ಹಾಸನ | ಕಾಡಾನೆಗಳ ದಾಂದಲೆ; ಅಪಾರ ಪ್ರಮಾಣದಲ್ಲಿ ಕಾಫಿ-ಮೆಣಸಿನ ಬೆಳೆ ಹಾನಿ

Date:

  • 17 ಕಾಡಾನೆಗಳ ಹಿಂಡು ದಾಳಿ – ಮರಿ ಆನೆಗಳ ಚಿನ್ನಾಟ
  • ಜಮ್ಮನಹಳ್ಳಿಯ ನಾಗರಾಜ್‌, ವಿಶ್ವನಾಥ್‌ ಅವರ ಕಾಫಿ ತೋಟಕ್ಕೆ ದಾಳಿ

ಕಾಡಾನೆಗಳ ಹಿಂಡು ಕಾಫಿ ತೋಟದಲ್ಲಿ ದಾಂದಲೆ ನಡೆಸಿದ್ದು, ಲಕ್ಷಾಂತರ ಮೌಲ್ಯದ ಕಾಫಿ-ಮೆಣಸಿನ ಬೆಳೆ ನಾಶವಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಜಮ್ಮನಹಳ್ಳಿಯ ನಾಗರಾಜ್‌ ಮತ್ತು ವಿಶ್ವನಾಥ್‌ ಎಂಬುವರ ಕಾಫಿ ತೋಟಕ್ಕೆ 17 ಕಾಡಾನೆಗಳ ಹಿಂಡು ಬುಧವಾರ ರಾತ್ರಿ ಲಗ್ಗೆ ಇಟ್ಟಿವೆ. ಮರಿ ಆನೆಗಳನ್ನು ಹೊಂದಿರುವ ಕಾಡಾನೆಗಳ ಗುಂಪು ಹೂವು ಬಿಟ್ಟಿರುವ ಕಾಫಿ ಗಿಡಗಳು, ಮೆಣಸಿನಬಳ್ಳಿ, ನೀರಿನ ಪೈಪ್‌ ಇತ್ಯಾದಿಗಳನ್ನು ನಾಶ ಮಾಡಿವೆ. ಕಾಫಿ ತೋಟಕ್ಕೆ ಸೋಲಾರ್‌ ಬೇಲಿ ಇಲ್ಲದ್ದರಿಂದ ಕಾಡಾನೆಗಳು ತೋಟಕ್ಕೆ ನುಗ್ಗಿವೆ ಎನ್ನಲಾಗಿದೆ.

ಕೆಲವು ವರ್ಷಗಳಿಂದ ಸಕಲೇಶಪುರ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಬಹುತೇಕರು ಬೆಳೆ ಬೆಳೆಯುವುದನ್ನೇ ಬಿಟ್ಟಿದ್ದಾರೆ. ಅನೇಕ ಕಡೆ ಹೊಲಗದ್ದೆಗಳು ಇಂದಿಗೂ ಪಾಳುಬಿದ್ದಿವೆ. ಒಂದು ವೇಳೆ ಧೈರ್ಯ ಮಾಡಿ ಬೆಳೆ ಬೆಳೆದರೂ ಫಸಲನ್ನು ರಕ್ಷಿಸಿಕೊಂಡು, ಕೈಗೆ ತೆಗೆದುಕೊಳ್ಳಲು ಹರಸಾಹಸಪಡಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಕೋಳಿ ಸಾಂಬರ್‌ಗಾಗಿ ಜಗಳ; ಮಗನನ್ನೇ ಹತ್ಯೆಗೈದ ತಂದೆ

ಕಾಡಾನೆ ಹಾವಳಿಯಿಂದ ಉಂಟಾಗುವ ಬೆಳೆ ಹಾನಿಗೆ ಅರಣ್ಯ ಇಲಾಖೆಯಿಂದ ಸಿಗುವ ಪರಿಹಾರ ತೀರ ಕಡಿಮೆ. ಜೊತೆಗೆ ತ್ವರಿತವಾಗಿಯೂ ಸಿಗುವುದಿಲ್ಲ. ಹಾಗಾಗಿ ಮಲೆನಾಡು ಭಾಗದ ರೈತರು ಮತ್ತು ಬೆಳೆಗಾರರು ಕಾಡಾನೆ ಸಮಸ್ಯೆಯಿಂದಾಗಿ ಹೈರಾಣಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...