ್ರೀ ಬಸವೇಶ್ವರ ಪದವಿ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟದ ಭರವಸೆ ಕೋಶದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ‘ಉನ್ನತ ಶಿಕ್ಷಣ ಹಾಗೂ ಯುವ ಜನತೆ ‘ ಕುರಿತ ಉಪನ್ಯಾಸ ಸಮಾರಂಭ ಉದ್ಘಾಟಿಸಿ ಮಾತನಾಡಿ, ʼಜ್ಞಾನ ಉತ್ಪಾದಿಸುವ, ಸಾಮಾಜಿಕ ಸಮಾನತೆ ತರಬಲ್ಲ, ಮನುಷ್ಯಪರವಾಗಿ ಆಲೋಚಿಸುವ ವಿಚಾರಗಳು ಉನ್ನತ ಶಿಕ್ಷಣದಲ್ಲಿದ್ದರೆ ದೇಶ ಪ್ರಗತಿ ಸಾಧ್ಯʼ ಎಂದರು.

ʼಲೋಕವನ್ನು ಅರಿಯಲು, ಗ್ರಹಿಸಲು ದಾರಿಯಾಗಬೇಕಾದ ಶಿಕ್ಷಣ ವ್ಯವಸ್ಥೆಯಲ್ಲಿ ಹಲವು ನಿರ್ಬಂಧಗಳಿವೆ. ನಿಸರ್ಗ, ಸಮಾಜ, ಲೋಕವನ್ನು ಅರಿಯಲು ಸರಿಯಾದ ಶಿಕ್ಷಣದ ಅಗತ್ಯವಿದೆ. ಉನ್ನತ ಶಿಕ್ಷಣದಲ್ಲಿ ಹೆಚ್ಚು ಅಧ್ಯಯನ ಮಾಡುವ ಮೂಲಕ ಹೊಸದನ್ನು ಕಂಡುಕೊಳ್ಳಲು ಸಾಧ್ಯವಿದೆ. ಓದಿನಲ್ಲಿ ತನ್ಮಯತೆ ಅಗತ್ಯʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಎಲ್ಲಾ ಕಾಲದಲ್ಲೂ ಜ್ಞಾನಕ್ಕೆ ಮಹತ್ವವಿದೆ. ಕನ್ನಡ ಮಾಧ್ಯಮದಲ್ಲಿ ಓದಿದ ಮಕ್ಕಳು ಲೋಕಾನುಭವ ಸಹಜವಾಗಿ ಪಡೆಯುತ್ತವೆ. ಇಂಗ್ಲಿಷ್ ಮಾಧ್ಯಮ ಶಿಕ್ಷಣದ ಟ್ರೆಂಡಾಗಿದೆ. ವ್ಯಾಪಾರೀಕರಣವಾದ ಇಂದಿನ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ. ಶಿಕ್ಷಣ ಮತ್ತು ಆರೋಗ್ಯ ಯಾವ ದೇಶದಲ್ಲಿ ಮಾರಾಟವಾಗುತ್ತದೆಯೋ ಆ ದೇಶ ಅವನತಿಯ ಹಾದಿ ಹಿಡಿಯುತ್ತದೆ. ಶಿಕ್ಷಣ ಮಾರಾಟದ ವಸ್ತುವಾಗುವುದು ಎಂದರೆ ಆ ದೇಶದ ದುರಂತʼ ಎಂದರು.

ʼಶಿಕ್ಷಣ ವ್ಯವಸ್ಥೆಯಲ್ಲಿ ಯಂತ್ರಗಳನ್ನಾಗಿ ಮಾಡಲಾಗುತ್ತದೆ. ಅತ್ಯಂತ ಬೌದ್ಧಿಕತೆಯನ್ನು ಹೊಂದಿದ ಬಿ.ಎ, ಬಿ.ಕಾಂ ಮತ್ತು ಬಿಎಸ್ಸಿ ಪದವಿಗಳ ಬಗ್ಗೆ ತಾತ್ಸಾರ , ಉದಾಸೀನತೆ ಬೇಡ. ಗಂಭೀರವಾಗಿ ಅವುಗಳನ್ನು ಓದಿದರೆ ಎಲ್ಲಕ್ಕಿಂತ ಭಿನ್ನವಾದ, ಸೃಜನಶೀಲ ಬದುಕು ಕಟ್ಟಿಕೊಳ್ಳಬಹುದು. ಸಮಾನತೆಯ ಬಗ್ಗೆ ಮೊದಲು ಮಾತನಾಡಿದ್ದು ಬಸವಕಲ್ಯಾಣ. ಮೊದಲು ಪ್ರಜಾಪ್ರಭುತ್ವವನ್ನು ಪ್ರತಿಪಾದಿಸಿದ್ದು ಅನುಭವ ಮಂಟಪ. ಬಸವಣ್ಣನವರ ಹೆಸರಿನ ಈ ಕಾಲೇಜಿನಲ್ಲಿ, ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಾಗಿರುವುದು ಶರಣು ಸಂಸ್ಕೃತಿಯ ಪ್ರತೀಕ ಮತ್ತು ಪ್ರಭಾವಗಳಾಗಿವೆʼ ಎಂದರು.

ಸಂಸ್ಥೆಯ ಆಡಳಿತಾಧಿಕಾರಿ ಡಾ ಮಲ್ಲಿಕಾರ್ಜುನ ಲಕಶಟ್ಟಿ ಮಾತನಾಡಿ, ʼವಿಶ್ವವಿದ್ಯಾಲಯದ ಆಡಳಿತಾತ್ಮಕ ಸುಧಾರಣೆಗಾಗಿ, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ನೀಡಿ ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಸಿಂಡಿಕೇಟ್ ಸದಸ್ಯರನ್ನು ಸರ್ಕಾರ ಆಯ್ಕೆ ಮಾಡುತ್ತದೆ. ಉನ್ನತ ಶಿಕ್ಷಣದಲ್ಲಿ ಉತ್ತಮ ಭವಿಷ್ಯವಿದೆʼ ಎಂದರು.

ಪ್ರಾಚಾರ್ಯ ಡಾ.ಭೀಮಾಶಂಕರ ಬಿರಾದಾರ ಮಾತನಾಡಿ, ʼಸಂಶೋಧನಾತ್ಮಕ ಅಧ್ಯಯನ, ಸೈದ್ಧಾಂತಿಕ ಹಾಗೂ ತಾತ್ವಿಕ ನೆಲೆಯ ಅನುಸಂಧಾನ ಉನ್ನತ ಶಿಕ್ಷಣದ ಗುಣವಾಗಿದೆ. ಅದು ಸಾಮಾಜಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಬೆಳವಣಿಗೆಗೆ ದಾರಿಯಾಗಿದೆ. ಕಾಲೇಜು ಹಾಗೂ ವಿಶ್ವವಿದ್ಯಾಲಯಗಳು ವೈಚಾರಿಕ ಹಾಗೂ ವೈಜ್ಞಾನಿಕ ಪರಂಪರೆಯನ್ನು ಗಟ್ಟಿಗೊಳಿಸುವ ಮತ್ತು ಕಟ್ಟಿ ಬೆಳೆಸುವ ಅರಿವಿನ ಜಾಗಗಳಾಗಿವೆʼ ಎಂದರು.

ʼಉನ್ನತ ಶಿಕ್ಷಣದಲ್ಲಿ ನಡೆಯುವ ಸಂಶೋಧನೆಗಳು, ಆವಿಷ್ಕಾರಗಳು, ಚರ್ಚೆ, ವೈಚಾರಿಕ ಚಿಂತನೆ, ಸಂಕಥನಗಳು ಹೊಸ ತಾತ್ವಿಕತೆಯೊಂದನ್ನು ಕಟ್ಟಿಕೊಡುತ್ತವೆ. ಸಾಮಾಜಿಕ ಮತ್ತು ಚಾರಿತ್ರಿಕ ವಾಸ್ತವಗಳಿಗೆ ಪ್ರತಿಸ್ಪಂದಿಸುವ ಸೂಕ್ಷ್ಮತೆ ಶಿಕ್ಷಣ ಬೆಳೆಸುತ್ತದೆ. ಹೊಸ ಹೊಸ ಸೃಜನಶೀಲತೆ ಹಾಗೂ ಸಂಶೋಧನೆಗೆ ಉನ್ನತ ಶಿಕ್ಷಣದಲ್ಲಿ ತಲಸ್ಪರ್ಶಿ ಅಧ್ಯಯನ ಅಗತ್ಯʼ ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ʼವಚನ ದರ್ಶನʼ ಕೃತಿಯಿಂದ ವಚನ ಸಾಹಿತ್ಯ ನಿರ್ನಾಮಕ್ಕೆ ಯತ್ನ : ಆರ್.ಕೆ.ಹುಡಗಿ

ಸಂಸ್ಥೆಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಚಿರಡೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶ್ರೀಕಾಂತ ಬಡದಾಳೆ, ಐಕ್ಯೂಎಸಿ ಸಂಯೋಜಕ ಪವನ ಪಾಟೀಲ, ಅಶೋಕ ರೆಡ್ಡಿ ಗದಲೇಗಾಂವ, ವಿವೇಕಾನಂದ ಶಿಂಧೆ, ರೋಶನ್ ಬೀ, ಗುರುದೇವಿ ಕಿಚಡೆ, ನೀಲಮ್ಮ ಮೇತ್ರೆ, ಡಾ‌. ಬಸವರಾಜ ಖಂಡಾಳೆ, ಪ್ರವೀಣ ಬಿರಾದಾರ, ಶ್ರೀನಿವಾಸ ಉಮಾಪುರೆ, ಪ್ರಶಾಂತ ಬುಡಗೆ, ಬಸವರಾಜ ಗುಂಗೆ ಮೊದಲಾದವರಿದ್ದರು. ಡಾ. ಶಾಂತಲಾ ಪಾಟೀಲ ಸ್ವಾಗತಿಸಿದರು. ಜಗದೇವಿ ಜವಳಿಗೆ ನಿರೂಪಿಸಿದರು. ಗಂಗಾಧರ ಸಾಲಿಮಠ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...