ಶ್ರೀರಂಗಪಟ್ಟಣ |ಹೋರಾಟದ ಹಾದಿಯಲ್ಲಿ ಪ್ರತಿರೋಧದ ಕೊಂಡಿಯೊಂದು ಕಳಚಿ ಬಿದ್ದಿದೆ: ಪ್ರಿಯಾ ರಮೇಶ್

Date:

ಹೋರಾಟದ ಹಾದಿಯಲ್ಲಿ ಪ್ರತಿರೋಧದ ಕೊಂಡಿಯೊಂದು ಕಳಚಿ ಬಿದ್ದಿದೆ. ಲಿಂಗೇಗೌಡರು ಹೋರಾಟದ ಹಾದಿಯಲ್ಲಿ ನಿಧನರಾಗಿದ್ದಾರೆ. ಸರಕಾರಗಳು ಮಾಡುವ ಭ್ರಷ್ಟ ಅವ್ಯವಹಾರಗಳನ್ನು ಹೊರತಂದು ಜನರಿಗೆ ತಿಳಿಸುವ ಕೆಲಸವನ್ನು ಹೋರಾಟಗಾರರಾಗಿ ಮಾಡುತ್ತಿದ್ದರು. ನಮ್ಮಂತ ಹೋರಾಟಗಾರರಿಗೆ ಸ್ಪೂರ್ತಿಯಾಗಿದ್ದರು. ಈಗ ಶೂನ್ಯ ಆವರಿದೆ ಎಂದು ಪ್ರಿಯಾ ರಮೇಶ್ ದುಃಖ ವ್ಯಕ್ತಪಡಿಸಿದರು.

IMG 20241213 WA0032

ಅವರು ಶ್ರೀರಂಗಪಟ್ಟಣದ ಬಸ್ ನಿಲ್ದಾಣ ವೃತ್ತದ ಬಳಿ ಶುಕ್ರವಾರ ಪ್ರಜ್ಞಾವಂತರ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಹೋರಾಟದಲ್ಲಿ ಅಗಲಿದ ಕೆಆರ್‌ಎಸ್ ಪಕ್ಷದ ರಾಜ್ಯ ಕಾರ್ಯಧ್ಯಕ್ಷರಾದ ಎಸ್.ಹೆಚ್. ಲಿಂಗೇಗೌಡರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹೋರಾಟದ ಕೊಂಡಿಗಳು ಕಳಚಿಕೊಂಡಂತೆ ಸಮಾಜ ಅವ್ಯವಸ್ಥೆಯತ್ತ ಸಾಗುತ್ತದೆ. ಅದ್ದರಿಂದ ಒಬ್ಬ ಹೋರಾಟಗಾರ ನಿಧನರಾದಾಗ ದಿಕ್ಕೆಡದೆ ಅವರ ಹೋರಾಟದಿಂದ ಸ್ಪೂರ್ತಿ ಪಡೆದು ಮುನ್ನಡೆಯಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮಂಡ್ಯ | ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋಗಿದ್ದ ತಂದೆಯೂ ಅರೆಸ್ಟ್‌!

ಅತ್ಯಾಚಾರ ಆರೋಪದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ಮಾಡಬೇಕು ಮತ್ತು ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ಆಗಬೇಕು. ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿಗೆ ಭೇಟಿಯಾಗಿ ಮನವಿ ನೀಡಲು ಮಂಗಳೂರಿನಿಂದ ದೆಹಲಿಗೆ ತಂಡ ಹೊರಟಿತ್ತು. ಆ ತಂಡಕ್ಕೆ ನೈತಿಕ ಬೆಂಬಲ ನೀಡಲು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರೂ ಹೋದಾಗ ಈ ದುರಂತ ಸಂಭವಿಸಿದೆ. ಆಗಬಾರದಿತ್ತು ಇದು ದುರಂತದ ಸಂಗತಿ ಎಂದು ವಿಷಾದಿಸಿದರು.

ಈ ಹೋರಾಟವನ್ನು ನಮ್ಮಂತ ಸಂಘಟನೆಗಳು ಕೈಗೆತ್ತಿಕೊಂಡು ಮುನ್ನಡೆಸಬೇಕು. ಈ ನಿಧನಕ್ಕೆ ಶ್ರೀರಂಗಪಟ್ಟಣದ ಪ್ರಜ್ಞಾವಂತರ ವೇದಿಕೆ ತೀವ್ರ ದುಃಖ ವ್ಯಕ್ತಪಡಿಸುತ್ತದೆ ಮತ್ತು ಮೃತರ ಕುಟುಂಬಕ್ಕೆ ಸಂತಾಪಗಳನ್ನು ಸಲ್ಲಿಸುತ್ತದೆ ಎಂದರು.

ಇದನ್ನು ನೋಡಿದ್ದೀರಾ? ಸಾಹಿತ್ಯ ಸಮ್ಮೇಳನದಲ್ಲಿ ನಾನ್ ವೆಜ್ ಇರಲೇಬೇಕಾ?

ಈ ಸಭೆಯಲ್ಲಿ ಲಿಂಗೇಗೌಡರ ಭಾವಚಿತ್ರಕ್ಕೆ ಪ್ರಜ್ಞಾವಂತರ ವೇದಿಕೆಯ ಎಲ್ಲಾ ಸದಸ್ಯರು ಪುಷ್ಪಾರ್ಚನೆ ಮಾಡಿದರು. ಒಂದು ನಿಮಿಷ ಮೌನ ಆಚರಿಸಿ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಪ್ರಜ್ಞಾವಂತರ ವೇದಿಕೆಯ ಸಂಚಾಲಕರಾದ ವೆಂಕಟೇಶ್, ಚಿಕ್ಕತಮ್ಮೇಗೌಡ, ರಾಜ್ಯ ರೈತ ಸಂಘದ ಪಾಂಡು, ಕೆಆರ್‌ಎಸ್ ಪಾರ್ಟಿಯ ಮಲ್ಲೇಶ್ ಹಾಗೂ ಇನ್ನಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...