ಗುಬ್ಬಿಯಲ್ಲಿ ಜು.7 ರಂದು ಅದ್ದೂರಿ ದಿಂಡಿ ಉತ್ಸವ

Date:

ಆಷಾಢ ಮಾಸದ ಏಕಾದಶಿ ಹಿನ್ನಲೆ ಜುಲೈ 6 ಮತ್ತು 7 ರಂದು ಶ್ರೀ ರುಖ್ಖುಮಾಯಿ, ಶ್ರೀ ಪಾಂಡುರಂಗಸ್ವಾಮಿ ಅವರ 21 ನೇ ವರ್ಷದ ದಿಂಡಿ ಉತ್ಸವ ಕಾರ್ಯಕ್ರಮವನ್ನು ಪಟ್ಟಣದ ಭಾವಸಾರ ಕ್ಷತ್ರಿಯ ಸಮಾಜದಿಂದ ಆಯೋಜನೆ ಮಾಡಲಾಗಿದೆ. ಈ ಹಿನ್ನಲೆ ಸುಮಾರು 20 ಲಕ್ಷ ವೆಚ್ಚದ ಅದ್ದೂರಿ ದಿಂಡಿ ಉತ್ಸವ ವ್ಯವಸ್ಥೆ ಮಾಡಿದ ದಾನಿಗಳಾದ ನಾಗರತ್ನಬಾಯಿ ಜ್ಞಾನೇಶ್ವರರಾವ್ ಅವರು 21 ಅಡಿ ಎತ್ತರದ ಶ್ರೀ ಪಾಂಡುರಂಗ ಸ್ವಾಮಿ ಹಾಗೂ ರುಖ್ಖುಮಾಯಿ ಕಟೌಟ್ ಬಸ್ ಸ್ಟ್ಯಾಂಡ್ ಬಳಿ ನಿಲ್ಲಿಸಿ ಹಾಲಿನ ಅಭಿಷೇಕ ನಡೆಸಲಿದ್ದಾರೆ ಎಂದು ಭಾವಸಾರ ಕ್ಷತ್ರಿಯ ಸಮಾಜದ ಅಧ್ಯಕ್ಷ ವಾಸುದೇವ ರಾವ್ ತಿಳಿಸಿದರು.

ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಎರಡು ದಿನಗಳ ಧಾರ್ಮಿಕ ಕಾರ್ಯಕ್ರಮದಲ್ಲಿ ಜುಲೈ.6 ರಂದು ಬೆಳಿಗ್ಗೆ 10 ಕ್ಕೆ ವಿಷ್ಣು ಸಹಸ್ರನಾಮ, ಕುಂಕುಮಾರ್ಚನೆ, ಅಷ್ಟೋತ್ತರ ಪೂಜೆ ನಡೆಸಲಾಗುವುದು. ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ನಡೆಸಿ ದಾನಿಗಳಿಂದ ಪ್ರಸಾದ ವಿನಿಯೋಗ ಮಾಡಲಾಗುವುದು ಎಂದು ತಿಳಿಸಿದರು.

ಪ್ರತಿ ವರ್ಷ ಮೆರವಣಿಗೆ ಸೇವೆ ನಡೆಸಿರುವ ದಾನಿಗಳಾದ ನಾಗರತ್ನ ಬಾಯಿ ಹಾಗೂ ಅವರ ಮಕ್ಕಳು ಲಕ್ಷಾಂತರ ಹಣ ದೇವರ ಕಾರ್ಯಕ್ಕೆ ಬಳಸಿದ್ದಾರೆ. ಅದ್ದೂರಿ ಮೆರವಣಿಗೆ ಪಟ್ಟಣದಲ್ಲಿ ಇತಿಹಾಸ ಸೃಷ್ಟಿಸಿದೆ. ಈ ಬಾರಿ 21 ಅಡಿಗಳ ಕಟೌಟ್ ಅತ್ಯಾಕರ್ಷಕವಾಗಲಿದೆ. ಈ ಜೊತೆಗೆ ಶ್ರೀ ಜ್ಞಾನೇಶ್ವರಿ ಪಾರಾಯಣ ಮತ್ತು ಭಜನೆ ಕೀರ್ತನೆ ನಡೆಸಲಾಗುವುದು. ಭಾವಸಾರ ಕ್ಷತ್ರಿಯ ಸಮಾಜದ ರಾಜ್ಯ ಘಟಕದ ಡಾ.ಸೂರ್ಯ ನಾರಾಯಣರಾವ್, ಗುರುಪ್ರಸಾದ್ ಪಿಸ್ಸೆ ಹಾಗೂ ಸತ್ಯನಾರಾಯಣ್ ಅವರಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜುಲೈ.7 ರಂದು ಬೆಳಿಗ್ಗೆ ಪೂಜಾ ಕೈಂಕರ್ಯ ನೆರವೇರಿಸಿ ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ನಡೆಸಿ ದಾನಿಗಳಿಂದ ಪ್ರಸಾದ ವಿನಿಯೋಗ ನಡೆಯಲಿದೆ. ನಂತರ ಶ್ರೀ ಪಾಂಡುರಂಗಸ್ವಾಮಿ ಶ್ರೀ ರುಕ್ಮಿಣಿ ದೇವಿಯ ಅದ್ದೂರಿ ಮೆರವಣಿಗೆ ಊರಿನ ರಾಜ ಬೀದಿಗಳಲ್ಲಿ ಹೆಸರಾಂತ ಬೆಳ್ತಂಗಡಿ ಸಾಂಸ್ಕೃತಿಕ ಕಲಾ ಮೇಳದೊಂದಿಗೆ ಜರುಗಲಿದೆ. ಮುಖ್ಯ ಕೀರ್ತನಾಕಾರ ಧನಂಜಯ ಗುರೂಜಿ ಅವರು ಕೀರ್ತನೆ ಹಾಡಲಿದ್ದಾರೆ ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...