ಬಾಗೇಪಲ್ಲಿ | ಡಾ.ಎಚ್.ಎನ್.ನರಸಿಂಹಯ್ಯ ಉದ್ಯಾನವನವೆಂಬ ಅದ್ವಾನದ ಆಗರ

Date:

ಪದ್ಮಭೂಷಣ ಡಾ.ಎಚ್.ಎನ್.ನರಸಿಂಹಯ್ಯ ಅವರ ಸ್ಮರಣಾರ್ಥ ನಿರ್ಮಿಸಿರುವ ಉದ್ಯಾನವು ಪೂರ್ಣವಾಗಿ ಪಾಳು
ಬಿದ್ದಿದ್ದು, ಅಕ್ಷರಶಃ ಅದ್ವಾನಗಳ ಆಗರವಾಗಿದೆ.

ಉದ್ಯಾನವನದಲ್ಲೆಲ್ಲಾ ಪಾರ್ಥೇನಿಯಂನಂತಹ ಗಿಡಗಂಟೆಗಳು ಬೆಳೆದು ನಿಂತಿದ್ದು, ರಾಶಿ ರಾಶಿ ಕಸಕಡ್ಡಿ ಬಿದ್ದಿದೆ. ಅಲ್ಲಿ ನೆಟ್ಟಿದ್ದ ಗಿಡಗಳು ಬಹುತೇಕ ಮಾಯವಾಗಿವೆ. ಸಂಜೆಯಾದರೆ ಇದು ಪುಂಡ ಪೋಕರಿಗಳ, ಕುಡುಕರ ಅಡ್ಡೆಯಂತಾಗಿ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ.

2017ರಲ್ಲಿ ಪುರಸಭೆ ವತಿಯಿಂದ ಪಟ್ಟಣದ 20ನೇ ವಾರ್ಡಿನಲ್ಲಿ ಡಾ.ಎಚ್.ಎನ್ ಉದ್ಯಾನವನ್ನು ನಿರ್ಮಿಸಲಾಗಿತ್ತು. ಪಟ್ಟಣದ ಮುಖ್ಯ ರಸ್ತೆಯಿಂದ ಗಂಗಮ್ಮನ ಗುಡಿ ರಸ್ತೆ ಮೂಲಕ ದರ್ಗಾ ವೃತ್ತ ಮೂಲಕ ಆಂಧ್ರ ಪ್ರದೇಶದ ಕೊಡಿಕೊಂಡಕ್ಕೆ ಹೋಗುವ ರಸ್ತೆಯಲ್ಲಿ ಸುಮಾರು 70 ಗುಂಟೆ ಸರಕಾರಿ ಜಮೀನಿನಲ್ಲಿ ಇದನ್ನು ನಿರ್ಮಾಣ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Park3

ಉದ್ಯಾನವನದ ಹೃದಯ ಭಾಗದಲ್ಲಿರುವ ಎಚ್‌‌.ಎನ್ ಅವರ ಎದೆಯುದ್ದದ ಪುತ್ಥಳಿಯನ್ನು ಸ್ಥಾಪನೆ ಮಾಡಲಾಗಿದ್ದು, ಕಿಡಿಗೇಡಿಗಳು ಈ ಪುತ್ಥಳಿಯನ್ನು ವಿರೂಪಗೊಳಿಸಿದ್ದಾರೆ. ಪುತ್ಥಳಿ ಮುಂದೆ ನಾಮಫಲಕವನ್ನೂ ಸಹ ಹಾಕಿಲ್ಲ. ಅದಲ್ಲದೆ ಬಿಸಿಲಲ್ಲಿ ಒಣಗಿ, ಮಳೆಯಲ್ಲಿ ನೆನೆದ ಕಾರಣಕ್ಕೆ ಆ ಪುತ್ಥಳಿಯೂ ಬಿರುಕುಬಿಟ್ಟು ಶಿಥಿಲಾವಸ್ಥೆ ತಲುಪಿದೆ.

Park2

ಭದ್ರತೆ ಮತ್ತು ನಿರ್ವಹಣೆ :

ಉದ್ಯಾನವನಕ್ಕೆ ಸೂಕ್ತ ಭದ್ರತೆ ಹಾಗೂ ನಿರ್ವಹಣೆ‌ ಇಲ್ಲದ ಕಾರಣಕ್ಕೆ ಆ ಪುತ್ಥಳಿಯ ಸುತ್ತಲೂ ಬೀಡಿ-ಸಿಗರೇಟ್ ತುಂಡುಗಳು, ಮದ್ಯದ ಬಾಟಲಿಗಳು ಬಿದ್ದಿರುವುದು ಅನೈತಿಕ ಚಟುವಟಿಕೆಗಳಿಗೆ ಸ್ಥಳಾವಕಾಶ ಮಾಡಿಕೊಟ್ಟಂತಾಗಿದೆ.

ವೈಚಾರಿಕ ಪ್ರಜ್ಞೆ ಡಾ.ಎಚ್.ಎನ್ ರವರ ಹೆಸರಿನಲ್ಲಿ ನಿರ್ಮಿಸಿರುವ ಉದ್ಯಾನವನವು ಅನೈತಿಕ ಚಟುವಟಿಕೆಗಳ ತಾಣವಾಗಿರುವುದು ಪ್ರಜ್ಞಾವಂತರಲ್ಲಿ ಬೇಸರ ಮೂಡಿಸಿದೆ.

ಬಳಕೆಗೆ ಬಾರದಷ್ಟು ಅದ್ವಾನ :

ಉದ್ಯಾನವನಕ್ಕೆ ಸುತ್ತಲೂ ಕಾಂಪೌಂಡ್ ಕೂಡ ಇದೆ. ಕೂರಲು ಆಸನಗಳನ್ನು ಹಾಕಲಾಗಿದೆ. ಅವು ಅನಾಥವಾಗಿ ಅವುಗಳ ಸುತ್ತಲೂ ಗಲೀಜಿನದ್ದೆ ಕಾರುಬಾರಾಗಿದೆ. ವಾಕಿಂಗ್ ಟ್ರ್ಯಾಕ್ ಗಳಿವೆ. ಆದರೆ ನಿರ್ವಹಣೆ ಇಲ್ಲದೆ ಹುಲ್ಲಿನಡಿ ಮುಚ್ಚಿ ಹೋಗಿವೆ. ಅರಣ್ಯ ಇಲಾಖೆಯವರು ಗಿಡ ನೆಟ್ಟಿದ್ದಾರಂತೆ, ಆದರೆ ಅವುಗಳ ಪಾತಿಗಳೂ ಇಲ್ಲವಾಗಿವೆ. ವ್ಯಾಯಾಮ ಮಾಡಲು ಉಪಕರಣಗಳನ್ನು ಜೋಡಿಸಲಾಗಿದ್ದು, ತುಕ್ಕು ಹಿಡಿಯುವ ಹಂತ ತಲುಪಿವೆ. ಕೊಳವೆ ಬಾವಿಯನ್ನೂ ಕೊರೆಸಲಾಗಿದ್ದು, ನೀರಿನ ಸಂಗ್ರಹಗಾರವೂ ಇದೆ. ಇದಾವುದರ ನಿರ್ವಹಣೆ ಇಲ್ಲದೆ ಕಾರಣ ಎಲ್ಲವೂ ಬಳಕೆಗೆ ಬಾರದಷ್ಟು ಅದ್ವಾನವಾಗಿ ಉದ್ಯಾನವನ ಪಾಳು ಬಿದ್ದಿದೆ. ಮಳೆ ನೀರು ಇಂಗುವ ವ್ಯವಸ್ಥೆಯನ್ನೂ ಮಾಡಿಲ್ಲ.

Park1

ಜಿಲ್ಲಾಧಿಕಾರಿಯವರ ಗಮನಕ್ಕೆ ತಂದರೂ ಪ್ರಯೋಜವಾಗಲಿಲ್ಲ:

ಈ ಉದ್ಯಾನವನವನ್ನು ಸಮರ್ಪಕ ರೀತಿಯಲ್ಲಿ ನಿರ್ವಹಣೆ ಮಾಡಿ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಾಡಬೇಕೆಂದು ಜಿಲ್ಲಾಧಿಕಾರಿಯವರಿಗೆ ಜನತಾದರ್ಶನ ಸೇರಿದಂತೆ ಹಲವು ಬಾರಿ ನಾಗರೀಕರು ಮನವಿ ಸಲ್ಲಿಸಿದ್ದರು. ಈ ಬಗ್ಗೆ ಜಿಲ್ಲಾಧಿಕಾರಿಯವರು ಪುರಸಭೆಯ ಮುಖ್ಯಾಧಿಕಾರಿಗಳಿಗೂ ಮೌಖಿಕವಾಗಿ ಉದ್ಯಾನವನದ ನಿರ್ವಹಣೆ ಮಾಡುವಂತೆ ಸೂಚಿಸಿದ್ದರಾದರೂ, ಯಾವುದೇ ಕ್ರಮಕೈಗೊಳ್ಳದೆ ಮತ್ತಷ್ಟು ಅದ್ವಾನವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಬಾಗೇಪಲ್ಲಿ ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್‌, ಪುರಸಭೆಯ ವ್ಯಾಪ್ತಿಯಲ್ಲಿ ಸಿಬ್ಬಂದಿ ಕೊರತೆ ಇದ್ದು, ಇರುವವರೊಂದಿಗೆ ಗರಿಷ್ಠ ಪ್ರಮಾಣದಲ್ಲಿ ನಾಗರೀಕರ ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತಿದೆ. ತುರ್ತು ಸಮಸ್ಯೆಗಳ ಪರಿಹಾರಕ್ಕೆ ಒತ್ತು ನೀಡಲಾಗುತ್ತಿದ್ದು, ಹಂತಹಂತವಾಗಿ ಉದ್ಯಾನವನಗಳನ್ನು ಸಮರ್ಪಕ ರೀತಿಯಲ್ಲಿ ನಿರ್ವಹಣೆ ಮಾಡಲಾಗುತ್ತದ ಎನ್ನುತ್ತಾರೆ.

ಉದ್ಯಾವನಗಲ ಅಸಮರ್ಪಕ ನಿರ್ವಹಣೆ ಕುರಿತು ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಸೋಮಶೇಖರ್‌ ಪ್ರತಿಕ್ರಿಯಿಸಿ, ಡಾ.ಎಚ್.ಎನ್.ನರಸಿಂಹಯ್ಯ ಉದ್ಯಾನವನವನ್ನು ಸಮರ್ಪಕ ರೀತಿಯಲ್ಲಿ ನಿರ್ವಹಣೆ ಮಾಡದೇ ನಿರ್ಲಕ್ಷ್ಯದಿಂದ ಅದ್ವಾನವಾಗಿದೆ. ಇದರ ಬಗ್ಗೆ ಕೂಡಲೇ ಕ್ರಮ ಜರುಗಿಸಬೇಕು. ಪುರಸಭೆಯಲ್ಲಿ ಸಿಬ್ಬಂದಿ ಕೊರತೆಯಿದ್ದು, ಕೂಡಲೇ ನೇಮಕ ಮಾಡಲು ಸ್ಥಳೀಯ ಶಾಸಕರು ಹಾಗೂ ಜಿಲ್ಲಾಧಿಕಾರಿಯವರು ಕ್ರಮ ಕೈಗೊಳ್ಳಬೇಕು. ನಾಗರೀಕರ ಸಮಸ್ಯೆಗಳ ಪರಿಹಾರಕ್ಕೆ ಒತ್ತು ಕೊಡಬೇಕು. ಇಲ್ಲವಾದರೆ ಪುರಸಭೆಯ ಮುಂದೆ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

(ವರದಿ : ರಾ.ನ ಗೋಪಾಲರೆಡ್ಡಿ, ಬಾಗೇಪಲ್ಲಿ)

WhatsApp Image 2024 08 09 at 11.58.31 de404b09
+ posts

ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಜಿಲ್ಲಾ ಸಂಯೋಜಕರು. ಪತ್ರಕರ್ತ, ಪರಿಸರ ಪ್ರೇಮಿ.

ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಜ್ಜರಹಳ್ಳಿ ಗ್ರಾಮದವರು. 

ಪೋಸ್ಟ್ ಹಂಚಿಕೊಳ್ಳಿ:

ವಿಜಯ್‌ ಕುಮಾರ್ ಗಜ್ಜರಹಳ್ಳಿ
ವಿಜಯ್‌ ಕುಮಾರ್ ಗಜ್ಜರಹಳ್ಳಿ
ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಜಿಲ್ಲಾ ಸಂಯೋಜಕರು. ಪತ್ರಕರ್ತ, ಪರಿಸರ ಪ್ರೇಮಿ. ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಜ್ಜರಹಳ್ಳಿ ಗ್ರಾಮದವರು. 

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...