ಕೆಲವೇ ಪಟ್ಟಭದ್ರರು ಪತ್ರಕರ್ತರನ್ನು ಕತ್ತಲಲ್ಲಿಟ್ಟಿದ್ದಾರೆ: ಬಂಗ್ಲೆ ಮಲ್ಲಿಕಾರ್ಜುನ್ ವಿಷಾದ

Date:

ಪತ್ರಕರ್ತರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಕೆಲವೇ ಕೆಲವು ಪತ್ರಕರ್ತರು ಬಳಸಿಕೊಳ್ಳುತ್ತಾ ಇಡೀ ಪತ್ರಿಕಾ ಸಮೂಹವನ್ನೇ ಕತ್ತಲಲ್ಲಿ ಇಡಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ವಿಷಾದ ವ್ಯಕ್ತಪಡಿಸಿದರು.

ಅವರು ಇಂದು ಶಿವಮೊಗ್ಗದ ಮಥುರಾ ಪ್ಯಾರಡೈಸ್‍ನ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಮೇ 24ರಂದು ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ 3ನೇ ರಾಜ್ಯ ಸಮ್ಮೇಳನ ‘ಪತ್ರಕರ್ತರ ಹಬ್ಬ’ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಮಾತನಡಿದರು.

1001595692

ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗದ ಅಂಕುಡೊಂಕುಗಳನ್ನು ಟೀಕಿಸಿ ತಿದ್ದುವ ಮಹತ್ವದ ಜವಾಬ್ದಾರಿಯನ್ನು ಪತ್ರಕರ್ತರು ನಿಭಾಯಿಸುತ್ತಿದ್ದಾರೆ. ಆದರೆ, ಸರ್ಕಾರದ ಇಚ್ಛಾಶಕ್ತಿಯ ಕೊರತೆ, ಕೆಲವೇ ಪಟ್ಟಭದ್ರರ ಲಾಬಿಗಳಿಂದಾಗಿ ಬಹುತೇಕ ಪತ್ರಕರ್ತರು ಕಗ್ಗತ್ತಲಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹತ್ತಾರು ವರ್ಷಗಳ ಕಾಲ ಪತ್ರಿಕಾವೃತ್ತಿಯನ್ನು ಕೈಗೊಂಡು ನಿವೃತ್ತರಾಗುವವರು ಯಾವುದೇ ಆಸರೆ ಇಲ್ಲದೇ ಸೊರಗುವಂತಾಗಿದೆ. ಆದ್ದರಿಂದ ಪತ್ರಕರ್ತರ ಪರವಾಗಿ ಧ್ವನಿ ಎತ್ತಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಹುಟ್ಟುಹಾಕಲಾಯಿತು ಎಂದರು.

ಸಂಘಟನೆ ಪ್ರಾರಂಭವಾಗಿ ಕೇವಲ ಎರಡೂವರೆ ವರ್ಷಗಳಲ್ಲಿ ರಾಜ್ಯದಾದ್ಯಂತ 3200ಕ್ಕೂ ಹೆಚ್ಚು ಸದಸ್ಯರನ್ನು ಒಳಗೊಂಡಿದೆ. ರಾಜ್ಯದ ಮೂಲೆ ಮೂಲೆಯಲ್ಲಿ ಸಂಘಟನೆಯ ಸದಸ್ಯರಿದ್ದಾರೆ. ಇತ್ತೀಚೆಗೆ ಅರಣ್ಯ ಇಲಾಖೆ ಸಿಬ್ಬಂದಿ ಪತ್ರಕರ್ತನೊಬ್ಬನ ಮೇಲೆ ಅಮಾನವೀಯವಾಗಿ ನಡೆದುಕೊಂಡು ಹಲ್ಲೆ ನಡೆಸಿದಾಗ ದೊಡ್ಡ ದೊಡ್ಡ ಪತ್ರಕರ್ತರು ಮೌನವಾಗಿದ್ದರು. ನಮ್ಮ ಸಂಘಟನೆ ಘಟನೆಯ ವಿರುದ್ಧ ಧ್ವನಿ ಎತ್ತಿದಾಗ ಕೇವಲ 16 ಗಂಟೆಯಲ್ಲಿ ತಪ್ಪಿತಸ್ಥ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಅಮಾನತ್ತುಗೊಳಿಸಲಾಗಿದೆ ಎಂದರು.

ಮೇ 24ರಂದು ರಾಜ್ಯ ಸಮ್ಮೇಳನವನ್ನು ಪತ್ರಕರ್ತರ ಹಬ್ಬವನ್ನಾಗಿ ಆಚರಿಸಲಾಗುತ್ತಿದೆ. ಅಂದು ಇಡೀ ದಿನ ಪತ್ರಕರ್ತರ ಏಳಿಕೆಯ ಕುರಿತು ಚಿಂತನೆ ನಡೆಯಲಿದೆ. ಈಗಾಗಲೇ ನಮ್ಮ ಸಂಘಟನೆಯಿಂದ ಬಸ್‍ಪಾಸ್ ಸೇರಿದಂತೆ ಹಲವು ಹೋರಾಟಗಳನ್ನು ಹಮ್ಮಿಕೊಂಡಿದ್ದು, ವಾರ್ತಾ ಇಲಾಖೆಯ ಅಧಿಕಾರಿಗಳ ಕಠಿಣ ಮಾನದಂಡಗಳಿಂದಾಗಿ ದೇವರು ಕೊಟ್ಟರೂ ಪೂಜಾರಿ ಕೊಡಲಿಲ್ಲ ಎನ್ನುವಂತಾಗಿದೆ.

1001596397

ಬಸ್ ಪಾಸ್ ವಿಚಾರದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‍ರವರು ಜೂನ್ ತಿಂಗಳ ವರೆಗೆ ಕಾಲಾವಕಾಶ ಕೋರಿದ್ದಾರೆ. ಅದಾದ ನಂತರ ಹೋರಾಟ ತೀವ್ರಗೊಳಿಸಲಾಗುವುದು. ಪತ್ರಕರ್ತರಿಗಾಗುತ್ತಿರುವ ಅನ್ಯಾಯದ ವಿರುದ್ಧ ಕಾನೂನಾತ್ಮಕ ಹೋರಾಟದ ಮೂಲಕ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಶಿವಮೊಗ್ಗ ಜಿಲ್ಲಾ ಘಟಕ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಕ್ರಿಯಾಶೀಲ ಅಧ್ಯಕ್ಷ ಡಿ.ಜಿ. ನಾಗರಾಜ ಮತ್ತು ಅವರ ಟೀಮ್ ವರ್ಕ್‍ನಿಂದಾಗಿ ಈ ಘಟಕ ಇಡೀ ರಾಜ್ಯದ ಗಮನ ಸೆಳೆದಿದೆ.

ಪತ್ರಿಕಾ ಭವನವನ್ನು ಸರ್ಕಾರಕ್ಕೆ ವಹಿಸಬೇಕೆಂಬ ಇವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ. ಇಂತಹ ಹೋರಾಟಗಾರರು ಪ್ರತಿ ಜಿಲ್ಲೆಗೂ ನಾಲ್ಕೈದು ಮಂದಿ ಇದ್ದರೆ ಎಂತಹ ಸಂಘಟನೆ ಬೇಕಾದರೂ ಕಟ್ಟಬಹುದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅತಿಥಿಗಳಾಗಿ ಆಗಮಿಸಿದ್ದ ಶರಾವತಿ ಡೆಂಟಲ್ ಕಾಲೇಜ್‍ನ ಪ್ರೊಫೆಸರ್ ಡಾ. ಜೀನತ್ ಅಂಬ್ರೇಜ್, ದಾವಣಗೆರೆ ಜಿಲ್ಲಾಧ್ಯಕ್ಷ ಕರಿಯಪ್ಪ, ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಸೈಯದ್ ಹುಸೈನ್, ಚನ್ನಗಿರಿ ತಾಲ್ಲೂಕು ಅಧ್ಯಕ್ಷ ಗಿರೀಶ್ ಹೊದಿಗೆರೆ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿವಮೊಗ್ಗ ಘಟಕದ ಜಿಲ್ಲಾಧ್ಯಕ್ಷ ಡಿ.ಜಿ. ನಾಗರಾಜ್ ಮಾತನಾಡಿ, ಶಿವಮೊಗ್ಗ ಜಿಲ್ಲಾ ಘಟಕದಿಂದ ಸದಸ್ಯರ ಅನುಕೂಲಕ್ಕಾಗಿ ಹಮ್ಮಿಕೊಂಡಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಪತ್ರಕರ್ತರ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳಿಗೆ ಸಂಘಟಿತ ಪ್ರಯತ್ನ ಮುಖ್ಯ ಎಂದರು.

ಮೇ 24ರಂದು ನಡೆಯಲಿರುವ ಸಮ್ಮೇಳನಕ್ಕೆ ಜಿಲ್ಲೆಯಿಂದ ಎಲ್ಲಾ ಸದಸ್ಯರೂ ಪಾಲ್ಗೊಳ್ಳಬೇಕು. ಜಿಲ್ಲಾ ಘಟಕದಿಂದಲೇ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದರು.ಕಾರ್ಯಕ್ರಮದಲ್ಲಿ ಸದಸ್ಯರಿಗೆ ಆಕ್ಸಿಡೆಂಟ್ ಬೆನಿಫಿಟ್ ಪಾಲಿಸಿಯ ಬಾಂಡ್‍ಗಳನ್ನು ವಿತರಿಸಲಾಯಿತು.ರಾಜ್ಯಾಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರುಗಳನ್ನು ಅಭಿನಂದಿಸಲಾಯಿತು.

ಶಿವಮೊಗ್ಗ ಜಿಲ್ಲಾ ಘಟಕದ ಪದಾಧಿಕಾರಿಗಳಾದ ಬಿ.ಸಿ. ಶಿವರಾಜ್, ವಿಷ್ಣುಪ್ರಸಾದ್, ಬಿ. ಗಣಪತಿ, ಬಿ.ಎ. ಸುರೇಶ್ ಮಾತನಾಡಿದರು.ಪ್ರಧಾನ ಕಾರ್ಯದರ್ಶಿ ಡಿ.ಪಿ. ಅರವಿಂದ ನಿರೂಪಿಸಿದರು. ಉಪಾಧ್ಯಕ್ಷ ಚಿತ್ರಪ್ಪ ಯರಬಾಳ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಅಣ್ಣಪ್ಪ ಎಂ. ವಂದಿಸಿದರು. ವಿ. ಗಣೇಶ್ ಪ್ರಾರ್ಥಿಸಿ, ಷಡಾಕ್ಷರಪ್ಪ ಜಿ.ಆರ್. ಪ್ರಾಸ್ತಾವಿಕವಾಗಿ ಮಾತನಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...