ಚಿಕ್ಕಬಳ್ಳಾಪುರ | ಸಚಿವ ಸುಧಾಕರ್‌ ಉಡುಗೊರೆ ನೀಡಿದ್ದ ಗ್ಯಾಸ್‌-ಸ್ಟೌ ಸ್ಫೋಟ

Date:

  • ಚುನಾವಣೆಗೂ ಮುನ್ನ ಕ್ಷೇತ್ರ ಜನರಿಗೆ ಗ್ಯಾಸ್‌-ಸ್ಟೌ ಹಂಚಿಕೆ
  • ಸ್ಪೋಟಗೊಂಡಾಗ ಸ್ಥಳದಲ್ಲಿ ಯಾರು ಇಲ್ಲದಿದ್ದರಿಂದ ತಪ್ಪಿದ ಅನಾಹುತ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾರರನ್ನು ಸೆಳೆಯಲು ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ವಿತರಿಸಿದ್ದ ತಮ್ಮ ಭಾವಚಿತ್ರವಿರುವ ಗ್ಯಾಸ್‌-ಸ್ಟೌ ಸ್ಫೋಟಗೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಪುರ ಗ್ರಾಮದಲ್ಲಿ ಘಟನೆ ನಡೆಸಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ಮಹಿಳಾ ಮತದಾರರನ್ನು ಸೆಳೆಯುವ ಉದ್ದೇಶದಿಂದ ಚುನಾವಣೆ ಘೋಷಣೆಗೂ ಮುನ್ನವೇ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮನೆ-ಮನೆಗೂ ಡಾ. ಕೆ ಸುಧಾಕರ್‌ ಭಾವಚಿತ್ರವಿರುದ ಗ್ಯಾಸ್‌-ಸ್ಟೌ ಹಂಚಲಾಗಿತ್ತು. 

ಪುರ ಗ್ರಾಮದ ವೆಂಕಟೇಶ್ ಎಂಬುವರ ಪತ್ನಿ ಸ್ಟೌ ಮೇಲೆ ಬೇಳೆ ಬೇಯಿಸಲು ಇಟ್ಟು ಹೊರಗಡೆ ಕೆಲಸದಲ್ಲಿ ನಿರತರಾಗಿದ್ದರು. ಕೆಲವು ಸಮಯದ ಬಳಿಕ ಅಡುಗೆ ಮನೆಯಿಂದ ಸ್ಫೋಟದ ಸದ್ದು ಕೇಳಿದೆ. ಒಳಹೋಗಿ ನೋಡಿದಾಗಿ ಸ್ಟೌ ಸಿಡಿದು ಛಿದ್ರಗೊಂಡಿತ್ತು. ಅದರ ಮೇಲೆ ಇಟ್ಟಿದ್ದ ಕುಕ್ಕರ್ ಕೆಳಗೆ ಬಿದ್ದಿತ್ತು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೀವು ಉಡುಗೊರೆಯಾಗಿ ಕೊಟ್ಟ ಕಳಪೆ ಸ್ಟೌನಿಂದ ಪ್ರಾಣಕ್ಕೆ ತೊಂದರೆಯಾಗಿದ್ದರೆ ಯಾರು ಜವಾಬ್ದಾರಿ? ಎಂದು ವೆಂಕಟೇಶ್ ಅವರು ಕೆ ಸುಧಾಕರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?  ಚುನಾವಣೆ 2023 | ಪದ್ಮನಾಭನಗರದಲ್ಲಿ ಆರ್ ಅಶೋಕ್‌ ವಿರುದ್ಧ ಡಿಕೆ ಸುರೇಶ್‌ ಕಣಕ್ಕೆ?

ಸ್ಟೌ ಸ್ಫೋಟಗೊಂಡ ಬಳಿಕ ಅದರ ಚಿತ್ರ ‌ಮತ್ತು‌ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ತಕ್ಷಣ ಬಿಜೆಪಿ ಸ್ಥಳೀಯ ಮುಖಂಡರು ಮತ್ತು ಅಭ್ಯರ್ಥಿ ಡಾ. ಕೆ ಸುಧಾಕರ್‌ ಫೌಂಡೇಶನ್ ಕಡೆಯುವರು ಸ್ಫೋಟವಾಗಿದ್ದ ಸ್ಟೌ ಕೊಂಡೊಯ್ದಿದ್ದಾರೆ.

‌ಘಟನೆಯಿಂದ ಭಯಗೊಂಡಿರುವ ಗ್ರಾಮದ ಮಹಿಳೆಯರು ತಮ್ಮ ಮನೆಗಳಿಗೂ ಉಡುಗೊರೆಯಾಗಿ ನೀಡಿದ್ದ ಸ್ಟೌಗಳ ಬಳಕೆಗೆ ಹಿಂಜರಿಯುತ್ತಿದ್ದಾರೆ. ಕಳಪೆ ಸ್ಟೌ ಕೊಟ್ಟ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...